![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ನಕಲಿ ಪದವಿ ಪ್ರಮಾಣ ಪತ್ರದ ಸುಳಿಯಲ್ಲಿ ಹರ್ಮನ್ ಪ್ರೀತ್ ಕೌರ್
Team Udayavani, Jul 4, 2018, 6:00 AM IST
![p-21.jpg](https://www.udayavani.com/wp-content/uploads/2018/07/4/p-21.jpg)
ಚಂಡೀಗಢ: ಭಾರತದ ಟಿ20 ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ಪದವಿ ಪ್ರಮಾಣ ಪತ್ರ ನಕಲಿಯೆಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರು ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಹೊಂದಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹುದ್ದೆ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಡಿವೈಎಸ್ಪಿಯಾಗಿ ಕ್ರೀಡಾ ಕೋಟಾದಡಿ ಹರ್ಮನ್ಪ್ರೀತ್ ಕೌರ್ನ ನೇಮಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ, ಮೀರತ್ನ ಚೌಧರಿ ಚರಣ್ಸಿಂಗ್ ವಿಶ್ವ ವಿದ್ಯಾಲಯ (ಸಿಸಿಎಸ್ ವಿವಿ ಸರ್ಕಾರಕ್ಕೆ 2011ರಲ್ಲಿ ತಾವು ಪಡೆದಿದ್ದ ಬಿ.ಎ. ಪದವಿ ಪ್ರಮಾಣ ಪತ್ರವನ್ನು ನೀಡಿದ್ದರು. ನಿಯಮಗಳ ಪ್ರಕಾರ, ಪ್ರಮಾಣ ಪತ್ರದ ಪರಿಶೀಲನೆಗಾಗಿ ಸಿಸಿಎಸ್ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿತ್ತು. ಆ ವೇಳೆ, ವಿಶ್ವ ವಿದ್ಯಾಲಯದ ದಾಖಲೆಗಳಲ್ಲಿ ಹರ್ಮನ್ ಕೌರ್ ವಿವಿಯಲ್ಲಿ ಶಿಕ್ಷಣ ಪಡೆದ ಯಾವುದೇ ದಾಖಲೆಗಳಿಲ್ಲ ಎಂಬುದು ತಿಳಿದು ಬಂದಿದೆ ಎಂದು
ಮಾಧ್ಯಮಗಳ ವರದಿ ಮಾಡಿವೆ. ಈ ವಿಚಾರ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ನೇತೃತ್ವದ ಗೃಹ ಇಲಾಖೆಯ ಸಚಿವಾಲಯದ ಗಮನಕ್ಕೆ ತರಲಾಗಿದ್ದು, ಕೌರ್ ಪ್ರಮಾಣಪತ್ರ ನಕಲಿ ಎಂದು ಸಾಬೀತಾದಲ್ಲಿ ಅವರು ಹೊಂದಿರುವ ಡಿವೈಎಸ್ಪಿ ಹುದ್ದೆಯಿಂದ ವಜಾಗೊಳಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.