ಭಾರತೀಯ ನಾಯಕನಿಂದ ಇದನ್ನು ನಿರೀಕ್ಷೆ ಮಾಡುವುದಿಲ್ಲ: ಕೊಹ್ಲಿ ವಿರುದ್ಧ ಗರಂ ಆದ ಗೌತಿ


Team Udayavani, Jan 14, 2022, 12:22 PM IST

Gautam Gambhir Blasts Virat Kohli For His Stump Mic Reaction

ಕೇಪ್ ಟೌನ್: ಇಲ್ಲಿನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗುತ್ತಿದೆ. ದಕ್ಷಿಣ ಆಫ್ರಿಕಾ ಸರಣಿ ಗೆಲುವಿನತ್ತ ಸಾಗುತ್ತಿದ್ದರೆ, ಹರಿಣಗಳನ್ನು ತಡೆಯಲು ಟೀಂ ಇಂಡಿಯಾ ರಣತಂತ್ರ ರೂಪಿಸಿದೆ.

ಗುರುವಾರದ ಆಟದಲ್ಲಿ ವಿರಾಟ್ ಕೊಹ್ಲಿ ಡಿಆರ್ ಎಸ್ ವಿವಾದ ಹೆಚ್ಚು ಸದ್ದು ಮಾಡಿದೆ. ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ವೇಳೆ ಅಶ್ವಿನ್ ಎಸೆತದಲ್ಲಿ ಡೀನ್ ಎಲ್ಗರ್ ಎಲ್ ಬಿ ಬಲೆಗೆ ಬಿದ್ದರು. ಅಂಪೈರ್ ಎರಾಸ್ಮಸ್ ಕೂಡಾ ಔಟ್ ನೀಡಿದರು. ಆದರೆ ಡೀನ್ ಎಲ್ಗರ್ ರಿವೀವ್ ತೆಗೆದುಕೊಂಡರು. ರಿವೀವ್ ನಲ್ಲಿ ನೋಡಿದಾಗ ಬಾಲ್ ವಿಕೆಟ್ ಗಿಂತ ಮೇಲೆ ಹೋಗಿರುವುದು ಕಂಡಿತ್ತು. ಹೀಗಾಗಿ ಅಂಪೈರ್ ನಾಟೌಟ್ ತೀರ್ಪು ನೀಡಬೇಕಾಯಿತು.

ಮೂರನೇ ಅಂಪೈರ್ ನಿರ್ಧಾರಕ್ಕೆ ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್ ಸೇರಿದಂತೆ ಭಾರತೀಯ ಆಟಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸ್ಟಂಪ್ ಮೈಕ್ ಬಳಿ ತೆರಳಿದ ನಾಯಕ ವಿರಾಟ್, “ನಿಮ್ಮ ತಂಡದ ಮೇಲೂ ಫೋಖಸ್ ಮಾಡಿ, ಎದುರಾಳಿಯ ಮೇಲೆ ಮಾತ್ರವಲ್ಲ.” ಎಂದು ಬ್ರಾಡ್ ಕಾಸ್ಟ್ ಚಾನಲ್ ಸೂಪರ್ ಸ್ಪೋರ್ಟ್ಸ್ ವಿರುದ್ಧ ವಾಗ್ದಾಳಿ ನಡೆಸಿದರು. “ಹನ್ನೊಂದು ಮಂದಿಯ ವಿರುದ್ಧ ಸಂಪೂರ್ಣ ದೇಶ ಆಡುತ್ತಿದೆ” ಎಂದು ರಾಹುಲ್ ಹೇಳಿದರೆ, “ ನೀವು ಜಯ ಗಳಿಸಲು ಉತ್ತಮ ವಿಧಾನವನ್ನು ಹುಡುಕಬೇಕು ಸೂಪರ್ ಸ್ಪೋರ್ಟ್” ಎಂದು ಅಶ್ವಿನ್ ಕೂಗಾಡಿದರು.

ವಿರಾಟ್ ಕೊಹ್ಲಿಯ ಈ ನಡೆಗೆ ಮಾಜಿ ಆಟಗಾರ ಗೌತಮ್ ಗಂಭೀರ್ ಗರಂ ಆಗಿದ್ದಾರೆ. ಸ್ಟಾರ್ ಸ್ಪೋರ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಗಂಭೀರ್, “ಇದು ಒಳ್ಳೆಯದಲ್ಲ. ಸ್ಟಂಪ್ ಮೈಕ್ ನ ಹತ್ತಿರ ಹೋಗಿ ಈ ರೀತಿ ಹೇಳಿರುವುದು ಸಭ್ಯತೆಯಲ್ಲ. ಇದು ಅಪ್ರಬುದ್ಧ ನಡೆ. ಭಾರತೀಯ ನಾಯಕನ ಬಳಿ ನಾವು ಇದನ್ನು ನಿರೀಕ್ಷೆ ಮಾಡುವುದಿಲ್ಲ” ಎಂದಿದ್ದಾರೆ.

ಇದನ್ನೂ ಓದಿ:ಗೆಲ್ಲಲು ಉತ್ತಮ ಮಾರ್ಗ ಹುಡುಕಿ..: ಡಿಆರ್ ಎಸ್ ನಿರ್ಧಾರಕ್ಕೆ ಕೊಹ್ಲಿ ತೀವ್ರ ಅಸಮಾಧಾನ

212 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ದಿನದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದೆ. ಗೆಲುವಿಗೆ ಇನ್ನು 111 ರನ್ ಅಗತ್ಯವಿದೆ. ಕೀಗನ್ ಪೀಟರ್ಸನ್ ಕ್ರೀಸ್ ನಲ್ಲಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.