ಗಾಲೆ ಅಂಕಣ ಬದಲಾಯಿಸಲು ಸಿಬಂದಿಗೇ ಗಾಳ!


Team Udayavani, May 27, 2018, 6:40 AM IST

sri-lanka-gale-ground.jpg

ದುಬಾೖ: ಎಲ್ಲವೂ ತಣ್ಣಗಾಯಿತು ಎನ್ನುವಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ಮತ್ತೂಂದು ವಿವಾದ ಭುಗಿಲೆದ್ದಿದೆ. ಶ್ರೀಲಂಕಾದ ಗಾಲೆ ಮೈದಾನದ ಅಂಕಣವನ್ನು ಬದಲಾಯಿಸಲು ಮೈದಾನ ಸಿಬಂದಿಗೇ ಫಿಕ್ಸರ್‌ಗಳು ಹಣ ನೀಡಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಅಲ್‌ಜಜೀರಾ ಸುದ್ದಿವಾಹಿನಿ ಮಾಡಿದ ರಹಸ್ಯ ಕಾರ್ಯಾಚರಣೆಯಲ್ಲಿ ಈ ಮಾಹಿತಿ ಬಯಲಾಗಿದ್ದು, ಐಸಿಸಿ ತನಿಖೆ ಆರಂಭಿಸಿದೆ. ಪರಿಣಾಮ ಇಂಗ್ಲೆಂಡ್‌ ಕ್ರಿಕೆಟ್‌ ತಂಡದ ಮುಂದಿನ ಶ್ರೀಲಂಕಾ ಪ್ರವಾಸ ಅತಂತ್ರಗೊಂಡಿದೆ.

ಗಾಲೆಯಲ್ಲಿ ಶ್ರೀಲಂಕಾ ಮತ್ತು ಇಂಗ್ಲೆಂಡ್‌ ನಡುವೆ ನಡೆಯಬೇಕಿರುವ ಟೆಸ್ಟ್‌ ಪಂದ್ಯದ ಫ‌ಲಿತಾಂಶ ಬದಲಾಯಿಸಲು ಅಂಕಣವನ್ನೇ ಬದಲಾಯಿಸಲು ಸಿಬಂದಿಗೆ ಹಣ ನೀಡಲಾಗಿದೆ ಎನ್ನುವುದು ಆರೋಪ. ಈ ಹಿಂದೆ ಆಸ್ಟ್ರೇಲಿಯ ಮತ್ತು ಭಾರತ ತಂಡಗಳು ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಪಂದ್ಯವಾಡಿದ್ದಾಗಲೂ ಅಂಕಣವನ್ನು ಬದಲಾಯಿಸಲಾಗಿದೆ ಎಂದು ಆಸ್ಟ್ರೇಲಿಯ ಪತ್ರಿಕೆಯೊಂದು ಆರೋಪ ಮಾಡಿತ್ತು. ಆದ್ದರಿಂದ ಐಸಿಸಿ ಇಡೀ ವಿಶ್ವದ ಕ್ರಿಕೆಟ್‌ ಮಂಡಳಿಗಳಿಗೆ ಪತ್ರ ಬರೆದು ಮಾಹಿತಿ ಕೊಡುವಂತೆ ಆಗ್ರಹಿಸಿದೆ. ಅಲ್ಲದೇ ತನಿಖೆ ನಡೆಸುವಂತೆ ತಿಳಿಸಿದೆ.

ಐಸಿಸಿ ಏನು ಹೇಳುವುದೇನು?
ಘಟನೆಯ ಸಂಬಂಧ ಐಸಿಸಿ ಪ್ರತಿಕ್ರಿಯೆ ನೀಡಿದೆ. “ನಾವು ಈಗಾಗಲೇ ತನಿಖೆ ಆರಂಭಿಸಿದ್ದೇವೆ. ಸದ್ಯ ನಮಗಿರುವ ಅತ್ಯಲ್ಪ ಮಾಹಿತಿಯಲ್ಲೇ ತನಿಖೆ ಮುಂದುವರಿದಿದೆ. ಮೋಸದಾಟಕ್ಕೆ ಸಂಬಂಧಪಟ್ಟಂತೆ ಇರುವ ಪೂರ್ಣ ದಾಖಲೆಗಳನ್ನು ನೀಡಿ ಎಂದು ನಾವು ಪದೇ ಪದೇ ವಿನಂತಿ ಮಾಡಿದ್ದೇವೆ. ಪೂರ್ಣ ಸಾಕ್ಷಿಗಳಿಂದ ತನಿಖೆಯನ್ನು ಸಮಗ್ರವಾಗಿ ನಡೆಸಬಹುದು’ ಎಂದು ಐಸಿಸಿ ಹೇಳಿದೆ.

ಪುಣೆ ನೆನಪು ಮಾಸುವ ಮುನ್ನ ಮತ್ತೆ ಹಗರಣ
ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್‌ ನಡುವೆ 2ನೇ ಏಕದಿನ ಪಂದ್ಯ ಪುಣೆ ಅಂಕಣದಲ್ಲಿ ನಿಗದಿಯಾಗಿತ್ತು. ಅದರ ಹಿಂದಿನ ದಿನ ಅಲ್ಲಿನ ಕ್ಯುರೇಟರ್‌ ಅಂಕಣ ಬದಲಾಯಿಸಲು ಒಪ್ಪಿಕೊಂಡ ಕುರಿತು ಇಂಡಿಯಾ ಟುಡೇ ರಹಸ್ಯ ಕಾರ್ಯಾಚರಣೆ ನಡೆಸಿತ್ತು. ಪಂದ್ಯದ ಹಿಂದಿನ ದಿನವೇ ಕ್ಯುರೇಟರ್‌ ಪಾಂಡುರಂಗ ಸಲ್ಗಾಂವ್ಕರ್‌ ಅಂಕಣವನ್ನು ಬೌನ್ಸ್‌ಗೆ ನೆರವಾಗುವಂತೆ ಬದಲಾಯಿಸುತ್ತೇನೆಂದು ಹೇಳಿಕೊಂಡಿದ್ದರು. 

ಅಷ್ಟುಮಾತ್ರವಲ್ಲ ವರದಿಗಾರರನ್ನು ನಿಯಮಬಾಹಿರವಾಗಿ ಅಂಕಣದೊಳಗೆ ಕರೆದೊಯ್ದಿದ್ದರು. ಆದರೆ ತನಿಖೆಯ ಬಳಿಕೆ ಅಂಕಣ ಬದಲಾಗಿಲ್ಲ ಎಂದು ಗೊತ್ತಾಗಿತ್ತು. ಆದ್ದರಿಂದ ಮರುದಿನ ಪಂದ್ಯ ಅಲ್ಲೇ ನಡೆಯಿತು. ಅದರ ನೆನಪು ಮಾಸುವ ಮುನ್ನವೇ ಈಗ ಶ್ರೀಲಂಕಾ ಮೈದಾನದ ಗಲಾಟೆ ಮೇಲೆದ್ದಿದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.