ವಿಶ್ವಕಪ್‌ ಹಾಕಿ 2023: ಬೆಲ್ಜಿಯಂ, ಜರ್ಮನಿಗೆ ಭರ್ಜರಿ ಗೆಲುವು

ನ್ಯೂಜಿಲ್ಯಾಂಡ್ಸ್‌, ನೆದರ್ಲೆಂಡ್ಸ್‌ಗೆ ಗೆಲುವು

Team Udayavani, Jan 14, 2023, 11:08 PM IST

ವಿಶ್ವಕಪ್‌ ಹಾಕಿ 2023: ಬೆಲ್ಜಿಯಂ, ಜರ್ಮನಿಗೆ ಭರ್ಜರಿ ಗೆಲುವು

ಭುವನೇಶ್ವರ: ಹಾಲಿ ಚಾಂಪಿಯನ್‌ ಬೆಲ್ಜಿಯಂ ತಂಡವು “ಬಿ’ ಬಣದ ಪಂದ್ಯದಲ್ಲಿ ದಕ್ಷಿಣ ಕೊರಿಯ ತಂಡವನ್ನು 5-0 ಗೋಲುಗಳಿಂದ ಭರ್ಜರಿಯಾಗಿ ಸೋಲಿಸಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್‌ ಜರ್ಮನಿ ತಂಡವು ಹಾಲಿ ಏಷ್ಯನ್‌ ಗೇಮ್ಸ್‌ ಚಾಂಪಿಯನ್‌ ಜಪಾನ್‌ ತಂಡವನ್ನು 3-0 ಗೋಲುಗಳಿಂದ ಸೋಲಿಸಿದೆ.

ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಬೆಲ್ಜಿಯಂ ಆಟಗಾರರು ಅದ್ಭುತ ಆಟದ ಪ್ರದರ್ಶನ ನೀಡಿದರು. ಆರಂಭದ ಎರಡು ಕ್ವಾರ್ಟರ್‌ ಅವಧಿಯ ಆಟದ ವೇಳೆ ಕೊರಿಯ ಆಟಗಾರರು ಬೆಲ್ಜಿಯಂ ಆಟಗಾರರಿಗೆ ಗೋಲು ಹೊಡೆಯಲು ಅವಕಾಶವನ್ನೇ ನೀಡಲಿಲ್ಲ. ಆದರೆ ವಿಶ್ವ ಮತ್ತು ಒಲಿಂಪಿಕ್‌ ಚಾಂಪಿಯನ್‌ ಬೆಲ್ಜಿಯಂ ಆಬಳಿಕ ಮೂರು ಮತ್ತು ನಾಲ್ಕನೇ ಅವಧಿಯ ಆಟದ ವೇಳೆ ಐದು ಗೋಲು ಹೊಡೆದು ಸಂಭ್ರಮಿಸಿತು. ಐವರು ಆಟಗಾರರು ಗೋಲು ಹೊಡೆದರು.

ಮೂರನೇ ಕ್ವಾರ್ಟರ್‌ನ ಮೊದಲ ನಿಮಿಷದಲ್ಲಿ ಹೆಂಡ್ರಿಕ್ಸ್‌ ಅಲೆಕ್ಸಾಂಡರ್‌ ಗೋಲು ಖಾತೆ ತೆರೆದರು. 42ನೇ ನಿಮಿಷದಲ್ಲಿ ಕಾಸಿನ್ಸ್‌ ಟಾಂಗುಯಿ, ವಾನ್‌ ಔಬೆಲ್‌ ಫ್ಲೋರೆಂಟ್‌ ಪೆನಾಲ್ಟಿ ಕಾರ್ನರ್‌ ಮೂಲಕ 49ನೇ ನಿಮಿಷದಲ್ಲಿ ಹೊಡೆದರು. 51 ಮತ್ತು 57ನೇ ನಿಮಿಷದಲ್ಲಿ ಸೆಬಾಸ್ಟಿಯೆನ್‌ ಮತ್ತು ಆರ್ಥರ್‌ ಗೋಲು ಹೊಡೆದು ತಂಡದ ಬೃಹತ್‌ ಗೆಲುವಿಗೆ ಕಾರಣರಾದರು.

ಜರ್ಮನಿಗೆ ಜಯ
ದಿನದ ನಾಲ್ಕನೇ ಪಂದ್ಯದಲ್ಲಿ ಜರ್ಮನಿ ತಂಡವು ಜಪಾನ್‌ ತಂಡವನ್ನು 3-0 ಗೋಲುಗಳಿಂದ ಸೋಲಿಸಿತು. 35ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಗ್ರಾಮ್‌ಬುಶ್‌ ಮ್ಯಾಟ್ಸ್‌ ಗೋಲು ಹೊಡೆದು ತಂಡಕ್ಕೆ ಮುನ್ನಡೆ ಒದಗಿಸಿದರು. ಆಬಳಿಕ ಐದು ನಿಮಿಷ ಕಳೆಯುವಷ್ಟರಲ್ಲಿ ರುಹ್ರು ಕ್ರಿಸ್ಟೋಫ‌ರ್‌ ಗೋಲನ್ನು ಹೊಡೆದರೆ 48ನೇ ನಿಮಿಷದಲ್ಲಿ ಪ್ರಿನ್‌ಥೀಸ್‌ ತಂಡದ ಮೂರನೇ ಗೋಲು ಹೊಡೆದರು.

ನ್ಯೂಜಿಲ್ಯಾಂಡ್ಸ್‌ ಶುಭಾರಂಭ
ರೂರ್ಕೆಲ: ಮೂರು ಬಾರಿಯ ಚಾಂಪಿಯನ್‌ ನೆದರ್ಲೆಂಡ್ಸ್‌ ಮತ್ತು ನ್ಯೂಜಿಲ್ಯಾಂಡ್‌ ಪುರುಷರ ಹಾಕಿ ವಿಶ್ವಕಪ್‌ನ “ಸಿ’ ಬಣದ ಪಂದ್ಯಗಳಲ್ಲಿ ತಮ್ಮ ಎದುರಾಳಿ ಯೆದುರು ಅಮೋಘ ಗೆಲುವು ಸಾಧಿಸಿ ಶುಭಾರಂಭಗೈದಿದೆ.

ದಿನದ ಆರಂಭಿಕ ಪಂದ್ಯದಲ್ಲಿ ಸ್ಯಾಮ್‌ ಹಿಹಾ ಅವರ ಅವಳಿ ಗೋಲುಗಳ ನೆರವಿನಿಂದ ನ್ಯೂಜಿಲ್ಯಾಂಡ್‌ ತಂಡವು ಚಿಲಿ ತಂಡವನ್ನು 3-1 ಗೋಲುಗಳಿಂದ ಭರ್ಜರಿಯಾಗಿ ಸೋಲಿಸಿತು.

ಮೊದಲ ಎರಡು ಕ್ವಾರ್ಟರ್‌ ಆಟದ ವೇಳೆ ಸ್ಯಾಮ್‌ ಹಿಹಾ ಅನುಕ್ರಮವಾಗಿ 11ನೇ ಮತ್ತು 18ನೇ ನಿಮಿಷದಲ್ಲಿ ಫೀಲ್ಡ್‌ ಗೋಲು ದಾಖಲಿಸಿದರು. ಈ ಮೊದಲು ಸ್ಯಾಮ್‌ ಲೇನ್‌ 9ನೇ ನಿಮಿಷದಲ್ಲಿ ಫೀಲ್ಡ್‌ ಮೂಲಕವೇ ಗೋಲು ಹೊಡೆದು ಮುನ್ನಡೆ ಒದಗಿಸಿದ್ದರು.

ನೆದರ್ಲೆಂಡ್ಸ್‌ಗೆ ಗೆಲುವು
ದಿನನ ಇನ್ನೊಂದು ಪಂದ್ಯದಲ್ಲಿ ತಿಜ್‌ ವಾನ್‌ ಡ್ಯಾಮ್‌ ಅವರು 19ನೇ ನಿಮಿಷದಲ್ಲಿ ಫೀಲ್ಡ್‌ ಮೂಲಕ ಹೊಡೆದ ಗೋಲಿನಿಂದಾಗಿ ನೆದರ್ಲೆಂಡ್ಸ್‌ ಮುನ್ನಡೆ ಸಾಧಿಸಿತು. ನಾಲ್ಕು ನಿಮಿಷಗಳ ಬಳಿಕ ಜಿಪ್‌ ಜಾನ್ಸೆನ್‌ ಮುನ್ನಡೆ ಯನ್ನು 2-0ಕ್ಕೇರಿಸಿದರು. ಅಂತಿಮ ಕ್ವಾರ್ಟರ್‌ ವೇಳೆ ತಂಡಕ್ಕೆ ಲಭಿಸಿದ ಪೆನಾಲ್ಟಿ ಅವಕಾಶದಲ್ಲಿ ತೆಯುನ್‌ ಬೈನ್ಸ್‌ ಗೋಲು ದಾಖಲಿಸಿ ಮುನ್ನಡೆಯನ್ನು 3-0ಕ್ಕೆ ವಿಸ್ತರಿಸಿದರು.

 

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.