Team India; ವಿಶ್ವಕಪ್ ನಿಂದಲೇ ಹೊರಬಿದ್ದ ಹಾರ್ದಿಕ್ ಪಾಂಡ್ಯ; ಬದಲಿಯಾಗಿ ಕನ್ನಡಿಗನ ಆಯ್ಕೆ
Team Udayavani, Nov 4, 2023, 10:30 AM IST
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕೂಟದಲ್ಲಿ ಸತತ ಪಂದ್ಯಗಳನ್ನು ಗೆದ್ದು ಮುಂದಿನ ದಕ್ಷಿಣ ಆಫ್ರಿಕಾ ವಿರುದ್ಧ ಪ್ರಮುಖ ಪಂದ್ಯಕ್ಕೆ ಸಿದ್ದತೆ ನಡೆಸುತ್ತಿರುವ ಭಾರತ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಇದೀಗ ಸಂಪೂರ್ಣ ಕೂಟದಿಂದಲೇ ಹೊರಬಿದ್ದಿದ್ದಾರೆ. ಉಪ ನಾಯಕನ ಎದುರು ನೋಡುತ್ತಿದ್ದ ತಂಡ ಇದೀಗ ಪರ್ಯಾಯ ವ್ಯವಸ್ಥೆ ಮಾಡಿದೆ.
ಕೂಟದಿಂದ ಹೊರಬಿದ್ದ ಹಾರ್ದಿಕ್ ಪಾಂಡ್ಯ ಬದಲಿಗೆ ಕನ್ನಡಿಗ ಪ್ರಸಿಧ್ ಕೃಷ್ಣ ಅವರು ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಎಡ ಹಿಮ್ಮಡಿಗೆ ಗಾಯ ಮಾಡಿಕೊಂಡಿದ್ದರು. ಉಪನಾಯಕನಾಗಿದ್ದ ಪಾಂಡ್ಯ ಅವರನ್ನು ಆರಂಭದಲ್ಲಿ ಪುಣೆಯ ಆಸ್ಪತ್ರೆಗೆ ತಪಾಸಣೆಗಾಗಿ ಕರೆದೊಯ್ಯಲಾಯಿತು. ಆರಂಭದಲ್ಲಿ ಗಾಯವು ಭಯಪಡುವಷ್ಟು ತೀವ್ರವಾಗಿಲ್ಲ ಎಂದು ವರದಿಯಾಗಿತ್ತು. ಒಂದೆರಡು ವಾರಗಳ ವಿಶ್ರಾಂತಿಯ ಬಳಿಕ ಅವರು ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಪಾಂಡ್ಯ ಚೇತರಿಕೆ ಕಾಣದ ಕಾರಣ ಅವರು ವಿಶ್ವಕಪ್ ಕೂಟದಿಂದಲೇ ಹೊರಬೀಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ