ಭಾರತ ಕಂಡ ಶ್ರೇಷ್ಠ ಮ್ಯಾಚ್ ವಿನ್ನರ್ ಇವರೇ ಎಂದ ಹರ್ಭಜನ್ ಸಿಂಗ್
Team Udayavani, Jun 21, 2020, 4:15 PM IST
ಮುಂಬೈ: ಕ್ರಿಕೆಟ್ ಎಂದರೆ ಅದು ಪ್ರಮುಖವಾಗಿ ಬ್ಯಾಟ್ಸಮನ್ ಗಳ ಆಟ ಎಂದೇ ಜನಜನಿತವಾಗಿದೆ. ಟಿ20 ಕ್ರಿಕೆಟ್ ನಲ್ಲಿ ಬ್ಯಾಟ್ಸ್ ಮನ್ ಗಳಿಗೆ ಹೆಚ್ಚಿನ ಮಹತ್ವವೂ ಸಿಗುತ್ತದೆ. ಆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಬೌಲರ್ ಗಳು 20 ವಿಕೆಟ್ ಪಡೆಯದೇ ಜಯ ಗಳಿಸಲು ಅಸಾಧ್ಯ ಎಂಬ ಮಾತಿದೆ. ಇದಕ್ಕೆ ಆಧಾರವೆಂಬಂತೆ ಸ್ಪಿನ್ನರ್ ಹರ್ಭಜನ್ ಸಿಂಗ್ ಭಾರತ ಕಂಡ ಶ್ರೇಷ್ಠ ಮ್ಯಾಚ್ ವಿನ್ನರ್ ರನ್ನು ಹೆಸರಿಸಿದ್ದಾರೆ. ಅದು ಸಚಿನ್ ತಂಡೂಲ್ಕರ್, ಸುನೀಲ್ ಗಾವಸ್ಕರ್, ಮಹೇಂದ್ರ ಸಿಂಗ್ ಧೋನಿ ಅಥವಾ ವಿರಾಟ್ ಕೊಹ್ಲಿ ಅಲ್ಲ. ಬಜ್ಜಿ ಪ್ರಕಾರ ಭಾರತದ ಶ್ರೇಷ್ಠ ಮ್ಯಾಚ್ ವಿನ್ನರ್ ಅನಿಲ್ ಕುಂಬ್ಳೆ.
ಪಿಚ್ ಎಂತಹುದೇ ಇರಲಿ, ಸ್ಪಿನ್ ಆಗಲಿ ಅಥವಾ ಆಗದೇ ಇರಲಿ, ಬ್ಯಾಟ್ಸಮ್ ಗಳನ್ನು ಹೇಗೆ ಔಟ್ ಮಾಡಬೇಕು ಎಂದು ವಿಶ್ವಕ್ರಿಕೆಟ್ ಗೆ ತೋರಿಸಿಕೊಟ್ಟವರು ಅನಿಲ್ ಕುಂಬ್ಳೆ ಎಂದು ಹರ್ಭಜನ್ ಸಿಂಗ್ ಹೇಳಿದರು.
ಕುಂಬ್ಳೆ ಚೆಂಡನ್ನು ಸಂಪೂರ್ಣ ಸ್ಪಿನ್ ಮಾಡುವುದಿಲ್ಲ ಎಂದು ಜನರು ಹೇಳುತ್ತಾರೆ. ಆದರೆ ಹೇಗೆ ವಿಕೆಟ್ ತೆಗೆಯಬೇಕೆಂದು ಹೇಳಿಕೊಟ್ಟವರು ಅವರು. ಕುಂಬ್ಳೆಯ ಸ್ಪರ್ಧಾತ್ಮಕ ಮನೋಭಾವದ ಅರ್ಧದಷ್ಟು ಯಾರಲ್ಲಿ ಇದ್ದರೂ ಆತ ಚಾಂಪಿಯನ್ ಆಗಬಲ್ಲ ಎಂದು ಹರ್ಭಜನ್ ಹೇಳಿದ್ದಾರೆ.
ಕುಂಬ್ಳೆ 132 ಟೆಸ್ಟ್ ಪಂದ್ಯಗಳಿಂದ 619 ವಿಕೆಟ್ ಕಬಳಿಸಿದ್ದಾರೆ. ವಿಶ್ವಕ್ರಿಕೆಟ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದವರ ಸಾಲಿನಲ್ಲಿ ಕನ್ನಡಿಗ ಅನಿಲ್ ಕುಂಬ್ಳೆಗೆ ಮೂರನೇ ಸ್ಥಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ