ನೇಪಾಲದೆದುರು ಮುಗ್ಗರಿಸಿದ ಭಾರತ


Team Udayavani, Feb 13, 2019, 12:30 AM IST

b-15.jpg

ಭುವನೇಶ್ವರ: “ಗೋಲ್ಡ್‌ ಕಪ್‌’ ಕೂಟದಲ್ಲಿ ಗೆಲುವಿನೊಂದಿಗೆ ತನ್ನ ಅಭಿಯಾನ ಆರಂಭಿಸಿದ ಭಾರತೀಯ ವನಿತಾ ಫ‌ುಟ್‌ಬಾಲ್‌ ತಂಡ ಸೋಮವಾರ ರಾತ್ರಿ ನಡೆದ ಎರಡನೇ ಪಂದ್ಯದಲ್ಲಿ ನೇಪಾಲ ವಿರುದ್ಧ ಸೋಲನುಭವಿಸಿದೆ. ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ನೇಪಾಲ  2-1 ಗೋಲುಗಳ ಅಂತರದಿಂದ ಭಾರತವನ್ನು ಪರಾಭವಗೊಳಿಸಿದೆ. ನೇಪಾಲ ತಂಡದ ಸಬಿತ್ರಾ 2 ಗೋಲು ಬಾರಿಸಿ ಗೆಲುವಿಗೆ ಕಾರಣರಾದರು.  ಭಾರತ ಪರ ರತ್ನಬಾಲಾ ದೇವಿ ಏಕೈಕ ಗೋಲು ಹೊಡೆದರು. ಮೊದಲ ಪಂದ್ಯದಲ್ಲಿ ಭಾರತ 1-0 ಗೋಲಿನಿಂದ ಜಪಾನ್‌ ತಂಡವನ್ನು ಮಣಿಸಿತ್ತು. ಆದರೆ 2ನೇ ಪಂದ್ಯದಲ್ಲಿ ಎಡವಿದ ಭಾರತೀಯ ವನಿತೆಯರು ಶರಣಾಗಿದ್ದಾರೆ.

4ನೇ ನಿಮಿಷದಲ್ಲಿ ಮೊದಲ ಗೋಲು 
ಪಂದ್ಯ ಆರಂಭವಾದ 4ನೇ ನಿಮಿಷದಲ್ಲಿ ಸಬಿತ್ರಾ ಗೋಲು ಬಾರಿಸಿ ನೇಪಾಲಕ್ಕೆ ಮುನ್ನಡೆ ತಂದುಕೊಟ್ಟರು. 2 ನಿಮಿಷ ಕಳೆಯುವಷ್ಟರ‌ಲ್ಲಿ ಮತ್ತೂಂದು ಗೋಲು ಹೊಡೆದ ಸಬಿತ್ರಾ ಮುನ್ನಡೆಯನ್ನು 2-0ಕ್ಕೇರಿಸಿದರು. ಆ ಬಳಿಕ ರಕ್ಷಣಾತ್ಮಕವಾಗಿ ಆಡಿದ ನೇಪಾಲ ತಂಡ ಭಾರತಕ್ಕೆ ಗೋಲು ಬಾರಿಸುವ ಅವಕಾಶಕ್ಕೆ ತಡೆಯೊಡ್ಡುವಲ್ಲಿ ನಿರತವಾಯಿತು. ಈ ವೇಳೆ ಗೋಲು ಬಾರಿಸಲು ಭಾರತ ಮಾಡಿದ ಹೆಚ್ಚಿನ ಎಲ್ಲ ಪ್ರಯತ್ನಗಳೆಲ್ಲವೂ ವಿಫ‌ಲವಾದವು. ಪಂದ್ಯ ಮುಗಿಯುವ ಹಂತದಲ್ಲಿ (83ನೇ ನಿಮಿಷ) ರತ್ನಬಾಲಾ ಗೋಲು ಹೊಡೆಯಲು ಯಶಸ್ವಿಯಾದರು. ಆಬಳಿಕ ಸಮಬಲ ಸಾಧಿಸಲು ಭಾರತೀಯ ವನಿತೆಯರು ಶಕ್ತಿಮೀರಿ ಪ್ರಯತ್ನಿಸಿದರೂ ಯಶಸ್ಸು ಒಲಿಯಲಿಲ್ಲ.

ಗೋಲ್ಡ್‌  ಕಪ್‌ ಕೂಟ
ಭಾರತ, ಮ್ಯಾನ್ಮಾರ್‌, ನೇಪಾಲ ಹಾಗೂ ಇರಾನ್‌ ದೇಶಗಳನ್ನೊಳಗೊಂಡ “ಗೋಲ್ಡ್‌ ಕಪ್‌’ ಕೂಟವನ್ನು ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ. ಈ ಕೂಟವನ್ನು ಎಎಫ್ಸಿ 2020 ಒಲಿಂಪಿಕ್‌ ಕೂಟದ ಅರ್ಹತಾ ಕೂಟಕ್ಕೆ ತಯಾರಿಯಾಗಿ ಆಡಲಾಗುತ್ತಿದೆ. ಈಗಾಗಲೇ 6 ಅಂಕಗಳನ್ನು ಗಳಿಸಿರುವ ಮ್ಯಾನ್ಮಾರ್‌ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಭಾರತ ಹಾಗೂ ನೇಪಾಲ ತಂಡಗಳೆರಡೂ 3 ಅಂಕಗಳೊಂದಿಗೆ ಅನುಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಇರಾನ್‌ ಇನ್ನಷ್ಟೇ ಖಾತೆ ತೆರೆಯಬೇಕಾಗಿದೆ. ಅಗ್ರ 2 ತಂಡಗಳು ಫೈನಲ್‌ಗೆ ಪ್ರವೇಶಿಸಲಿವೆ. ಲೀಗ್‌ ಹಂತದಲ್ಲಿ ಭಾರತ ತನ್ನ ಕೊನೆಯ ಪಂದ್ಯವನ್ನು ಮ್ಯಾನ್ಮಾರ್‌ ವಿರುದ್ಧ ಆಡಲಿದೆ. ಈ ಪಂದ್ಯ ಬುಧವಾರ ನಡೆಯಲಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಇರಾನ್‌-ನೇಪಾಲ ಮುಖಾಮುಖೀಯಾಗಲಿವೆ.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.