ಡ್ವೇನ್ ಬ್ರಾವೊ ದಾಖಲೆ ಮುರಿಯುವ ಸನಿಹದಲ್ಲಿ ಆರ್ ಸಿಬಿ ಹೀರೋ ‘ಪರ್ಪಲ್ ಪಟೇಲ್’


Team Udayavani, Sep 30, 2021, 10:11 AM IST

ಡ್ವೇನ್ ಬ್ರಾವೊ ದಾಖಲೆ ಮುರಿಯುವ ಸನಿಹದಲ್ಲಿ ಆರ್ ಸಿಬಿ ಹೀರೋ ‘ಪರ್ಪಲ್ ಪಟೇಲ್’

ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸುಲಭ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಸನಿಹಕ್ಕೆ ವಿರಾಟ್ ಪಡೆ ಬಂದು ನಿಂತಿದೆ.

ಟಾಸ್ ಗೆದ್ದು ಬೌಲಿಂಗ್ ಮಾಡುವ ವಿರಾಟ್ ನಿರ್ಧಾರವನ್ನು ಪ್ರಶ್ನಿಸುವಂತೆ ಮೊದಲ 10 ಓವರ್ ಗಳಲ್ಲಿ ರಾಜಸ್ಥಾನ್ ರಾಯಲ್ಸ್ ಆಟಗಾರರು ಬ್ಯಾಟಿಂಗ್ ಮಾಡಿದರು. ಎವಿನ್ ಲೆವಿಸ್ ಮತ್ತು ಯಶಸ್ವಿ ಜೈಸ್ವಾಲ್ ಸ್ಪೋಟಕ ಬ್ಯಾಟಿಂಗ್ ಮಾಡಿದರು. 11 ಓವರ್ ನಲ್ಲಿ ನೂರು ರನ್ ಗಳಿಸಿದ್ದ ರಾಜಸ್ಥಾನ್ ನಂತರ ರನ್ ಗಳಿಸಲು ಪರದಾಡಿತು. ಆರ್ ಸಿಬಿ ಬೌಲರ್ ಗಳಾದ ಯುಜಿ ಚಾಹಲ್, ಹರ್ಷಲ್ ಪಟೇಲ್, ಶಹಬಾಜ್ ಅಹಮದ್ ಉತ್ತಮ ಬೌಲಿಂಗ್ ದಾಳಿ ನಡೆಸಿದರು.

ಮುಂಬೈ ವಿರುದ್ಧ ಹ್ಯಾಟ್ರಿಕ್ ಸಾಧನೆ ಮಾಡಿದ್ದ ಹರ್ಷಲ್ ಪಟೇಲ್, ರಾಜಸ್ಥಾನ ವಿರುದ್ಧವೂ ಮೂರು ವಿಕೆಟ್ ಪಡೆದರು. ಮೊದಲ ಮೂರು ಓವರ್ ನಲ್ಲಿ ದುಬಾರಿಯಾಗಿದ್ದ ಹರ್ಷಲ್ ಅಂತಿಮ ಓವರ್ ನಲ್ಲಿ ವಿಕೆಟ್ ಪಡೆದರು. ಈ ಮೂಲಕ ಈ ಐಪಿಎಲ್ ನಲ್ಲಿ ತಮ್ಮ ವಿಕೆಟ್ ಬೇಟೆಯನ್ನು 26ಕ್ಕೆ ವಿಸ್ತರಿಸಿದರು.

ಇದನ್ನೂ ಓದಿ:ಟೀಂ ಇಂಡಿಯಾದಲ್ಲಿ ಮತ್ತೆ ಒಡಕು: ಕೊಹ್ಲಿ ವಿರುದ್ಧ ದೂರು ನೀಡಿದ ಮತ್ತಿಬ್ಬರು ಆಟಗಾರರು

ಒಂದು ಐಪಿಎಲ್ ಸೀಸನ್ ನಲ್ಲಿ ಆರ್ ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಹರ್ಷಲ್ ಪಟೇಲ್ ಬುಧವಾರ ಮಾಡಿದರು (26). ಈ ಹಿಂದೆ ಯುಜಿ ಚಾಹಲ್ ರ 23 ವಿಕೆಟ್ ಸಾಧನೆಯನ್ನು ಹರ್ಷಲ್ ಮುರಿದರು. ಇದೇ ಸಮಯದಲ್ಲಿ ಭಾರತ ರಾಷ್ಟ್ರೀಯ ತಂಡದ ಪರ ಆಡದ ಆಟಗಾರರ ಪೈಕಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಸಾಧನೆಯೂ ಹರ್ಷಲ್ ಹೆಸರಿಗಿದೆ.

ಇದೇ ವೇಳೆ ಡ್ವೇನ್ ಬ್ರಾವೋ ಅವರ ದಾಖಲೆಯೊಂದನ್ನು ಮುರಿಯುವ ಸುವರ್ಣಾವಕಾಶವೂ ಹರ್ಷಲ್ ಮುಂದಿದೆ. ಒಂದು ಸೀಸನ್ ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಸಿಎಸ್ ಕೆ ಬೌಲರ್ ಬ್ರಾವೋ ಮಾಡಿದ್ದರು. ಅವರು 2013ರ ಆವೃತ್ತಿಯಲ್ಲಿ 32 ವಿಕೆಟ್ ಕಬಳಿಸಿದ್ದರು. ಸದ್ಯ ಹರ್ಷಲ್ ಪಟೇಲ್ 26 ವಿಕೆಟ್ ಪಡೆದಿದ್ದು, ಲೀಗ್ ಹಂತದಲ್ಲಿ ಇನ್ನೂ ಮೂರು ಪಂದ್ಯಗಳು ಬಾಕಿ ಉಳಿದಿದೆ. ಪ್ಲೇ ಆಫ್ ಗೆ ಪ್ರವೇಶ ಬಹುತೇಕ ಖಚಿತವಾಗಿರುವ ಕಾರಣ ಕನಿಷ್ಠ ಒಂದು ಪಂದ್ಯವಾದರೂ ಹೆಚ್ಚುವರಿಯಾಗಿ ಸಿಗುತ್ತದೆ. ಹೀಗಾಗಿ ಹರ್ಷಲ್ ಪಟೇಲ್ ಅವರು ಬ್ರಾವೋ ದಾಖಲೆ ಮುರಿಯುವ ಅವಕಾಶವಿದೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.