ಜಪಾನ್‌ಗೆ ಆಘಾತವಿಕ್ಕಿದ ಭಾರತ ಫೈನಲಿಗೆ


Team Udayavani, Aug 21, 2019, 5:19 AM IST

india

ಟೋಕಿಯೊ: ಸ್ಟ್ರೈಕರ್‌ ಮನ್‌ದೀಪ್‌ ಸಿಂಗ್‌ ಅವರ ಆಕರ್ಷಕ ಹ್ಯಾಟ್ರಿಕ್‌ ಗೋಲುಗಳ ನೆರವಿನಿಂದ ಭಾರತೀಯ ಪುರುಷರ ಹಾಕಿ ತಂಡವು ಆತಿಥೇಯ ಜಪಾನ್‌ ತಂಡವನ್ನು 6-3 ಗೋಲುಗಳಿಂದ ಭರ್ಜರಿಯಾಗಿ ಸೋಲಿಸಿ ಒಲಿಂಪಿಕ್‌ ಟೆಸ್ಟ್‌ ಹಾಕಿ ಸರಣಿಯ ಫೈನಲ್ ಹಂತಕ್ಕೇರಿದೆ.

ಈ ಗೆಲುವಿನಿಂದ ಭಾರತ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿತು. ಬುಧವಾರ ನಡೆಯುವ ಫೈನಲ್ ಹೋರಾಟದಲ್ಲಿ ಭಾರತವು ಅಗ್ರಸ್ಥಾನಿ ನ್ಯೂಜಿಲ್ಯಾಂಡ್‌ ತಂಡವನ್ನು ಎದುರಿಸಲಿದೆ. ಈ ಹಿಂದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡಕ್ಕೆ 1-2 ಗೋಲುಗಳಿಂದ ಶರಣಾಗಿದ್ದ ಭಾರತ ಫೈನಲ್ನಲ್ಲಿ ಸೇಡು ತೀರಿಸಿಕೊಳ್ಳಲು ಯೋಚಿಸುತ್ತಿದೆ.

ಆತಿಥೇಯ ಜಪಾನ್‌ ತಂಡದೆದುರಿನ ಮಹತ್ವದ ಪಂದ್ಯದಲ್ಲಿ ಭಾರತ ವೀರೋಚಿತ ಪ್ರದರ್ಶನ ನೀಡಿ ಮಣಿಸುವಲ್ಲಿ ಯಶಸ್ವಿ ಯಾಯಿತು. ತವರಿನ ಲಾಭ ಪಡೆದ ಜಪಾನ್‌ ತಂಡವನ್ನು ಉರುಳಿಸಿದ ಭಾರತ ಫೈನಲಿಗೇರಿತು.

ನೀಲಕಂಠ ಶರ್ಮ, ನೀಲಮ್‌ ಸಂಜೀಪ್‌ ಕ್ಸೆಸ್‌ ಮತ್ತು ಗುರ್ಜಾಂತ್‌ ಸಿಂಗ್‌ ಗೋಲು ಹೊಡೆದ ಇತರ ಮೂವರು ಆಟಗಾರರು. ಕೆಂಟರೊ ಫ‌ಕುಡ, ಕೆಂಟ ತನಕ ಮತ್ತು ಕಜುಮ ಮುರಾಟ ಜಪಾನ್‌ ಪರ ಗೋಲು ಹೊಡೆದ ಆಟಗಾರರಾಗಿದ್ದಾರೆ.

ನೀಲಕಂಠ ಶುಭಾರಂಭ

ಪಂದ್ಯ ಆರಂಭವಾದ ಮೂರನೇ ನಿಮಿಷದಲ್ಲಿ ನೀಲಕಂಠ ಶರ್ಮ ಫೀಲ್ಡ್ ಗೋಲು ಬಾರಿಸಿ ಶುಭಾರಂಭಗೈದರು. ಈ ಮುನ್ನಡೆಯಿಂದ ಉತ್ಸಾಹಭರಿತಗೊಂಡ ಭಾರತೀಯರು ಜಪಾನ್‌ ರಕ್ಷಣಾ ಆಟಗಾರರಿಗೆ ಒತ್ತಡ ಹೇರುತ್ತ ಹೋದರು. ಗುರ್ಜಾಂತ್‌ ಸಿಂಗ್‌ ಗೋಲು ಹೊಡೆಯುವ ಪ್ರಯತ್ನ ನಡೆಸಿದರೂ ಆದು ಹೊರಗೆ ಹೋಯಿತು.

ಏಳನೇ ನಿಮಿಷದಲ್ಲಿ ಭಾರತಕ್ಕೆ ಪೆನಾಲ್ಟಿ ಕಾರ್ನರ್‌ ಅವಕಾಶ ಲಭಿಸಿತು. ನೀಲಮ್‌ ಸಂಜೀಪ್‌ ಅದ್ಭುತ ಹೊಡೆತದ ಮೂಲಕ ಗೋಲಾಗಿ ಪರಿವರ್ತಿಸಿ ಭಾರತಕ್ಕೆ 2-0 ಮುನ್ನಡೆ ದೊರಕಿಸಿಕೊಟ್ಟರು. ಮೊದಲ ಕ್ವಾರ್ಟರ್‌ನಲ್ಲಿ ಭಾರತ 3-0 ಮುನ್ನಡೆಯಲ್ಲಿತ್ತು.

ದ್ವಿತೀಯ ಕಾರ್ಟರ್‌ನಲ್ಲೂ ಭಾರತೀಯರು ಪ್ರಾಬಲ್ಯ ಮೆರೆದರು. ಜರ್ಮನ್‌ಪ್ರೀತ್‌ ಸಿಂಗ್‌ ಮತ್ತು ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಗೋಲು ಹೊಡೆಯುವ ಪ್ರಯತ್ನವನ್ನು ಜಪಾನ್‌ ಗೋಲ್ಕೀಪರ್‌ ತಕಾಶಿ ಯೊಶಿಕಾವ ಅದ್ಭುತವಾಗಿ ರಕ್ಷಿಸಿದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.