ಮನು, ಚಿಂಕಿ, ರಾಹಿ ತಂಡಕ್ಕೆ ಚಿನ್ನದ ತುರಾಯಿ


Team Udayavani, Mar 25, 2021, 10:24 PM IST

ಮನು, ಚಿಂಕಿ, ರಾಹಿ ತಂಡಕ್ಕೆ ಚಿನ್ನದ ತುರಾಯಿ

ಹೊಸದಿಲ್ಲಿ: ಶೂಟಿಂಗ್‌ ವಿಶ್ವಕಪ್‌ನಲ್ಲಿ ಭಾರತ ಗುರುವಾರ ಮತ್ತೂಂದು ಚಿನ್ನದ ಸಾಧನೆಯೊಂದಿಗೆ ಸಂಭ್ರಮಿಸಿತು. ಬುಧವಾರದ ಸಾಧಕಿಯರಾದ ಚಿಂಕಿ ಯಾದವ್‌, ಮನು ಭಾಕರ್‌, ರಾಹಿ ಸರ್ನೊಬತ್‌ ‌ ಸೇರಿಕೊಂಡು 25 ಮೀ. ಪಿಸ್ತೂಲ್‌ ತಂಡ ಸ್ಪರ್ಧೆಯಲ್ಲಿ ಬಂಗಾರಕ್ಕೆ ಗುರಿ ಇರಿಸಿದರು. ಇದಕ್ಕೂ ಮೊದಲು ವನಿತೆಯರ 50 ಮೀ. ರೈಫ‌ಲ್‌ 3 ಪೊಸಿಶನ್‌ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ರಜತ ಪದಕ ಒಲಿದಿತ್ತು.

25 ಮೀ. ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ ಹಣಾಹಣಿಯಲ್ಲಿ ಭಾರತ 17-7 ಅಂತರದಿಂದ ಪೋಲೆಂಡ್‌ ವಿರುದ್ಧ ಮೇಲುಗೈ ಸಾಧಿಸಿತು. ಚಿಂಕಿ, ರಾಹಿ ಮತ್ತು ಮನು ಅವರು ಒಂದು ದಿನದ ಹಿಂದಷ್ಟೇ 25 ಮೀ. ವೈಯಕ್ತಿಕ ಪಿಸ್ತೂಲ್‌ ಸ್ಪರ್ಧೆಯ 3 ಪದಕಗಳನ್ನು ಭಾರತಕ್ಕೆ ತಂದುಕೊಟ್ಟಿದ್ದರು.

ಕೈತಪ್ಪಿದ ಚಿನ್ನ :  

50 ಮೀ. ರೈಫ‌ಲ್‌ 3 ಪೊಸಿಶನ್‌ನಲ್ಲಿ ಅಂಜುಮ್‌ ಮೌದ್ಗಿಲ್‌, ಶ್ರೇಯಾ ಸಕ್ಸೇನಾ ಮತ್ತು ಗಾಯತ್ರಿ ನಿತ್ಯಾನಂದಮ್‌ ಅವರನ್ನೊಳಗೊಂಡ ವನಿತಾ ತಂಡ ಫೈನಲ್‌ನಲ್ಲಿ ಪೋಲೆಂಡ್‌ಗೆ 43-47 ಅಂತರದಿಂದ ಶರಣಾಗಿ ಚಿನ್ನವನ್ನು ತಪ್ಪಿ ಸಿಕೊಂಡಿತು. ಇಂಡೋನೇಶ್ಯ ಕಂಚಿನ ಪದಕ ಜಯಿಸಿತು.

ಇದರೊಂದಿಗೆ ಭಾರತ ತನ್ನ ಒಟ್ಟು ಪದಕಗಳ ಸಂಖ್ಯೆಯನ್ನು 21ಕ್ಕೆ ಏರಿಸಿಕೊಂಡು ಅಗ್ರಸ್ಥಾನವನ್ನು ಗಟ್ಟಿಗೊಳಿಸಿತು. ಇದರಲ್ಲಿ 10 ಚಿನ್ನ, 6 ಬೆಳ್ಳಿ ಮತ್ತು 5 ಕಂಚು ಸೇರಿವೆ.

ಹಂಗೇರಿ ತಂಡದಲ್ಲಿ ಕಿರಿಕಿರಿ :

ಹಂಗೇರಿ ಶೂಟಿಂಗ್‌ ತಂಡದಲ್ಲಿ ಉದ್ಭವಿಸಿದ ಒಳ ಜಗಳದಿಂದ ವಿಶ್ವಕಪ್‌ ಫೈನಲ್‌ ಸ್ಪರ್ಧೆ ಮುಂದೂಡಲ್ಪಟ್ಟ ವಿದ್ಯಮಾನ ಗುರುವಾರ ಸಂಭವಿಸಿದೆ. ಭಾರತ-ಹಂಗೇರಿ ತಂಡಗಳು ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್‌ನಲ್ಲಿ ಸೆಣಸಬೇಕಿತ್ತು. ಆದರೆ ಹಂಗೇರಿ ತಂಡದ ಶೂಟರ್‌ ಪೀಟರ್‌ ಸಿಡಿ ವಿಚಾರದಲ್ಲಿ ಭಿನ್ನಾಭಿಪ್ರಾಯ ತಲೆದೋರಿದ ಕಾರಣ ಸ್ಪರ್ಧೆಯನ್ನು ಮುಂದೂಡಲಾಯಿತು.

ತಾವು ಪೀಟರ್‌ ಸಿಡಿ ಜತೆಗೂಡಿ ಸ್ಪರ್ಧಿಸುವುದಿಲ್ಲ ಎಂದು ಹಂಗೇರಿ ತಂಡದ ಉಳಿದಿಬ್ಬರು ಸದಸ್ಯರಾದ ಇಸ್ತವಾನ್‌ ಪೆನಿ ಮತ್ತು ಝವಾನ್‌ ಪೆಕ್ಲರ್‌ ಹಠಹಿಡಿದ ಪರಿಣಾಮ ಸ್ಪರ್ಧೆಯನ್ನು ತಡೆಯಿಡಿಯಲಾಯಿತು. ಸಮಸ್ಯೆ ಬಗೆಹರಿಯದ ಕಾರಣ ಹಂಗೇರಿಯನ್ನು ಹೊರಕ್ಕಿರಿಸಿ ಒಂದು ದಿನ ವಿಳಂಬವಾಗಿ ಫೈನಲ್‌ ನಡೆಸಲು ಸಂಘಟಕರು ನಿರ್ಧರಿಸಿದರು. ಫೈನಲ್‌ ಶುಕ್ರವಾರ ನಡೆಯಲಿದ್ದು, ಭಾರತ ಮತ್ತು ತೃತೀಯ ಸ್ಥಾನಿ ಅಮೆರಿಕ ಸೆಣಸಲಿವೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.