ಶಾಸ್ತ್ರಿ ಸಾಧನೆಯನ್ನು ಪ್ರಶ್ನಿಸಿದ ಗಂಭೀರ್
Team Udayavani, Dec 16, 2018, 6:15 AM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ಕ್ರಿಕೆಟ್ ಜೀವನಕ್ಕೆ ವಿದಾಯ ತಿಳಿಸಿದ ಗೌತಮ್ ಗಂಭೀರ್ ವಿದಾಯ ತಿಳಿಸಿದ ಕ್ಷಣದಿಂದಲೇ ಒಂದಲ್ಲ ಒಂದು ವಿಚಾರದ ಬಗ್ಗೆ ಸಿಡಿಮಿಡಿಗೊಳ್ಳುತ್ತಿದ್ದಾರೆ. ಸದ್ಯ ಭಾರತ ಕ್ರಿಕೆಟ್ ತಂಡದ ಪ್ರಮುಖ ಕೋಚ್ ರವಿಶಾಸ್ತ್ರಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್ ರವಿಶಾಸ್ತ್ರಿಯ ಸಾಧನೆಯನ್ನು ಪ್ರಶ್ನಿಸಿದ್ದಾರೆ.
ಕಳೆದ 15 ವರ್ಷಗಳಲ್ಲಿ ವಿದೇಶಿ ನೆಲದಲ್ಲಿ ಈಗೀರುವ ಭಾರತೀಯ ತಂಡ ಉತ್ತಮವಾದುದು ಎಂದು ರವಿಶಾಸ್ತ್ರಿ ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರಿಸಿದ ಗೌತಮ್ ಗಂಭೀರ್ “ಇಂಥ ಹೇಳಿಕೆಗಳನ್ನು ನೀಡುವುದರಿಂದ ಜನರು ಏನ್ನನೂ ಜಯಿಸುವುದಿಲ್ಲ. ಆಸ್ಟ್ರೇಲಿಯದಲ್ಲಿ ವಿಶ್ವ ಚಾಂಪಿಯನ್ಶಿಪ್ ಜಯಿಸಿರುವುದು ಬಿಟ್ಟರೇ ಶಾಸ್ತ್ರಿ ಏನು ಸಾಧನೆ ಮಾಡಿದ್ದಾರೆ ಎಂಬ ಬಗ್ಗೆ ನನಗೆ ತಿಳಿಯುತ್ತಿಲ್ಲ. ವಿದೇಶಗಳಲ್ಲಿ ಸರಣಿ ಗೆಲ್ಲುವ ತಂಡದಲ್ಲಿ ಅವರಿರಲಿಲ್ಲ ಎಂದು ಭಾವಿಸುತ್ತೇನೆ. ನೀವಾಗಿ ಏನೂ ಜಯಿಸದೇ ಇದ್ದಾಗ, ಈ ರೀತಿಯ ಹೇಳಿಕೆಗಳನ್ನು ನೀಡಿ ಮುಗಿಸುತ್ತೀರಿ. ಜನರು ಈ ಹೇಳಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿಳಿದಿದ್ದೇನೆ. ಶಾಸ್ತ್ರಿ ಗೆ ಕ್ರಿಕೆಟ್ ಅನುಭವ ಕಡಿಮೆ ಎಂದು ನನಗೆ ಗೊತ್ತಿದೆ. ಒಂದು ವೇಳೆ ಅವರಲ್ಲಿ ಕ್ರಿಕೆಟ್ ಅನುಭವ ಹೆಚ್ಚಿರುತ್ತಿದ್ದರೇ, ಇಂಥ ಹೇಳಿಕೆಗಳನ್ನು ನೀಡುತ್ತಿರಲಿಲ್ಲ’ ಎಂದು ಕಟುವಾಗಿ ಟೀಕಿಸಿದ್ದಾರೆ.
“ಇದೊಂದು ಬಾಲಿಶ ನಡೆ. 4-1 ಅಂತರದಿಂದ ಸರಣಿ ಜಯಿಸಿದರೂ, ವಿದೇಶಕ್ಕೆ ಪಯಣ ಬೆಳೆಸುವ ಭಾರತದ ತಂಡದಲ್ಲಿ ಈಗೀರುವ ತಂಡವೇ ಉತ್ತಮ ತಂಡ ಎಂದು ಹೇಳಲು ಸಾಧ್ಯವಿಲ್ಲ. ನಾವು ಎಂದಿಗೂ ವಿನಮ್ರವಾಗಿರಬೇಕು ಹಾಗೂ ಇದೇ ರೀತಿಯ ಆಟವಾಡಿ ತಂಡ ಬೆಳವಣಿಗೆಯನ್ನು ಮುಂದುವರಿಸುತ್ತೇವೆ. ಕಾರಣ ಬೇರೆಯವರ ಬಗ್ಗೆ ಗೊತ್ತಿಲ್ಲ ಈ ಹೇಳಿಕೆ ಪರಿಪಕ್ವವಲ್ಲದ ನಾನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’ ಎಂದು ಗಂಭೀರ್ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ