ಆಸೀಸ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಆಯ್ಕೆ: ಮತ್ತೆ ತಂಡ ಸೇರಿದ ಹೆಟ್ಮೈರ್, ಕಾಟ್ರೆಲ್


Team Udayavani, Jul 8, 2021, 12:33 PM IST

ಆಸೀಸ್ ವಿರುದ್ಧದ ಸರಣಿಗೆ ವಿಂಡೀಸ್ ತಂಡ ಆಯ್ಕೆ: ಮತ್ತೆ ತಂಡ ಸೇರಿದ ಹೆಟ್ಮೈರ್, ಕಾಟ್ರೆಲ್

ಬಾರ್ಬಡೋಸ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗಾಗಿ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದೆ. ಶಿಮ್ರನ್ ಹೆಟ್ಮೈರ್, ರೋಸ್ಟನ್ ಚೇಸ್, ಶೆಲ್ಟನ್ ಕಾಟ್ರೆಲ್ ಮತ್ತೆ ಏಕದಿನ ತಂಡ ಸೇರಿದ್ದಾರೆ. ಈ ಮೂವರು ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಆಯ್ಕೆಯಾಗಿರಲಿಲ್ಲ.

ವೆಸ್ಟ್ ಇಂಡೀಸ್ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿ ಆಡಲಿದೆ. ಜುಲೈ 20ರಿಂದ ಈ ಸರಣಿ ಆರಂಭವಾಗಲಿದ್ದು, ಕೆನ್ನಿಂಗ್ಸ್ಟನ್ ಓವಲ್ ನಲ್ಲಿ ಪಂದ್ಯಗಳು ನಡೆಯಲಿದೆ.

ಇದನ್ನೂ ಓದಿ:ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಹುಟ್ಟುಹಬ್ಬದ ಸಂಭ್ರಮ

ಕಳೆದ ಮಾರ್ಚ್ ನಲ್ಲಿ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆಯಾಗಿದ್ದ ಆದರೆ ಆಡಲು ಅವಕಾಶ ಸಿಗದ ಕೆವಿನ್ ಸಿಂಕ್ಲೇರ್ ಮತ್ತು ಕೈಲ್ ಮೇಯರ್ಸ್ ಗೆ ಆಸೀಸ್ ವಿರುದ್ಧದ ತಂಡದಲ್ಲಿ ಸ್ಥಾನ ನೀಡಿಲ್ಲ. ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದ 24 ವರ್ಷದ ವೇಗದ ಬೌಲರ್ ಆಂಡರ್ಸನ್ ಫಿಲಿಪ್ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಕೈರನ್ ಪೊಲಾರ್ಡ್ ತಂಡವನ್ನು ಮುನ್ನಡೆಸುತ್ತಿದ್ದು, ಶಾಯ್ ಹೋಪ್ ಉಪನಾಯಕನಾಗಿದ್ದಾರೆ. ನಿಕೋಲಸ್ ಪೂರನ್ ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡಲಾಗಿದೆ.

ತಂಡ: ಕೈರನ್ ಪೊಲಾರ್ಡ್ (ನಾಯಕ), ಶೈ ಹೋಪ್ (ಉ.ನಾ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಶಿಮ್ರನ್ ಹೆಟ್ಮೈರ್, ಜೇಸನ್ ಹೋಲ್ಡರ್, ಅಕೀಲ್ ಹೊಸೈನ್, ಅಲ್ಜಾರಿ ಜೋಸೆಫ್, ಎವಿನ್ ಲೂಯಿಸ್, ಜೇಸನ್ ಮೊಹಮ್ಮದ್, ಆಂಡರ್ಸನ್ ಫಿಲಿಪ್, ನಿಕೋಲಸ್ ಪೂರನ್ , ರೊಮಾರಿಯೋ ಶೆಫರ್ಡ್.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.