ಕಬಡ್ಡಿ ಸಂಸ್ಥೆಯಿಂದ ಗೆಹಲೋಟ್ ಪದಚ್ಯುತಿ
Team Udayavani, Aug 4, 2018, 6:00 AM IST
ಹೊಸದಿಲ್ಲಿ: ದೇಶದ ಕಬಡ್ಡಿ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದ ಭಾರೀ ಬದ ಲಾವಣೆಯಾಗಿದೆ. ದಿಢೀರ್ ಬೆಳವಣಿಗೆಯಲ್ಲಿ ಎಕೆಎಫ್ಐ (ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ) ಅಧ್ಯಕ್ಷೆ ಸ್ಥಾನದಿಂದ ಮೃದುಲಾ ಬದೌರಿಯಾ ಮತ್ತು ಆಜೀವ ಅಧ್ಯಕ್ಷ ಜನಾರ್ದನ್ ಸಿಂಗ್ ಗೆಹಲೋಟ್ ಅವರನ್ನು ದಿಲ್ಲಿ ಉಚ್ಚ ನ್ಯಾಯಾಲಯ ಶುಕ್ರವಾರ ಪದಚ್ಯುತಿ ಗೊಳಿಸಿದೆ. ಮಾತ್ರವಲ್ಲ ಮುಂದಿನ 3 ತಿಂಗಳ ಒಳಗಾಗಿ ಚುನಾವಣೆ ನಡೆಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸೂಚನೆ ನೀಡಿದೆ.
ಕಳೆದ 13 ವರ್ಷಗಳಿಂದ ವಿಚಾರಣೆಯಲ್ಲಿದ್ದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಒಳಗೊಂಡಿದ್ದ ಪೀಠ ವಿಚಾರಣೆ ನಡೆಸಿತು. ಗೆಹಲೋಟ್ ಆಜೀವ ಅಧ್ಯಕ್ಷ ಸ್ಥಾನ ಹೊಂದಿರುವುದು ಕಾನೂನು ಬಾಹಿರ. ಬದೌರಿಯಾ ಅವರು ಮೇ 19, 2013 ಮತ್ತು ಎ. 23, 2017ರಲ್ಲಿ ನಡೆಸಿದ ಆಡಳಿತ ಸಂಪೂರ್ಣವಾಗಿ ಅಸಿಂಧು. ಈ ಅವಧಿಯಲ್ಲಿ ಸರಕಾರದಿಂದ ಪಡೆದ ಅನುದಾನವನ್ನೆಲ್ಲ ಮತ್ತೆ ಹಿಂದಿರುಗಿಸಬೇಕು ಎಂದು ನ್ಯಾಯಾಲಯ ಚಾಟಿ ಬೀಸಿದೆ. ಜನಾರ್ಧನ್ ಸಿಂಗ್ ಗೆಹಲೋಟ್ ಮತ್ತು ಅವರ ಕುಟುಂಬ ದೇಶದ ಕಬಡ್ಡಿಯನ್ನು 28 ವರ್ಷಗಳಿಂದ ಹಿಡಿದಿಟ್ಟುಕೊಂಡಿದ್ದರು. ತಮಗೆ ಹೇಗೆ ಬೇಕೋ ಹಾಗೆ ಕಬಡ್ಡಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದರು.
ಆಡಳಿತಾಧಿಕಾರಿ ನೇಮಕ
ಬಿಸಿಸಿಐನಲ್ಲಿ ಅರಾಜಕತೆ ಸೃಷ್ಟಿಯಾಗಿದ್ದಾಗ ಸುಪ್ರೀಂ ಕೋರ್ಟ್ ಆಡಳಿತಾಧಿಕಾರಿ ನೇಮಕ ಮಾಡಿತ್ತು. ಇದೇ ಮಾದರಿಯಲ್ಲಿ ದಿಲ್ಲಿ ಹೈಕೋರ್ಟ್ ಕಬಡಿಡೂ ಆಡಳಿತಾಧಿಕಾರಿ ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಸನತ್ ಕೌಲ್ ಮುಂದಿನ ಎಕೆಎಫ್ಐ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?