ಅತ್ಯಾಚಾರಗಳಿಗೆ ಮೇರಿ ಕಾಮ್‌, ಸೈನಾ ಖಂಡನೆ


Team Udayavani, Apr 18, 2018, 6:55 AM IST

Mary-Kom,-Saina-Nehwal.jpg

ಹೊಸದಿಲ್ಲಿ: ರಾಜ್ಯಸಭಾ ಸಂಸದೆಯೂ ಆಗಿರುವ ಭಾರತದ ಅನುಭವಿ ಬಾಕ್ಸರ್‌ ಮೇರಿ ಕಾಮ್‌ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ಯಾಚಾರ ಕೃತ್ಯಗಳು ಬೆಳೆಯುತ್ತಿರುವುದನ್ನು ತೀವ್ರವಾಗಿ ಖಂಡಿಸಿರುವ ಅವರು ಇದೊಂದು “ನೋವಿನ ಮತ್ತು ಅಸಹಾಯಕ ಬೆಳವಣಿಗೆ’ ಎಂದಿದ್ದಾರೆ. ಸ್ಟಾರ್‌ ಶೆಟ್ಲರ್‌ ಸೈನಾ ನೆಹ್ವಾಲ್‌ ಅವರೂ ಹೆಚ್ಚುತ್ತಿರುವ ಅಘಾತಕಾರಿ ಬೆಳವಣಿಗೆಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

2012ರ ನಿರ್ಭಯಾ ಪ್ರಕರಣದ ಬಳಿಕ ಈಗ ಕಥುವಾ, ಉನ್ನಾವೊ ಪ್ರಕರಣಗಳು ಭಾರತದ ಗೌರವವ‌ನ್ನು ತಲೆ ತಗ್ಗಿಸುವಂತೆ ಮಾಡಿದೆ. ಜಮ್ಮು-ಕಾಶ್ಮೀರದ ಕಥುವಾದಲ್ಲಿ 8 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರವೆಸಗಿ ಕೊಂದಿರುವ ಪ್ರಕರಣ ಮತ್ತು ಉತ್ತರ ಪ್ರದೇಶದ ಉನ್ನಾವೋದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಎ ಕುಲದೀಪ್‌ ಸಿಂಗ್‌ ಸೇನ್‌ಗರ್‌ನನ್ನು ಬಂಧಿಸಲಾಗಿರುವ ಸುದ್ದಿ ದೇಶಾದ್ಯಂತ ಸದ್ದು ಮಾಡುತ್ತಿದೆ. ಉನ್ನಾವೋ ಸಂತ್ರಸ್ತೆಯ ತಂದೆ ಲಾಕಪ್‌ ಡೆತ್‌ ಆಗಿದ್ದು ಪ್ರಕರಣ ತೀವ್ರತೆ ಪಡೆದಿದೆ.

ಕಥುವಾ ಘಟನೆ ಕುರಿತು ಪ್ರತಿಕ್ರಿಯಿಸಿದ ಮೇರಿ ಕಾಮ್‌, “ಸರಕಾರ ಏನೇ ಮಾಡಿದರೂ ಅದನ್ನು ಸರಿಯೆಂದು ಬಿಂಬಿಸಲಾಗುತ್ತದೆ. ಇದರ ಬಗ್ಗೆ ನನಗಿಂತಲೂ ಅವರಿಗೇ ಹೆಚ್ಚು ಗೊತ್ತು. ಇಂಥ ಪ್ರಕರಣಗಳಿಂದ ತುಂಬಾ ನೋವುಂಟಾಗಿದೆ. ನಾನೊಬ್ಬಳು ಹೆಣ್ಣಾಗಿರುವುದರಿಂದ ಭಾವುಕಳಾಗಿದ್ದೇನೆ’ ಎಂದು ಬೇಸರ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನಿವಾಸದ ಬಳಿ ಸಂತ್ರಸ್ತೆ ಹುಡುಗಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಉನ್ನಾವೋ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸೈನಾ, “ಬುದ್ಧಿಹೀನ ವ್ಯಕ್ತಿಗಳು ದೇಶದಲ್ಲಿ ಮಹಿಳೆ ಮತ್ತು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ನೋಡುವಾಗ, ದುಃಖವಾಗುತ್ತದೆ. ಇಂಥ ಭೀಕರ ಕೃತ್ಯಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಕ್ರಿಕೆಟಿಗ ಗೌತಮ್‌ ಗಂಭೀರ್‌, ಟೆನಿಸ್‌ ಸ್ಟಾರ್‌ ಸಾನಿಯಾ ಮಿರ್ಜಾ, ಬ್ಯಾಡ್ಮಿಂಟನ್‌ ಆಟಗಾರ್ತಿ ಗ್ವಾಲಾ ಗುಟ್ಟಾ ಅವರೂ ದೇಶದಲ್ಲಿ ಅತ್ಯಾಚಾರದ ಅಘಾತಕಾರಿ ಬೆಳವಣಿಗೆ ಬಗ್ಗೆ ದುಃಖ ತೋಡಿಕೊಂಡಿದ್ದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.