BCCI ಕಠಿಣ ನಿರ್ಧಾರ: ಹಾರ್ದಿಕ್,ರಾಹುಲ್ಗೆ ತಲಾ 2 ಮ್ಯಾಚ್ ಬ್ಯಾನ್?
Team Udayavani, Jan 10, 2019, 7:57 AM IST
ನವದೆಹಲಿ: ಕಾಫಿ ವಿತ್ ಕರಣ್ ಟೀವಿ ಶೋನಲ್ಲಿ ಭಾಗವಹಿಸಿ ಮಹಿಳೆಯರ ವಿರುದ್ಧ ಅಸಭ್ಯ ಮಾತುಗಳನ್ನಾಡಿದ್ದಾರೆಂಬ ಕಾರಣಕ್ಕೆ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆ.ಎಲ್.ರಾಹುಲ್ಗೆ ಬಿಸಿಸಿಐ ಕಠಿಣ ಕ್ರಮವಾಗಿ ತಲಾ 2 ಏಕದಿನ ಪಂದ್ಯಗಳಿಗೆ ಆಡಲು ನಿಷೇಧ ಹೇರುವ ಸಾಧ್ಯತೆಗಳಿವೆ.
ಬಿಸಿಸಿಐನ ನಿರ್ವಾಹಕ ಸಮಿತಿಯ ಮುಖ್ಯಸ್ಥ ವಿನೋದ್ ರಾಯ್ ಅವರು ಇಬ್ಬರಿಗೂ ತಲಾ 2 ಪಂದ್ಯಗಳಿಗೆ ನಿಷೇಧ ಹೇರಲು ಶಿಫಾರಸು ಮಾಡಿದ್ದಾರೆ.ಇದರಿಂದಾಗಿ ಇಬ್ಬರಿಗೂ ಸಂಕಷ್ಟ ಎದುರಾಗಿದೆ.
ಶೋನ ಬಳಿಕ ಇಬ್ಬರು ಆಟಗಾರರು ಭಾರೀ ವಿವಾದಕ್ಕೆ ಗುರಿಯಾಗಿದ್ದರು. ಈ ಕಾರಣಕ್ಕಾಗಿ , ಬಿಸಿಸಿಐ ಇಬ್ಬರಿಗೂ ಕಾರಣ ಕೇಳಿ ಬುಧವಾರ ನೋಟಿಸ್ ಜಾರಿ ಮಾಡಿತ್ತು ಮತ್ತು 24 ಗಂಟೆಯೊಳಗಾಗಿ ಉತ್ತರಿಸಬೇಕೆಂದು ಆದೇಶಿಸಿತ್ತು.
ತನಗೆ ಹಲವು ಮಹಿಳೆಯರೊಂದಿಗೆ ಸಂಬಂಧವಿದೆ, ಇದನ್ನೆಲ್ಲ ಅಪ್ಪ ಅಮ್ಮನಿಗೆ ಹೇಳಿಯೇ ಮಾಡುತ್ತೇನೆಂದೂ ಹೇಳಿಕೊಂಡಿರುವ ಹಾರ್ದಿಕ್, ಸಂದರ್ಶಕ ಕರಣ್ ಕೇಳಿದ ಇನ್ನೊಂದು ಪ್ರಶ್ನೆಗೂ ಲೀಲಾಜಾಲವಾಗಿ ಉತ್ತರಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.
ಕ್ಲಬ್ಗಳಲ್ಲಿ ನೀವೇಕೆ ಮಹಿಳೆಯರ ಹೆಸರನ್ನು ಕೇಳುವುದಿಲ್ಲ ಎಂಬ ಪ್ರಶ್ನೆಗೆ, ಮಹಿಳೆಯರು ಹೇಗೆ ಮುಂದುವರಿಯುತ್ತಾರೆಂದು ನೋಡುವ ಆಸೆ ನನಗೆ. ನಾನು ಸ್ವಲ್ಪ ಹಿನ್ನೆಲೆ ಯಲ್ಲಿದ್ದುಕೊಂಡು ಅವರು ಹೇಗೆ ಹೆಜ್ಜೆ ಇಡುತ್ತಾರೆಂದು ನೋಡಬೇಕೆನಿಸುತ್ತದೆ ಎಂದಿದ್ದರು. ಅಲ್ಲದೇ ಸಚಿನ್ ತೆಂಡುಲ್ಕರ್ ಗಿಂತ ವಿರಾಟ್ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್ಮನ್ ಎಂದಿರುವುದೂ ಭಾರೀ ವಿವಾದ ಸೃಷ್ಟಿಸಿದೆ.
ಪಾಂಡ್ಯ ಕ್ಷಮೆ
ವಿವಾದದ ಬಳಿಕ ಹಾರ್ದಿಕ್ ಪಾಂಡ್ಯ ಕ್ಷಮೆ ಕೇಳಿದ್ದಾರೆ. ತನಗೆ ಯಾರದೇ ಭಾವನೆ ನೋಯಿಸುವ ಉದ್ದೇಶವಿರಲಿಲ್ಲ. ಆ ಶೋ ಇದ್ದಿದ್ದೇ ಹಾಗೆ. ಅದಕ್ಕೆ ತಕ್ಕಂತೆ ತಾನು ಪ್ರತಿಕ್ರಿಯೆ ನೀಡಿದೆ ಅಷ್ಟೇ. ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್