ಟೀಮ್ ಇಂಡಿಯಾಗೆ ಹೊಸ ಮುಖ : ಯಾರೀ ಹನುಮ ವಿಹಾರಿ ?


Team Udayavani, Aug 24, 2018, 3:48 PM IST

hanuma.jpg

ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ಸರಣಿಯ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾಗೆ ಎರಡು ಹೊಸ ಮುಖಗಳ ಪರಿಚಯವಾಗಿದೆ. ಅವರೆಂದರೆ ಕಳೆದ ಐಪಿಎಲ್‌ನಲ್ಲಿ ಅಬ್ಬರಿಸಿ ನಂತರ ಭಾರತ ಎ ತಂಡದ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ಮುಂಬೈ ಮೂಲದ ಪೃಥ್ವಿ ಶಾ ಮತ್ತು ಆಂಧ್ರ ಪ್ರದೇಶದ ಹನುಮ ವಿಹಾರಿ.

ಯಾರು ಈ ಹನುಮ ವಿಹಾರಿ?
19 ಹರೆಯದ ಹನುಮ ವಿಹಾರಿ ಆಂಧ್ರ ಪ್ರದೇಶದ ಕಾಕಿನಾಡ ಮೂಲದ ಆಟಗಾರ. ಬಲಗೈ ಬ್ಯಾಟ್ಸ್ಮನ್ ಆಗಿರುವ ವಿಹಾರಿ ಬಲಗೈ ಆಫ್ ಸ್ಪಿನ್ನರ್ ಕೂಡಾ. 2012ರಲ್ಲಿ ನಡೆದ ಅಂಡರ್ 19 ಪಂದ್ಯಾವಳಿಯಲ್ಲಿ ಉನ್ಮುಕ್ತ್ ಚಾಂದ್ ನಾಯಕತ್ವದಡಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. 2010- 2016 ವರೆಗೆ ಹೈದರಾಬಾದ್ ಪರವಾಗಿ ಆಡಿದ್ದ ಹನುಮ ವಿಹಾರಿ, ಸದ್ಯ ಆಂಧ್ರ ಪ್ರದೇಶ ತಂಡದಲ್ಲಿ ಆಡುತ್ತಿದ್ದಾರೆ. ಐಪಿಎಲ್ ನಲ್ಲಿ ಸನ್‌ರೈಸರ್ ಹೈದರಾಬಾದ್ ತಂಡದ ತಮ್ಮ ಛಾಪು ಮೂಡಿಸಿದ್ದರು. 


19 ವರ್ಷದ ನಂತರ ಇಂಡಿಯಾ ತಂಡದಲ್ಲಿ ಆಂದ್ರ ಆಟಗಾರ

ಸದ್ಯ ಟೀಂ ಇಂಡಿಯಾ ಆಯ್ಕೆಗಾರ ಎಂ.ಎಸ್.ಕೆ. ಪ್ರಸಾದ್ ನಂತರ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾದ ಮೊದಲ ಆಂಧ್ರ ಆಟಗಾರ ಈ ಹನುಮ ವಿಹಾರಿ. ಎಂ.ಎಸ್.ಕೆ. ಪ್ರಸಾದ್ ಸುಮಾರು 19 ವರ್ಷಗಳ ಹಿಂದೆ ಅಂದರೆ 1999ರಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. 

ಹನುಮ ಸಾಧನೆ 
ಪ್ರಥಮ ದರ್ಜೆ ಪಂದ್ಯಾವಳಿಯಲ್ಲಿ 63 ಪಂದ್ಯಗಳಲ್ಲಿ 59.79ರ ಸರಾಸರಿಯಲ್ಲಿ 5142 ರನ್ ಗಳಿಸಿರುವ ವಿಹಾರಿ, 15 ಶತಕ ಮತ್ತು 24 ಅರ್ಧ ಶತಕ ಬಾರಿಸಿದ್ದಾರೆ. ಆಫ್ ಸ್ಪಿನ್ನರ್ ಆಗಿರುವ ಹನುಮ ವಿಹಾರಿ19 ವಿಕೆಟ್ ಕೂಡಾ ಪಡೆದಿದ್ದಾರೆ. ಲಿಸ್ಟ್ ಎ ಕ್ರಿಕೆಟ್ ನಲ್ಲಿ 56 ಪಂದ್ಯದಲ್ಲಿ 2268 ರನ್ ಗಳಿಸಿರುವ ಹನುಮ ವಿಹಾರಿ 47.25 ಸರಾಸರಿ ಹೊಂದಿದ್ದಾರೆ. 12 ವಿಕೆಟ್ ಕೂಡಾ ಕಬಳಿಸಿರುವ ವಿಹಾರಿ ಹೆಚ್ಚಾಗಿ ಬ್ಯಾಟಿಂಗ್ ಆಲ್ ರೌಂಡರ್ ರೂಪದಲ್ಲಿ ಕಾಣಿಸುತ್ತಾರೆ.
 ಕಳೆದ ಸಾಲಿನ ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಈ ಆಂಧ್ರ ಬ್ಯಾಟ್ಸ್ ಮನ್ ಆರು ಪಂದ್ಯಗಳಿಂದ 752 ರನ್ ಕಲೆ ಹಾಕಿದ್ದರು. ಒರಿಸ್ಸಾ ವಿರುದ್ದದ ಅಜೇಯ 302 ರನ್ ವಿಹಾರಿ ಒಬ್ಬ ದೊಡ್ಡ ಇನ್ನಿಂಗ್ಸ್ ಆಟಗಾರ ಎಂದು ನಿರೂಪಿಸಿದ್ದರು. ಇರಾನಿ ಟ್ರೋಫಿಯಲ್ಲಿ ರಣಜಿ ಚಾಂಪಿಯನ್ ವಿದರ್ಭ ವಿರುದ್ದ ಶೇಷ ಭಾರತದ ಪರವಾಗಿ183 ರನ್ ಗಳಿಸಿ ಆಯ್ಕೆಗಾರರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. 

ಸದ್ಯ ಭಾರತ ಎ ತಂಡದ ಪರವಾಗಿ ಉತ್ತಮ ಪ್ರದರ್ಶನ ನಿಡುತ್ತಿರುವ ಹನುಮ ವಿಹಾರಿ ಭಾರತ ಟೆಸ್ಟ್ ತಂಡದ ಕದ ತಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ದದ ನಾಲ್ಕನೇ ಪಂದ್ಯದಲ್ಲಿ ಗಾಯಾಳಾಗಿರುವ ರವಿಚಂದ್ರನ್ ಅಶ್ವಿನ್ ತಂಡದಿಂದ ಹೊರ ಬಿದ್ದಲ್ಲಿ ಹನುಮ ವಿಹಾರಿ ಭಾರತದ 292ನೇ ಆಟಗಾರನಾಗಿ ಟೆಸ್ಟ್ ಕ್ಯಾಪ್ ಧರಿಸುವ ಕಾತರದಲ್ಲಿದ್ದಾರೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.