ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಹೊರಬಿದ್ದ ಶುಭ್ಮನ್ ಗಿಲ್; ಅಭಿಮನ್ಯು ಈಶ್ವರನ್ ಬದಲಿ ಆಯ್ಕೆ
Team Udayavani, Jul 1, 2021, 8:48 AM IST
ಮುಂಬೈ: ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅವರು ಗಾಯಗೊಂಡ ಕಾರಣ ಮುಂದಿನ ಇಂಗ್ಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿ ತಿಳಿಸಿದೆ. ಗಿಲ್ ಬದಲಿಗೆ ಸ್ಟ್ಯಾಂಡ್ ಬೈ ಆಟಗಾರನಾಗಿದ್ದ ಅಭಿಮನ್ಯು ಈಶ್ವರನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿ ಮಾಡಿದೆ. ಶುಭ್ಮನ್ ಗಿಲ್ ಗೆ ಯಾವ ರೀತಿಯ ಗಾಯವಾಗಿದೆ ಎಂಬುವುದರ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಗಿಲ್ ಎರಡು ಇನ್ನಿಂಗ್ಸ್ ನಲ್ಲಿ 28 ರನ್ ಮತ್ತು 8 ರನ್ ಗಳಿಸಿದ್ದರು.
ಇದನ್ನೂ ಓದಿ:ಸೆಪ್ಟೆಂಬರ್ ವರೆಗೂ ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಬಳಸಬಹುದು!
ಇಂಗ್ಲೆಂಡ್ ಸರಣಿಗೆ ಸ್ಟ್ಯಾಂಡ್ ಬೈ ಆಟಗಾರನಾಗಿ ಆಯ್ಕೆಯಾಗಿದ್ದ ಅಭಿಮನ್ಯು ಈಶ್ವರನ್ ಅವರು ತಂಡ ಸೇರಲಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 64 ಪಂದ್ಯದಲ್ಲಿ 43.57 ಸರಾಸರಿಯಲ್ಲಿ 4401 ರನ್ ಗಳಿಸಿದ್ದಾರೆ.
ತಂಡದಲ್ಲಿ ಈಗಾಗಲೇ ಮಯಾಂಕ್ ಅಗರ್ವಾಲ್ ಮತ್ತು ಕೆ.ಎಲ್.ರಾಹುಲ್ ಇರುವ ಕಾರಣ ಇಂಗ್ಲೆಂಡ್ ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆ ಇವರಿಬ್ಬರಲ್ಲಿ ಓರ್ವ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಇಂಗ್ಲೆಂಡ್ ವಿರುದ್ಧ ಭಾರತ ತಂಡ ನಾಲ್ಕು ಪಂದ್ಯಗಳ ಸರಣಿ ಆಡಲಿದ್ದು, ಮೊದಲ ಪಂದ್ಯ ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆಗಸ್ಟ್ 4ರಂದು ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ