2011ರ ವಿಶ್ವಕಪ್ ವಿಜೇತ ಆಟಗಾರರು ನಂತರ ತಂಡದಿಂದ ಹೊರಬಿದ್ದಿದ್ಯಾಕೆ?: ಹರ್ಭಜನ್ ಪ್ರಶ್ನೆ
Team Udayavani, Jan 31, 2022, 5:08 PM IST
ಮುಂಬೈ: ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅವರು 2011ರ ವಿಶ್ವಕಪ್ ವಿಜೇತ ಆಟಗಾರರ ಕುರಿತಾಗಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. 2011ರಲ್ಲಿ ಚಾಂಪಿಯನ್ ಆಗಿದ್ದ ತಂಡದ ಸದಸ್ಯರು ನಂತರ ತಂಡದಿಂದ ದೂರವಾಗಲು ಯಾರು ಕಾರಣ ಎಂದಿದ್ದಾರೆ.
“ ನನ್ನ ಮಾತನ್ನು ಬೇರೆ ರೀತಿಯಲ್ಲಿ ಅರ್ಥೈಸಬಹುದು. ಆದರೆ 2012ರ ಬಳಿಕ ಭಾರತೀಯ ಕ್ರಿಕೆಟ್ ನಲ್ಲಿ ಹಲವಾರು ವಿಚಾರಗಳು ಇನ್ನಷ್ಟು ಉತ್ತಮವಾಗಬಹುದಿತ್ತು” ಎಂದು ಕ್ರಿಕ್ ನೆಕ್ಸ್ ಡಾಟ್ ಕಾಮ್ ಸಂದರ್ಶನದಲ್ಲಿ ಹರ್ಭಜನ್ ಹೇಳಿದ್ದಾರೆ.
“2011ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ನಂತರದ ದಿನಗಳಲ್ಲಿ ಯಾಕೆ ಒಟ್ಟಾಗಿ ಆಡಲಾಗಿಲ್ಲ ಎಂದು ನನಗೆ ಇನ್ನೂ ಅರ್ಥವಾಗಿಲ್ಲ. ನಾನು, ವೀರೆಂದ್ರ ಸೆಹವಾಗ್, ಗಂಭೀರ್, ಯುವರಾಜ್ ಸಿಂಗ್ ಟೀಂ ಇಂಡಿಯಾದಿಂದ ನಿವೃತ್ತರಾದ ಬಳಿಕವೂ ಐಪಿಎಲ್ ನಲ್ಲಿ ಸಕ್ರಿಯವಾಗಿ ಆಡಿದ್ದೇವೆ, 2011ರ ವಿಜೇತ ತಂಡ ಸದಸ್ಯರು ನಂತರ ಒಟ್ಟಿಗೆ ಆಡಲಿಲ್ಲ. ಯಾಕೆ? ಕೇವಲ ಕೆಲವರು ಮಾತ್ರ 2015ರ ವಿಶ್ವಕಪ್ ಆಡಿದರು. ಯಾಕೆ?” ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಟೀಂ ಇಂಡಿಯಾ ಟೆಸ್ಟ್ ನಾಯಕತ್ವಕ್ಕೆ ರೋಹಿತ್ ಶರ್ಮಾ ಸೂಕ್ತ: ರಿಕಿ ಪಾಂಟಿಂಗ್
ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಕಳೆದ ಡಿಸೆಂಬರ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್