ಭಾರತ-ನ್ಯೂಜಿಲ್ಯಾಂಡ್‌ ಟಿ20 ಟ್ರೋಫಿ ಅನಾವರಣ; ಮುಂದಿನ ವಿಶ್ವಕಪ್‌ಗೆ ಕಾರ್ಯಯೋಜನೆ: ಪಾಂಡ್ಯ


Team Udayavani, Nov 17, 2022, 8:00 AM IST

ಭಾರತ-ನ್ಯೂಜಿಲ್ಯಾಂಡ್‌ ಟಿ20 ಟ್ರೋಫಿ ಅನಾವರಣ; ಮುಂದಿನ ವಿಶ್ವಕಪ್‌ಗೆ ಕಾರ್ಯಯೋಜನೆ: ಪಾಂಡ್ಯ

ವೆಲ್ಲಿಂಗ್ಟನ್‌: ರೊಂಯ್ಯನೆ ಬೀಸುತ್ತಿದ್ದ ಗಾಳಿಯ ನಡುವೆ ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಟಿ20 ಸರಣಿ ಟ್ರೋಫಿ ಅನಾವರಣ, ಬಳಿಕ ನಾಯಕರಾದ ಕೇನ್‌ ವಿಲಿಯಮ್ಸನ್‌-ಹಾರ್ದಿಕ್‌ ಪಾಂಡ್ಯ ಅವರಿಂದ ವೆಲ್ಲಿಂಗ್ಟನ್‌ ಬೀದಿಯಲ್ಲಿ “ಕ್ರೊಕೊಡೈಲ್‌ ಬೈಕ್‌’ ಸವಾರಿ, ಪತ್ರಿಕಾಗೋಷ್ಠಿ, ಟೀಮ್‌ ಇಂಡಿಯಾದಿಂದ ಕಠಿನ ಅಭ್ಯಾಸ… ಹೀಗೆ ಎರಡು ದಿನ ಮೊದಲೇ ಸರಣಿಗೆ ಸಿದ್ಧತೆ ಆರಂಭಗೊಳ್ಳುವ ಮೂಲಕ ಟೀಮ್‌ ಇಂಡಿಯಾ ನೂತನ ನಿರೀಕ್ಷೆಗಳನ್ನು ಬಿತ್ತಿದೆ.

ಮಾಧ್ಯಮದವರೊಂದಿಗೆ ಮಾತಾಡಿದ ಭಾರತ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ, “2024ರಲ್ಲಿ ನಡೆಯಲಿರುವ ಮುಂದಿನ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಈ ಸರಣಿಯಿಂದಲೇ ಸಿದ್ಧತೆ, ಕಾರ್ಯಯೋಜನೆ ಆರಂಭಗೊಳ್ಳಲಿದೆ’ ಎಂದರು.

ಇತ್ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಶುಕ್ರವಾರ ಇಲ್ಲಿ ನಡೆಯಲಿದೆ. ಎರಡೂ ತಂಡಗಳು ಟಿ20 ವಿಶ್ವಕಪ್‌ ಸೆಮಿಫೈನಲ್‌ ಹಂತದಲ್ಲಿ ಹೊರಬಿದ್ದ ಕಾರಣ ಒಂದೇ ದೋಣಿಯಲ್ಲಿ ಪಯಣಿಸುತ್ತಿವೆ. ಇತ್ತಂಡಗಳ ಸ್ಥಿತಿಯೂ ಒಂದೇ ಆಗಿದೆ. ಆದರೆ ಭಾರತ ತನ್ನ ತಂಡದಲ್ಲಿ ಬಹಳಷ್ಟು ಬದಲಾವಣೆ ಮಾಡಿಕೊಂಡರೆ, ನ್ಯೂಜಿಲ್ಯಾಂಡ್‌ ಸೀನಿಯರ್‌ ಆಟಗಾರರಾದ ಮಾರ್ಟಿನ್‌ ಗಪ್ಟಿಲ್‌ ಮತ್ತು ಟ್ರೆಂಟ್‌ ಬೌಲ್ಟ್ಗೆ ವಿಶ್ರಾಂತಿ ನೀಡಿ ಹೋರಾಟಕ್ಕಿಳಿಯಲಿದೆ.

“ಹೌದು. ವಿಶ್ವಕಪ್‌ ಸಾಧನೆ ನಿರಾಸೆ ಮೂಡಿಸಿದೆ. ಆದರೆ ನಾವು ವೃತ್ತಿಪರ ಆಟಗಾರರು. ಇದನ್ನೆಲ್ಲ ನಿಭಾಯಿಸಿಕೊಂಡು ಮುಂದು ವರಿಯಲಿದ್ದೇವೆ. ತಪ್ಪುಗಳನ್ನು ತಿದ್ದಿಕೊಂಡು ನಡೆದರೆ ಧನಾತ್ಮಕ ಫ‌ಲಿತಾಂಶ ಸಾಧ್ಯ. ಮುಂದಿನ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಈ ಸರಣಿಯೇ ಮೊದಲ ಮೆಟ್ಟಿಲಾಗಬೇಕು, ಇಲ್ಲಿಂದಲೇ ಸೂಕ್ತ ಕಾರ್ಯಯೋಜನೆ ರೂಪಿಸಿಕೊಂಡು ಮುಂದಡಿ ಇಡಬೇಕು’ ಎಂಬುದಾಗಿ ಹಾರ್ದಿಕ್‌ ಪಾಂಡ್ಯ ಹೇಳಿದರು.

“ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಇನ್ನೂ 2 ವರ್ಷ ಇದೆ. ಈ ಅವಧಿಯಲ್ಲಿ ನಾವು ಸಾಕಷ್ಟು ಕ್ರಿಕೆಟ್‌ ಆಡಲಿಕ್ಕಿದೆ. ಎಲ್ಲರಿಗೂ ಧಾರಾಳ ಅವಕಾಶ ಲಭಿಸಲಿದೆ. ನಮ್ಮ ಈ ತಂಡದ ತುಂಬ ಯುವ ಆಟಗಾರರೇ ತುಂಬಿದ್ದಾರೆ. ಎಲ್ಲರೂ ಖುಷಿ ಖುಷಿಯಲ್ಲಿದ್ದಾರೆ. ಇವರ ಭವಿಷ್ಯ ಮುಂದೆ ನಿರ್ಧಾರಗೊಳ್ಳಲಿದೆ’ ಎಂದರು.

2024ರ ಟಿ20 ವಿಶ್ವಕಪ್‌ ಪಂದ್ಯಾವಳಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

 

View this post on Instagram

 

A post shared by BLACKCAPS (@blackcapsnz)


ಹಾರಿಹೋದ ಟ್ರೋಫಿ!
ಟಿ20 ಟ್ರೋಫಿ ಅನಾವರಣ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೆಲ್ಲಿಂಗ್ಟನ್‌ನಲ್ಲಿ ತೀವ್ರ ಗಾಳಿ ಬೀಸುತ್ತಿತ್ತು. ಇದರ ರಭಸಕ್ಕೆ ಟೇಬಲ್‌ ಮೇಲೆ ಇರಿಸಲಾಗಿದ್ದ ಟ್ರೋಫಿ ಹಾರಿ ಹೋಯಿತು. ಕೂಡಲೇ ಇದನ್ನು ಕೇನ್‌ ವಿಲಿಯಮ್ಸನ್‌ “ಕ್ಯಾಚ್‌’ ಮಾಡಿದರು. ಉರುಳಿ ಬೀಳುತ್ತಿದ್ದ ಟೇಬಲ್‌ ಅನ್ನು ಹಾರ್ದಿಕ ಪಾಂಡ್ಯ ತಡೆದು ನಿಲ್ಲಿಸಿದರು. ಈ ರೀತಿ ಔಪಚಾರಿಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ವೆಲ್ಲಿಂಗ್ಟನ್‌ನಲ್ಲಿ ಭಾರತ-ನ್ಯೂಜಿಲ್ಯಾಂಡ್‌
ವೆಲ್ಲಿಂಗ್ಟನ್‌ನಲ್ಲಿ ಭಾರತ-ನ್ಯೂಜಿಲ್ಯಾಂಡ್‌ ಈವರೆಗೆ 3 ಟಿ20 ಪಂದ್ಯಗಳನ್ನಾಡಿವೆ. ನ್ಯೂಜಿಲ್ಯಾಂಡ್‌ ಎರಡರಲ್ಲಿ ಗೆದ್ದಿದೆ. ಒಂದು ಪಂದ್ಯ ಟೈ ಆಗಿತ್ತು, ಭಾರತ ಇದನ್ನು ಸೂಪರ್‌ ಓವರ್‌ನಲ್ಲಿ ಜಯಿಸಿತು.

ಇಲ್ಲಿ ಇತ್ತಂಡಗಳ ನಡುವೆ ಮೊದಲ ಪಂದ್ಯ ಏರ್ಪಟ್ಟದ್ದು 2009ರಲ್ಲಿ. ಸರಣಿಯ ಈ ದ್ವಿತೀಯ ಪಂದ್ಯವನ್ನು ಡೇನಿಯಲ್‌ ವೆಟರಿ ಪಡೆ 5 ವಿಕೆಟ್‌ಗಳಿಂದ ಜಯಿಸಿತ್ತು. ಯುವರಾಜ್‌ ಸಿಂಗ್‌ ಅವರ ಅರ್ಧ ಶತಕದಿಂದ (50) ಧೋನಿ ಬಳಗ 6ಕ್ಕೆ 149 ರನ್‌ ಮಾಡಿದರೆ, ನ್ಯೂಜಿಲ್ಯಾಂಡ್‌ ಅಂತಿಮ ಎಸೆತದಲ್ಲಿ ಗೆಲುವಿನ ರನ್‌ ಬಾರಿಸಿತ್ತು. 69 ರನ್‌ ಹೊಡೆದ ಬ್ರೆಂಡನ್‌ ಮೆಕಲಮ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸರಿಯಾಗಿ 10 ವರ್ಷಗಳ ಬಳಿಕ (2019) ಇಲ್ಲಿ ಇತ್ತಂಡಗಳ ನಡುವಿನ 2ನೇ ಟಿ20 ಮುಖಾಮುಖೀ ಏರ್ಪಟ್ಟಿತು. ನಾಯಕರಾಗಿದ್ದವರು ರೋಹಿತ್‌ ಶರ್ಮ ಮತ್ತು ಕೇನ್‌ ವಿಲಿಯಮ್ಸನ್‌. ಕಿವೀಸ್‌ 6ಕ್ಕೆ 219 ರನ್‌ ರಾಶಿ ಹಾಕಿದರೆ, ಭಾರತ 19.2 ಓವರ್‌ಗಳಲ್ಲಿ 139ಕ್ಕೆ ಕುಸಿಯಿತು.

ಇತ್ತಂಡಗಳು ವೆಲ್ಲಿಂಗ್ಟನ್‌ನಲ್ಲಿ ಕೊನೆಯ ಸಲ ಮುಖಾಮುಖಿಯಾದದ್ದು 2020ರಲ್ಲಿ. ಈ ಪಂದ್ಯ ಟೈಯಲ್ಲಿ ಅಂತ್ಯ ಕಂಡಿತ್ತು. ಭಾರತದ 8ಕ್ಕೆ 165 ರನ್‌ ಸವಾಲಿಗೆ ಉತ್ತರವಾಗಿ ನ್ಯೂಜಿಲ್ಯಾಂಡ್‌ 7ಕ್ಕೆ 165 ರನ್‌ ಮಾಡಿತು.

ಬುಮ್ರಾ ಎಸೆದ ಸೂಪರ್‌ ಓವರ್‌ನಲ್ಲಿ ನ್ಯೂಜಿ ಲ್ಯಾಂಡ್‌ ಒಂದಕ್ಕೆ 13 ರನ್‌ ಮಾಡಿತು. ಚೇಸಿಂಗ್‌ ವೇಳೆ ರಾಹುಲ್‌ ಮೊದಲೆರಡು ಎಸೆತಗಳಲ್ಲೇ 10 ರನ್‌ ಬಾರಿಸಿದರು (6, 4). 3ನೇ ಎಸೆತದಲ್ಲಿ ಔಟಾದರು. 4-5ನೇ ಎಸೆತಗಳಲ್ಲಿ ಕೊಹ್ಲಿ 2 ಹಾಗೂ 4 ರನ್‌ ಬಾರಿಸಿ ಭಾರತದ ಗೆಲುವನ್ನು ಸಾರಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.