ಟೀಂ ಹೋಟೆಲ್ ನಲ್ಲಿ ಅಸ್ವಸ್ಥರಾದ ರಾಹುಲ್ ದ್ರಾವಿಡ್: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ
Team Udayavani, Jan 13, 2023, 8:48 AM IST
ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಬರ್ತ್ ಡೇ ಆಚರಿಸಿಕೊಂಡ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತಂಡದೊಂದಿಗೆ ಮೂರನೇ ಏಕದಿನ ಪಂದ್ಯಕ್ಕಾಗಿ ತಿರುವನಂತಪುರಂಗೆ ಪ್ರಯಾಣಿಸಿಲ್ಲ. ಬದಲಾಗಿ ಬೆಂಗಳೂರಿಗೆ ಬಂದಿದ್ದಾರೆ.
ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ ನಾಲ್ಕು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತ್ತು. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ ವಶಪಡಿಸಿಕೊಂಡಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಲ್ಲಿ ಈ ವಾರ ತೆರೆಗೆ ಮೂರು ಚಿತ್ರಗಳು
ಈಡನ್ ಗಾರ್ಡನ್ಸ್ ಪಂದ್ಯದ ಮೊದಲು ದ್ರಾವಿಡ್ ಅವರಿಗೆ ಅನಾರೋಗ್ಯದಿಂದ ಬಳಲಿದರು. ಟೀಮ್ ಹೋಟೆಲ್ನಲ್ಲಿ ರಾಹುಲ್ ದ್ರಾವಿಡ್ ಅಸ್ವಸ್ಥರಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ತಕ್ಷಣವೇ ಅವರಿಗೆ ಚಿಕಿತ್ಸೆ ನೀಡಲಾಯಿತು.
ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ದ್ರಾವಿಡ್ ಅವರ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದಿದ್ದು, ಬೆಂಗಾಲ್ ಕ್ರಿಕೆಟ್ ಅಸೋಸಿಯೇಷನ್ (ಸಿಎಬಿ) ಏರ್ಪಡಿಸಿದ್ದ ವೈದ್ಯರು ಔಷಧಿಯನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದ್ರಾವಿಡ್ ಇದೀಗ ಹೆಚ್ಚಿನ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ತೆರಳಲಿದ್ದು, ವೈದ್ಯರು ಅನುಮತಿ ನೀಡಿದರೆ, ಭಾನುವಾರ (ಜನವರಿ 15) ತಿರುವನಂತಪುರದಲ್ಲಿ ಮೂರನೇ ಏಕದಿನ ಪಂದ್ಯಕ್ಕಾಗಿ ತಂಡವನ್ನು ಸೇರಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…