ಲಂಕಾ ನೆಲದಲ್ಲಿ ಜಿಂಬಾಬ್ವೆ ಇತಿಹಾಸ


Team Udayavani, Jul 11, 2017, 3:10 AM IST

itihasa.jpg

ಹಂಬಂತೋಟ: ಶ್ರೀಲಂಕಾ ನೆಲದಲ್ಲಿ ಏಕದಿನ ಸರಣಿ ಗೆಲ್ಲುವ ಮೂಲಕ ಜಿಂಬಾಬ್ವೆ ಹೊಸ ಇತಿಹಾಸ ಬರೆದಿದೆ. ಸೋಮವಾರದ 5ನೇ ಹಾಗೂ ನಿರ್ಣಾಯಕ ಪಂದ್ಯವನ್ನು 3 ವಿಕೆಟ್‌ಗಳಿಂದ ಗೆದ್ದ ಜಿಂಬಾಬ್ವೆ 3-2 ಅಂತರದ ವಿಜಯೋತ್ಸವ ಆಚರಿಸಿದೆ.

ಹಂಬಂತೊಟದಲ್ಲಿ ನಡೆದ ಈ ಮುಖಾಮುಖೀಯಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಶ್ರೀಲಂಕಾದಿಂದ ಗಳಿಸಲು ಸಾಧ್ಯವಾದದ್ದು 8ಕ್ಕೆ 203 ರನ್‌ ಮಾತ್ರ. ಜವಾಬಿತ್ತ ಜಿಂಬಾಬ್ವೆ 38.1 ಓವರ್‌ಗಳಲ್ಲಿ 7 ವಿಕೆಟಿಗೆ 204 ರನ್‌ ಬಾರಿಸಿ ವಿಜಯಿಯಾಯಿತು. ಇದು ಏಕದಿನ ಇತಿಹಾಸದಲ್ಲೇ ಲಂಕಾ ವಿರುದ್ಧ ಜಿಂಬಾಬ್ವೆ ಸಾಧಿಸಿದ ಮೊದಲ ಸರಣಿ ಗೆಲುವು ಕೂಡ ಹೌದು.

ಗಾಲೆಯಲ್ಲಿ 300 ರನ್‌ ಮೊತ್ತವನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ದ್ವೀಪ ರಾಷ್ಟ್ರದಲ್ಲಿ ಗೆಲುವಿನ ಬಾವುಟ ಹಾರಿಸಿದ ಜಿಂಬಾಬ್ವೆ, ಅನಂತರ 2-1 ಹಿನ್ನಡೆಗೆ ಸಿಲುಕಿತು. 4ನೇ ಪಂದ್ಯವಲ್ಲಿ ಮತ್ತೆ ಮೇಲುಗೈ ಸಾಧಿಸಿ ಸರಣಿಯನ್ನು ಸಮಬಲಕ್ಕೆ ತಂದು ನಿಲ್ಲಿಸಿತು. ಸೋಮವಾರದ ನಿರ್ಣಾಯಕ ಮುಖಾಮುಖೀಯಲ್ಲಿ ಮ್ಯಾಥ್ಯೂಸ್‌ ಪಡೆಗೆ ನೀರು ಕುಡಿಸಿತು.

ಗೆಲುವಿನ “ರಾಜ’: ಆಲ್‌ರೌಂಡ್‌ ಪ್ರದರ್ಶನವಿತ್ತ ಜಿಂಬಾಬ್ವೆಯ ಸಿಕಂದರ್‌ ರಾಜ ಗೆಲುವಿನ ರೂವಾರಿ ಯಾಗಿ ಮೂಡಿಬಂದರು. 21ಕ್ಕೆ 3 ವಿಕೆಟ್‌ ಕಿತ್ತ ಅವರು, ತಂಡ ತೀವ್ರ ಸಂಕಟದಲ್ಲಿದ್ದಾಗ ಅಜೇಯ 27 ರನ್‌ ಮಾಡಿ ದಡ ಮುಟ್ಟಿಸಿದರು. ಈ ಸಾಧನೆಗಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು. ಹ್ಯಾಮಿಲ್ಟನ್‌ ಮಸಕಝ ಸರಣಿಶ್ರೇಷ್ಠರೆನಿಸಿದರು.

ಮಸಕಝ (73), ಮೈರ್‌ (43) ಮತ್ತು ಮುಸಕಂಡ (37) ಲಂಕಾ ದಾಳಿಯನ್ನು ಸಲೀಸಾಗಿ ಎದುರಿಸುತ್ತ ಹೋಗಿದ್ದರು. 24ನೇ ಓವರ್‌ ವೇಳೆ ಒಂದೇ ವಿಕೆಟಿಗೆ 137 ರನ್‌ ಮಾಡಿದ ಜಿಂಬಾಬ್ವೆ ಬಹಳ ಸುಲಭದಲ್ಲಿ ಗೆಲ್ಲುವ ಸೂಚನೆ ನೀಡಿತ್ತು. ಆದರೆ ಸ್ಕೋರ್‌ 175ಕ್ಕೆ ತಲುಪುವಾಗ 7 ವಿಕೆಟ್‌ ಉರುಳಿತು. ಹತ್ತೇ ಓವರ್‌ಗಳಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಲಂಕೆಯ ಮುಂದೆ ಗೆಲುವಿನ ಅವಕಾಶ ತೆರೆಯಲ್ಪಟ್ಟಿತು. ಆದರೆ ರಾಜ (ಔಟಾಗದೆ 27) ಮತ್ತು ನಾಯಕ ಕ್ರೆಮರ್‌ (ಔಟಾಗದೆ 11) ಸೇರಿಕೊಂಡು ಮುರಿಯದ 8ನೇ ವಿಕೆಟಿಗೆ 29 ರನ್‌ ಒಟ್ಟುಗೂಡಿಸಿದರು; ಕೈತಪ್ಪಲಿದ್ದ ಗೆಲುವನ್ನು ಒಲಿಸಿಕೊಂಡೇ ಬಿಟ್ಟರು.

ಲಂಕಾದ ಸಣ್ಣ ಮೊತ್ತದಲ್ಲೂ ಇಬ್ಬರಿಂದ ಅರ್ಧ ಶತಕ ದಾಖಲಾಯಿತು. ಗುಣತಿಲಕ 52 ಹಾಗೂ ಗುಣರತ್ನೆ ಅಜೇಯ 59 ರನ್‌ ಬಾರಿಸಿದರು. 28 ರನ್‌ ಎಕ್ಸ್‌ಟ್ರಾ ರೂಪದಲ್ಲಿ ಬಂತು!

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-8 ವಿಕೆಟಿಗೆ 203 (ಗುಣರತ್ನೆ ಔಟಾಗದೆ 59, ಗುಣತಿಲಕ 52, ರಾಜ 21ಕ್ಕೆ 3, ಕ್ರೆಮರ್‌ 23ಕ್ಕೆ 2). ಜಿಂಬಾಬ್ವೆ-38.1 ಓವರ್‌ಗಳಲ್ಲಿ 7 ವಿಕೆಟಿಗೆ 204 (ಮಸಕಝ 73, ಮೈರ್‌ 43, ಮುಸಕಂಡ 37, ರಾಜ ಔಟಾಗದೆ 27, ಧನಂಜಯ 47ಕ್ಕೆ 4). ಪಂದ್ಯಶ್ರೇಷ್ಠ: ಸಿಕಂದರ್‌ ರಾಜ. ಸರಣಿಶ್ರೇಷ್ಠ: ಹ್ಯಾಮಿಲ್ಟನ್‌ ಮಸಕಝ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.