ಮರ್ಯಾದೆ ಉಳಿಸಿದ ಹಾರ್ದಿಕ್, ಜಡೇಜಾ: ಆಸೀಸ್ ಗೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಂ ಇಂಡಿಯಾ
Team Udayavani, Dec 2, 2020, 12:36 PM IST
ಕ್ಯಾನ್ ಬೆರಾ: ಮೂರನೇ ಏಕದಿನ ಪಂದ್ಯದಲ್ಲೂ ಬ್ಯಾಟಿಂಗ್ ಕುಸಿತ ಕಂಡಿದ್ದ ಟೀಂ ಇಂಡಿಯಾವನ್ನು ಆಲ್ ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಮ್ಮ ಬ್ಯಾಟಿಂಗ್ ಸಾಹಸದಿಂದ ಆಧರಿಸಿದ್ದಾರೆ. ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 302 ರನ್ ಗಳಿಸಿ ಆಸೀಸ್ ಗೆ ಸ್ಪರ್ಧಾತ್ಮಕ ಗುರಿ ನೀಡಿದೆ.
ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ವಿರಾಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಶಿಖರ್ ಧವನ್ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು. ಉತ್ತಮವಾಗಿ ಆಡುತ್ತಿದ್ದ ಗಿಲ್ ಕೂಡಾ 33 ರನ್ ಗಳಿಸಿ ಔಟಾದರು. ನಾಯಕ ವಿರಾಟ್ ಕೊಹ್ಲಿ 63 ರನ್ ಗಳಿಸಿ ತಂಡವನ್ನು ಆಧರಿಸಿದರೆ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಕಳಪೆ ಬ್ಯಾಟಿಂಗ್ ಫಾರ್ಮ್ ಮನೇಕಾ ಓವಲ್ ಅಂಗಳದಲ್ಲೂ ಮುಂದುವರಿಯಿತು.
152 ರನ್ ಗೆ ಐದು ವಿಕೆಟ್ ಕಳೆದುಕೊಂಡಲ್ಲಿಗೆ ಜೊತೆಯಾದ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಂಡವನ್ನು ಆಧರಿಸಿದರು. ನಿಧಾನವಾಗಿ ಇನ್ನಿಂಗ್ಸ್ ಕಟ್ಟಿದ ಇವರು ಕೊನೆಯಲ್ಲಿ ಆರ್ಭಟಿಸಿದರು. ಒಂದು ಹಂತದಲ್ಲಿ 250 ರನ್ ಗಳಿಸುವುದು ಕಷ್ಟ ಎಂಬಂತಿದ್ದ ಪರಿಸ್ಥಿತಿಯಲ್ಲಿ ಇವರಿಬ್ಬರು ಕೊನೆಯ 10 ಓವರ್ ಗಳಲ್ಲಿ 110 ರನ್ ಬಾರಿಸಿದರು.
ಇದನ್ನೂ ಓದಿ:ಏಕದಿನ ಕ್ರಿಕೆಟ್ ನಲ್ಲಿ 12 ಸಾವಿರ ರನ್: ಸಚಿನ್ ತೆಂಡುಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ
ಆರನೇ ವಿಕೆಟ್ ಗೆ ಹಾರ್ದಿಕ್ – ಜಡೇಜಾ ಅಜೇಯ 150 ರನ್ ಜೊತೆಯಾಟವಾಡಿದರು. ಹಾರ್ದಿಕ್ ಪಾಂಡ್ಯ 76 ಎಸೆತಗಳಲ್ಲಿ 92 ರನ್ ಗಳಿಸಿದರೆ, ರವೀಂದ್ರ ಜಡೇಜಾ 50 ಎಸೆತಗಳಲ್ಲಿ 66 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ