ಕರ್ನಾಟಕಕ್ಕೆ “ಮಹಾ’ ಪಂದ್ಯ


Team Udayavani, Nov 1, 2017, 6:10 AM IST

cricket.jpg

ಪುಣೆ: ಕರ್ನಾಟಕ ರಾಜ್ಯೋತ್ಸವದಂದೇ ನೆರೆಯ ಎದುರಾಳಿ ಮಹಾರಾಷ್ಟ್ರ ವಿರುದ್ಧ ರಾಜ್ಯ ತಂಡ ಈ ಋತುವಿನ ಮಹತ್ವದ ರಣಜಿ ಲೀಗ್‌ ಪಂದ್ಯ ಆಡಲಿಳಿಯುವುದೊಂದು ವಿಶೇಷ. ಪುಣೆಯ “ಎಂಸಿಎ ಸ್ಟೇಡಿಯಂ’ನಲ್ಲಿ ಈ ಪಂದ್ಯ ನಡೆಯಲಿದ್ದು, ಇದು ಕರ್ನಾಟಕಕ್ಕೆ ತವರಿನಾಚೆಯ ಮೊದಲ ಮುಖಾಮುಖೀ. ಇನ್ನೊಂದೆಡೆ ಮಹಾರಾಷ್ಟ್ರಕ್ಕೆ ತವರಿನಂಗಳದ ಮೊದಲ ಪಂದ್ಯ.

ಆರ್‌. ವಿನಯ್‌ಕುಮಾರ್‌ ನಾಯಕತ್ವದ ಕರ್ನಾಟಕ 2017-18ನೇ ರಣಜಿ ಋತುವನ್ನು ಭರ್ಜರಿಯಾಗಿಯೇ ಆರಂಭಿಸಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಜಯಭೇರಿ ಮೊಳಗಿಸಿದೆ. ಮೈಸೂರಿನಲ್ಲಿ ಅಸ್ಸಾಂಗೆ ಇನ್ನಿಂಗ್ಸ್‌ ಹಾಗೂ 121 ರನ್‌ ಸೋಲುಣಿಸಿದ ಬಳಿಕ ಶಿವಮೊಗ್ಗದಲ್ಲಿ ಹೈದರಾಬಾದನ್ನು 59 ರನ್ನುಗಳಿಂದ ಉರುಳಿಸಿತು. 13 ಅಂಕಳೊಂದಿಗೆ “ಎ’ ವಿಭಾಗದ ಅಗ್ರಸ್ಥಾನಿಯಾಗಿ ವಿರಾಜಮಾನವಾಗಿದೆ.

ಇನ್ನೊಂದೆಡೆ ಅಂಕಿತ್‌ ಭವೆ° ನೇತೃತ್ವದ ಮಹಾ ರಾಷ್ಟ್ರ 2 ಪಂದ್ಯಗಳನ್ನಾಡಿದ್ದು, 7 ಅಂಕಗಳೊಂದಿಗೆ “ಎ’ ವಿಭಾಗದ 4ನೇ ಸ್ಥಾನದಲ್ಲಿದೆ. ಹೈದರಾಬಾದ್‌ ವಿರುದ್ಧದ ಮೊದಲ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡದ್ದು ಮಹಾರಾಷ್ಟ್ರ ಪಾಲಿಗೊಂದು ಹಿನ್ನಡೆ. ಆದರೆ ಅನಂತರ ಲಕ್ನೋದಲ್ಲಿ ಆತಿಥೇಯ ಉತ್ತರಪ್ರದೇಶವನ್ನು 31 ರನ್ನುಗಳಿಂದ ಮಣಿಸಿ ತನ್ನ ಪರಾಕ್ರಮ ತೋರಿದೆ. ಹೀಗಾಗಿ ತವರಿನ ಅಂಗಳದಲ್ಲಿ ಆಡುವ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಹೆಚ್ಚು ಎಚ್ಚರಿಕೆಯಿಂದ ಇರಬೇಕಾದುದು ಅಗತ್ಯ.

ಕರ್ನಾಟಕ ಉತ್ತಮ ಪ್ರದರ್ಶನ
ಕರ್ನಾಟಕ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಆರ್‌. ಸಮರ್ಥ್, ಕರುಣ್‌ ನಾಯರ್‌ ಅವರ ಬ್ಯಾಟಿಂಗ್‌ ಕರ್ನಾಟಕ ಪಾಲಿಗೆ ನಿರ್ಣಾಯಕ. ಆದರೆ ಈ ಬಾರಿ ಕೆ.ಎಲ್‌. ರಾಹುಲ್‌ ಸೇವೆಯಿಂದ ತಂಡ ವಂಚಿತವಾಗಲಿದೆ. ಅವರು ಮರಳಿ ಟೀಮ್‌ ಇಂಡಿಯಾ ಸೇರಿಕೊಂಡಿದ್ದಾರೆ. ರಾಹುಲ್‌ ಜಾಗವನ್ನು ಕೌನೈನ್‌ ಅಬ್ಟಾಸ್‌ ಅಥವಾ ಅಭಿಷೇಕ್‌ ರೆಡ್ಡಿ ತುಂಬುವ ಸಾಧ್ಯತೆ ಇದೆ.

ಹೈದರಾಬಾದ್‌ ವಿರುದ್ಧ ಎರಡೂ ಇನ್ನಿಂಗ್ಸ್‌ ಗಳಲ್ಲಿ ಸೊನ್ನೆ ಸುತ್ತಿದ ಮಾಯಾಂಕ್‌ ಅಗರ್ವಾಲ್‌ ಫಾರ್ಮ್ ಮೇಲೆ ಆತಂಕದ ಛಾಯೆ ಇದೆ. ಕೀಪರ್‌ ಸಿ.ಎಂ. ಗೌತಮ್‌ ಮರಳಿ ಬ್ಯಾಟಿಂಗ್‌ ಲಯ ಕಂಡುಕೊಳ್ಳಬೇಕಿದೆ. ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ಗಳಾದ ಕೃಷ್ಣಪ್ಪ ಗೌತಮ್‌ ಮತ್ತು ಶ್ರೇಯಸ್‌ ಗೋಪಾಲ್‌ ಬ್ಯಾಟಿಂಗಿನಲ್ಲೂ ಮಿಂಚು ಹರಿಸುತ್ತಿರುವುದು ಕರ್ನಾಟಕ ಪಾಲಿಗೊಂದು ಬೋನಸ್‌. ಸ್ಟುವರ್ಟ್‌ ಬಿನ್ನಿ ಬ್ಯಾಟಿಂಗ್‌ ಕೂಡ ಹಿಂದಿನ ಪಂದ್ಯದಲ್ಲಿ ಕ್ಲಿಕ್‌ ಆಗಿದೆ.

ಬೌಲಿಂಗ್‌ ವಿಭಾಗದಲ್ಲಿ ಶ್ರೇಯಸ್‌ ಗೋಪಾಲ್‌-ಕೆ. ಗೌತಮ್‌ ಜೋಡಿಯ ಸ್ಪಿನ್‌ ದಾಳಿ ಘಾತಕವಾಗಿ ಪರಿಣಮಿಸಿದರೆ ಕರ್ನಾಟಕ ಮೇಲುಗೈ ಸಾಧಿಸುವುದರಲ್ಲಿ ಅನುಮಾನವಿಲ್ಲ. ವೇಗದ ವಿಭಾಗದಲ್ಲಿ ವಿನಯ್‌, ಮಿಥುನ್‌, ಅರವಿಂದ್‌ ಮೇಲೆ ನಂಬಿಕೆ ಇಡಬಹುದಾಗಿದೆ.

ತವರಿನ ಅಂಗಳದ ಲಾಭ
ಮಹಾರಾಷ್ಟ್ರಕ್ಕೆ ಇದು ತವರಿನ ಅಂಗಳವೆಂಬುದೊಂದು ಪ್ಲಸ್‌ ಪಾಯಿಂಟ್‌. ನಾಯಕ ಅಂಕಿತ್‌ ಭವೆ° ಯುಪಿ ವಿರುದ್ಧ ಕ್ರಮವಾಗಿ 119 ಹಾಗೂ 58 ರನ್‌ ಬಾರಿಸಿ ಕಪ್ತಾನನ ಆಟವಾಡಿದ್ದಾರೆ. ಆರಂಭಕಾರ ಋತುರಾಜ್‌ ಗಾಯಕ್ವಾಡ್‌, ಮಧ್ಯಮ ಸರದಿಯ ರಾಹುಲ್‌ ತ್ರಿಪಾಠಿ, ಕೀಪರ್‌ ರೋಹಿತ್‌ ಮೋಟ್ವಾನಿ ಕೂಡ ಉತ್ತಮ ಫಾರ್ಮ್ನಲ್ಲಿದ್ದಾರೆ. ಆಫ್ಸ್ಪಿನ್ನರ್‌ ಚಿರಾಗ್‌ ಖುರಾನ ಯುಪಿ ವಿರುದ್ಧ ಎರಡೂ ಇನ್ನಿಂಗ್ಸ್‌ಗಳಲ್ಲಿ 6 ವಿಕೆಟ್‌ ಹಾರಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿರುವುದು ವಿನಯ್‌ ಪಡೆಯ ಪಾಲಿಗೊಂದು ಎಚ್ಚರಿಕೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.