ಪ್ರವಾಹ ಪೀಡಿತರಿಗೆ ಹಿಮಾ ನೆರವು
Team Udayavani, Jul 18, 2019, 5:09 AM IST
ಹೊಸದಿಲ್ಲಿ: ಖ್ಯಾತ ಆ್ಯತ್ಲೀಟ್ ಹಿಮಾ ದಾಸ್ ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ನಿಂತಿದ್ದಾರೆ. ತಮ್ಮ ತಿಂಗಳ ಸಂಬಳದ ಅರ್ಧದಷ್ಟು ಹಣವನ್ನು ಸಂಕಷ್ಟಕ್ಕೆ ಸಿಲುಕಿದವರ ಸಹಾಯಕ್ಕಾಗಿ ಕೊಟ್ಟಿದ್ದಾರೆ. ನೀವು ಕೂಡ ನೊಂದ ಜನರಿಗೆ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.
ಹಿಮಾ ದಾಸ್ ಕಳೆದ ವರ್ಷ ವೇಗದ ಓಟದಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟು ಐತಿಹಾಸಿಕ ಸಾಧನೆ ಮಾಡಿದ್ದರು. ವಿಶ್ವ ಕಿರಿಯರ ಆ್ಯತ್ಲೆಟಿಕ್ಸ್ ಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರೀ ಸುದ್ದಿಯಾಗಿದ್ದರು.
ಹಿಮಾ ದಾಸ್ ಮೂಲತಃ ಅಸ್ಸಾಂನವರಾಗಿದ್ದು, ಇಂಡಿಯನ್ ಆಯಿಲ್ ಕಾರ್ಪೊ ರೇಷನ್ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡಾ ಕೋಟಾದಡಿ ಅವರಿಗೆ ಈ ಕೆಲಸ ದೊರಕಿತ್ತು. ತಮ್ಮ ಆರ್ಥಿಕ ನೆರವಿನ ಮೊತ್ತವನ್ನು ಹಿಮಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?