ಹಾರ್ದಿಕ್, ರಾಹುಲ್ ವಿರುದ್ಧ ಕೇಸು ದಾಖಲು
Team Udayavani, Feb 7, 2019, 12:30 AM IST
ಜೋಧ್ಪುರ: “ಕಾಫಿ ವಿತ್ ಕರಣ್ ಟಾಕ್ ಶೋ’ದಲ್ಲಿ ಮಹಿಳೆಯರ ವಿರುದ್ಧ ಕೆಟ್ಟದಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿರುವ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್.ರಾಹುಲ್ ವಿರುದ್ಧ ಜೋಧ್ಪುರದಲ್ಲಿ ಪ್ರಕರಣವೊಂದು ದಾಖಲಾಗಿದೆ. ಸ್ಥಳೀಯ ವಕೀಲ ಡಿ. ಮೇಘಾÌಲ್ ಎನ್ನುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಲೂನಿ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.
ಟಾಕ್ ಶೋದಲ್ಲಿ ಎಲ್ಲರಿಗೂ ಮಾದರಿಯಾಗಿರುವ ಕ್ರಿಕೆಟಿಗರು ಮಹಿಳೆಯರ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಇಬ್ಬರು ಕ್ರಿಕೆಟಿಗರ ಜತೆಗಿನ ಕಾರ್ಯಕ್ರಮವನ್ನು ನಿರೂಪಿಸಿದ್ದ ಕರಣ್ ಜೋಹರ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಿಸಿಸಿಐನಿಂದ ನಿಷೇಧ ತೆರೆವುಗೊಂಡ ಬಳಿಕ ಹಾರ್ದಿಕ್ ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದಾರೆ.