ನವೋಮಿ ಒಸಾಕಾ ಮತ್ತೆ ಗ್ರೇಟ್ ಎಸ್ಕೇಪ್‌

ಫ್ರೆಂಚ್ ಓಪನ್‌ ಟೆನಿಸ್‌

Team Udayavani, May 31, 2019, 6:00 AM IST

AP5_30_2019_000107A

ಪ್ಯಾರಿಸ್‌: ಅಗ್ರ ಶ್ರೇಯಾಂಕದ ನವೋಮಿ ಒಸಾಕಾ ಸತತ ಎರಡನೇ ಪಂದ್ಯದಲ್ಲಿ ಭಾರೀ ಅಪಾಯದಿಂದ ಪಾರಾಗಿ ನಿಟ್ಟುಸಿರುಬಿಟ್ಟಿದ್ದಾರೆ. ಒಂದು ಸೆಟ್ ಹಿನ್ನಡೆಯಲ್ಲಿದ್ದರೂ ವೀರೋಚಿತವಾಗಿ ಹೋರಾಡಿದ ಒಸಾಕಾ ಅವರು ವಿಕ್ಟೋರಿಯಾ ಅಜರೆಂಕಾ ಅವರನ್ನು 4-6, 7-5, 6-3 ಸೆಟ್‌ಗಳಿಂದ ಗೆದ್ದು ಸಂಭ್ರಮಿಸಿದರು.


ವಿಶ್ವದ ನಂಬರ್‌ ವನ್‌ ಖ್ಯಾತಿಯ ಒಸಾಕಾ ಈಗಾಗಲೇ ಯುಎಸ್‌ ಮತ್ತು ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿ ಗೆದ್ದವರು. ಫ್ರೆಂಚ್ ಓಪನ್‌ ಪ್ರಶಸ್ತಿ ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದ್ದಾರೆ. ಆದರೆ ಆರಂಭದ ಎರಡು ಪಂದ್ಯಗಳಲ್ಲಿ ಗೆಲುವಿಗಾಗಿ ಬಹಳಷ್ಟು ಬೆವರು ಸುರಿಸಬೇಕಾಯಿತು.

ಅಜರೆಂಕಾ ವಿರುದ್ಧವೂ ಒಸಾಕಾ ಸೋಲಿನ ದವಡೆಯಿಂದ ಪಾರಾದರು. ಮೊದಲ ಸೆಟ್ ಕಳೆದುಕೊಂಡಿದ್ದ ಒಸಾಕಾ ದ್ವಿತೀಯ ಸೆಟ್‌ನಲ್ಲಿ 2-4 ಹಿನ್ನಡೆಯಲ್ಲಿದ್ದರು. ಆದರೂ ವಿಚಲಿತರಾಗದೇ ಆಡಿದ 21ರ ಹರೆಯದ ಒಸಾಕಾ ಜಯ ಸಾಧಿಸಿ ಮೂರನೇ ಸುತ್ತಿಗೇರಿದರು. ಅಲ್ಲಿ ಅವರು ಮರಿಯಾ ಸಕ್ಕಾರಿ ಅಥವಾ ಕ್ಯಾತರೀನಾ ಸಿನಿಯಕೋವಾ ಅವರನ್ನು ಎದುರಿಸಲಿದ್ದಾರೆ.

2005ರಲ್ಲಿ ಲಿಂಡ್ಸೆ ಡ್ಯಾರನ್‌ಪೋರ್ಟ್‌ ಬಳಿಕ ರೋಲ್ಯಾಂಡ್‌ ಗ್ಯಾರೋಸ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಮೊದಲ ಸೆಟ್ ಕಳೆದುಕೊಂಡ ಬಳಿಕ ಪಂದ್ಯ ಗೆದ್ದ ಮೊದಲ ಅಗ್ರ ಶ್ರೇಯಾಂಕದ ಆಟಗಾರ್ತಿ ಎಂಬ ಗೌರವಕ್ಕೆ ಒಸಾಕಾ ಪಾತ್ರರಾಗಿದ್ದಾರೆ.

ಸೆರೆನಾ ಮುನ್ನಡೆ
ಪ್ಯಾರಿಸ್‌:
ದಾಖಲೆ ಸಮಬಲದ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಹೋರಾಟಕ್ಕೆ ಸಿದ್ಧವಾಗಿರುವ ಸೆರೆನಾ ವಿಲಿಯಮ್ಸ್‌ ಜಪಾನಿನ ಕುರುಮಿ ನಾರಾ ಅವರನ್ನು ನೇರ ಸೆಟ್‌ಗಳಿಂದ ಕೆಡಹಿ ಮೂರನೇ ಸುತ್ತಿಗೇರಿದರು. 10ನೇ ಶ್ರೇಯಾಂಕದ ಸೆರೆನಾ 6-3, 6-2 ಸೆಟ್‌ಗಳ ಸುಲಭ ಜಯ ಸಾಧಿಸಿದರಲ್ಲದೇ ಮೂರನೇ ಸುತ್ತಿನಲ್ಲಿ ತನ್ನ ದೇಶದವರೇ ಆದ ಸೋಫಿಯಾ ಕೆನಿನ್‌ ಅವರನ್ನು ಎದುರಿಸಲು ಸಜ್ಜಾದರು. ಕ್ವಾರ್ಟರ್‌ಫೈನಲ್ನಲ್ಲಿ ಅವರಿಗೆ ಒಸಾಕಾ ಎದುರಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.