2 ಏಕದಿನ ನಿಷೇಧದ ಭೀತಿಯಲ್ಲಿ ಹಾರ್ದಿಕ್‌, ರಾಹುಲ್‌


Team Udayavani, Jan 11, 2019, 12:40 AM IST

hardik-pandya-kl-rahuldddd.jpg

ನವದೆಹಲಿ: ಬಾಲಿವುಡ್‌ ನಿರ್ದೇಶಕ ಕರಣ್‌ ಜೋಹರ್‌ ಟೀವಿ ಕಾರ್ಯಕ್ರಮ, ಕಾಫಿ ವಿತ್‌ ಕರಣ್‌ನಲ್ಲಿ ಭಾಗವಹಿಸಿ ಪಶ್ಚಾತ್ತಾಪ ಪಡುತ್ತಿರುವುದಲ್ಲದೇ, ಭಾರೀ ಅಪಾಯಕ್ಕೂ ಎದೆಯೊಡ್ಡಬೇಕಾದ ಸಂದಿಗ್ಧ ಸ್ಥಿತಿಗೆ ಹಾರ್ದಿಕ್‌ ಪಾಂಡ್ಯ, ಕೆ.ಎಲ್‌.ರಾಹುಲ್‌ ತಲುಪಿದ್ದಾರೆ. 

ಮಾಡಿರುವ ತಪ್ಪಿಗೆ ಹಾರ್ದಿಕ್‌ ಕ್ಷಮೆಯಾಚಿಸಿದ್ದರೂ, ಅದು ತನಗೆ ಸಮಾಧಾನ ತಂದಿಲ್ಲ. ಇಬ್ಬರನ್ನೂ 2 ಏಕದಿನ ಪಂದ್ಯಗಳ ಮಟ್ಟಿಗೆ ನಿಷೇಧಿಸಲು ಶಿಫಾರಸು ಮಾಡಿದ್ದೇನೆ. ಸಹ ಆಡಳಿತಾಧಿಕಾರಿ ಡಯಾನ ಎಡುಲ್ಜಿ ಈ ಬಗ್ಗೆ ಕಾನೂನಾತ್ಮಕ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅದಾದ ಬಳಿಕ ಅಂತಿಮ ನಿರ್ಧಾರ ಮಾಡಲಾಗುವುದೆಂದು ವಿನೋದ್‌ ರಾಯ್‌ ಹೇಳಿದ್ದಾರೆ.

ಕಾಫಿ ವಿತ್‌ ಕರಣ್‌ ಕಾರ್ಯಕ್ರಮದಲ್ಲಿ ಮಹಿಳೆಯರೊಂದಿಗೆ ತನಗಿರುವ ಸಂಬಂಧವನ್ನು ಬಹಳ ದೊಡ್ಡ ಸಾಧನೆಯೆಂಬಂತೆ ಹಾರ್ದಿಕ್‌ ವರ್ಣಿಸಿದ್ದರು. ಹಲವಾರು ಮಹಿಳೆಯರೊಂದಿಗೆ ತಾನು ಸಂಬಂಧ ನಿಭಾಯಿಸುತ್ತೇನೆ, ಜೊತೆಗೆ ಅವನ್ನೆಲ್ಲ ಪೋಷಕರಿಗೆ ಹೇಳಿಯೇ ಮಾಡುತ್ತೇನೆ ಎಂದು ಹಾರ್ದಿಕ್‌ ಹೇಳಿಕೊಂಡಿದ್ದರು. ಇದು ಮಹಿಳೆಯರ ಬಗ್ಗೆ ಅವರಿಗಿರುವ ಪೂರ್ವಾಗ್ರಹ ಪೀಡಿತ ಹಾಗೂ ಅಶ್ಲೀಲ ಭಾವನೆಯನ್ನು ಪ್ರತಿಧ್ವನಿಸುತ್ತದೆ ಎಂದು ವಿವಾದವೆದ್ದಿತ್ತು. ಇದೇ ಸಂದರ್ಶನದಲ್ಲಿ ಸಚಿನ್‌ಗಿಂತ ವಿರಾಟ್‌ ಕೊಹ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ ಎಂದಿದ್ದೂ ಚರ್ಚೆಗೆ ಕಾರಣವಾಗಿತ್ತು.ವಿವಾದವೆದ್ದ ಬೆನ್ನಲ್ಲೇ ಬಿಸಿಸಿಐ ಇಬ್ಬರಿಗೂ ನೋಟಿಸ್‌ ನೀಡಿ, 24 ಗಂಟೆಯೊಳಗಾಗಿ ಉತ್ತರ ನೀಡುವಂತೆ ಸೂಚಿಸಿತ್ತು. 

ಕೂಡಲೇ ಪ್ರತಿಕ್ರಿಯಿಸಿದ ಹಾರ್ದಿಕ್‌ ಪಾಂಡ್ಯ, ತಾನು ಉದ್ದೇಶಪೂರ್ವಕವಾಗಿ ಹಾಗೆ ಮಾಡಿಲ್ಲ. ಯಾರನ್ನೂ ನೋಯಿಸುವ ಉದ್ದೇಶ ತನಗಿರಲಿಲ್ಲ. ಆ ಶೋ ಇದ್ದಿದ್ದೆ ಹಾಗೆ. ಅದಕ್ಕೆ ತಕ್ಕಂತೆ ನಾನು ಮುಂದುವರಿದೆ ಅಷ್ಟೇ ಎಂದಿದ್ದರು. ಈ ವಿವರಣೆ ತನಗೆ ತೃಪ್ತಿ ತಂದಿಲ್ಲ ಎಂದು ಬಿಸಿಸಿಐ ಹೇಳಿದೆ. 

ಆದರೆ ಇದುವರೆಗೆ ಕೆ.ಎಲ್‌.ರಾಹುಲ್‌ ಏನು ಪ್ರತಿಕ್ರಿಯೆ ನೀಡಿದ್ದಾರೆಂದು ಗೊತ್ತಾಗಿಲ್ಲ.

ಡಯಾನ ಅಭಿಪ್ರಾಯದ ಬಳಿಕೆ ನಿರ್ಧಾರ: ಭಾರತ ಮಹಿಳಾ ಕ್ರಿಕೆಟ್‌ ತಂಡಕ್ಕೆ ಹೊಸ ತರಬೇತುದಾರರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಡಯಾನ ಎಡುಲ್ಜಿಯಿಂದ‌ ವಿರೋಧ ಎದುರಿಸಿದ್ದ ವಿನೋದ್‌ ರಾಯ್‌, ಪ್ರಸ್ತುತ ಪ್ರಕರಣದಲ್ಲಿ ಜಾಣ್ಮೆಯ ಹೆಜ್ಜೆಯಿಡಲು ನಿರ್ಧರಿಸಿದಂತಿದೆ. 2 ಪಂದ್ಯಗಳ ನಿಷೇಧಕ್ಕೆ ವಿನೋದ್‌ ಮನಸ್ಸು ಮಾಡಿದ್ದರೂ, ಈ ಬಗ್ಗೆ ಕಾನೂನು ಏನು ಹೇಳುತ್ತದೆ ಎಂದು ತಿಳಿಯಲು ಡಯಾನ ನಿರ್ಧರಿಸಿದ್ದಾರೆ. ಆದ್ದರಿಂದ ಅವರ ಅಭಿಪ್ರಾಯ ಪಡೆದು ಮುಂದುವರಿಯುವುದಾಗಿ ವಿನೋದ್‌ ಹೇಳಿದ್ದಾರೆ.

ಆಸೀಸ್‌ ವಿರುದ್ಧ 2 ಏಕದಿನಕ್ಕೆ ಅಲಭ್ಯ?
ಒಂದು ವೇಳೆ ಇಬ್ಬರೂ ನಿಷೇಧಕ್ಕೊಳಗಾದರೆ ಆಸ್ಟ್ರೇಲಿಯ ವಿರುದ್ಧ ಜ.12ರಿಂದ ಆರಂಭವಾಗುವ 3 ಪಂದ್ಯಗಳ ಏಕದಿನ ಸರಣಿಯ, ಮೊದಲೆರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಅದು ಮುಂದಿನ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ಇಬ್ಬರ ಪಾಲಿಗೆ ಮಾರಕವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.