ಸಿಂಧು ಮುಂದೆ ಸುವರ್ಣಾವಕಾಶ

ಇಂದು ಫೈನಲ್‌, ಗೆದ್ದರೆ ಚಿನ್ನ ಸಾಯಿ ಪ್ರಣೀತ್‌ ಕಂಚಿನ ಸಾಧನೆ

Team Udayavani, Aug 25, 2019, 5:27 AM IST

shindu

ಬಾಸೆಲ್‌: ಭಾರತದ ಭರವಸೆಯ ಶಟ್ಲರ್‌ ಪಿ.ವಿ. ಸಿಂಧು ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇರಿಸಿದ್ದಾರೆ. ಶನಿವಾರದ ಸೆಮಿಫೈನಲ್‌ ಕಾಳಗದಲ್ಲಿ ಅವರು ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌, ಚೀನದ ಚೆನ್‌ ಯು ಫೀ ವಿರುದ್ಧ ಕೇವಲ 40 ನಿಮಿಷಗಳಲ್ಲಿ 21-7, 21-14 ಅಂತರದ ಸುಲಭ ಗೆಲುವು ಸಾಧಿಸಿದರು.

ಇದು ಸಿಂಧು ಅವರ ಸತತ 3ನೇ ಫೈನಲ್‌ ಆಗಿದ್ದು, ಹಿಂದಿನೆರಡೂ ಕೂಟಗಳಲ್ಲಿ ಪ್ರಶಸ್ತಿ ವಂಚಿತರಾಗಿ ಬೆಳ್ಳಿ ಪದಕಕ್ಕೆ ಸಮಾಧಾನಪಟ್ಟಿದ್ದರು.

ಭಾರತಕ್ಕೆ ಒಲಿಯದ ಚಿನ್ನ
ಇದುವರೆಗೆ ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಆಟಗಾರರ್ಯಾರೂ ಚಾಂಪಿಯನ್‌ ಆಗಿಲ್ಲ. ಇದೀಗ ಪಿ.ವಿ. ಸಿಂಧು ಮುಂದೆ ಇಂಥದೊಂದು ಸುವರ್ಣಾವಕಾಶ ಎದುರಾಗಿದೆ. ಗೆದ್ದರೆ ಬಂಗಾರದ ಪದಕ ಸಿಂಧು ಕೊರಳನ್ನು ಅಲಂಕರಿಸಲಿದೆ. ಫೈನಲ್‌ನಲ್ಲಿ ಸಿಂಧು 2017ರ ವಿಜೇತೆ, ವಿಶ್ವದ 4ನೇ ಶ್ರೇಯಾಂಕಿತೆ ಜಪಾನಿನ ನೊಜೊಮಿ ಒಕುಹಾರಾ ವಿರುದ್ಧ ಸೆಣಸಲಿದ್ದಾರೆ.

ಚೆನ್‌ ವಿರುದ್ಧ 5-3ರ ಗೆಲುವಿನ ದಾಖಲೆ ಹೊಂದಿನ ಪಿ.ವಿ. ಸಿಂಧು, ಸೆಮಿಫೈನಲ್‌ ಗೆಲ್ಲುವ ನೆಚ್ಚಿನ ಆಟಗಾರ್ತಿಯಾಗಿದ್ದರು. ಇದಕ್ಕೆ ತಕ್ಕಂತೆ ಪ್ರದರ್ಶನ ನೀಡುತ್ತ ಹೋದರು. ಆರಂಭದಿಂದಲೇ ಮುನ್ನಡೆ ಸಾಧಿಸುತ್ತ ಹೋದ ಪಿ.ವಿ. ಸಿಂಧು ಮೊದಲ ಗೇಮ್‌ನ ವಿರಾಮದ ವೇಳೆ 11-3ರ ಮುನ್ನಡೆಯಲ್ಲಿದ್ದರು. ದ್ವಿತೀಯ ಗೇಮ್‌ನಲ್ಲೂ ಸಿಂಧು ಸ್ಪಷ್ಟ ಮೇಲುಗೈ ಸಾಧಿಸಿದರು. ಭಾರತೀಯಳ ಆಕ್ರಮಣಕಾರಿ ಆಟದ ಎದುರು ಚೀನಿ ಆಟಗಾರ್ತಿ ಚೆನ್‌ ಯು ಫೀ ಸಂಪೂರ್ಣ ಮಂಕಾದರು.

ಸಾಯಿ ಪ್ರಣೀತ್‌ಗೆ ಕಂಚು
ಪುರುಷರ ಸಿಂಗಲ್ಸ್‌ ಸೆಮಿಫೈನಲ್‌ನಲ್ಲಿ ಬಿ. ಸಾಯಿ ಪ್ರಣೀತ್‌ ಸೋಲನುಭವಿಸಿ ಕೂಟದಿಂದ ನಿರ್ಗಮಿಸಿದರು. ಜಪಾನಿನ ಅಗ್ರಮಾನ್ಯ ಶಟ್ಲರ್‌ ಕೆಂಟೊ ಮೊಮೊಟ 21-13, 21-8ರಿಂದ ಸುಲಭದಲ್ಲಿ ಮಣಿಸಿದರು. ಇದರೊಂದಿಗೆ ಪ್ರಣೀತ್‌ ಕಂಚಿನ ಪದಕಕ್ಕೆ ತೃಪ್ತರಾದರು.

ಇದು ಈ ಪ್ರತಿಷ್ಠಿತ ಕೂಟದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ 1983ರ ಬಳಿಕ ಭಾರತಕ್ಕೆ ಒಲಿದ ಮೊದಲ ಪದಕ ಎಂಬುದು ವಿಶೇಷ. ಅಂದು ಪ್ರಕಾಶ್‌ ಪಡುಕೋಣೆ ಕೂಡ ಕಂಚು ಜಯಿಸಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.