ವಿಶ್ವಕಪ್‌ ಹಾಕಿ 2023: ಇಂಗ್ಲೆಂಡ್‌ ಸವಾಲು ಎದುರಿಸಲು ಭಾರತ ಸಿದ್ಧ


Team Udayavani, Jan 15, 2023, 7:35 AM IST

ವಿಶ್ವಕಪ್‌ ಹಾಕಿ 2023: ಇಂಗ್ಲೆಂಡ್‌ ಸವಾಲು ಎದುರಿಸಲು ಭಾರತ ಸಿದ್ಧ

ರೂರ್ಕೆಲ: ಬಲಿಷ್ಠ ಸ್ಪೇನ್‌ ತಂಡವನ್ನು ಉರುಳಿಸಿ ವಿಶ್ವಕಪ್‌ ಅಭಿಯಾನವನ್ನು ಉತ್ತಮ ರೀತಿಯಲ್ಲಿ ಆರಂಭಿಸಿರುವ ಭಾರತ ತಂಡವು ರವಿವಾರ ಇಂಗ್ಲೆಂಡ್‌ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ.

ತಪ್ಪುರಹಿತ ಆಟದ ಪ್ರದರ್ಶನ ನೀಡಿ ಸ್ಪೇನ್‌ ತಂಡವನ್ನು 2-0 ಗೋಲುಗಳಿಂದ ಕೆಡಹಿದ ಭಾರತವು ರವಿವಾರ ಕಠಿನ ತಂಡಗಳಲ್ಲಿ ಒಂದಾದ ಇಂಗ್ಲೆಂಡ್‌ ತಂಡದೆದುರು ಗೆಲ್ಲುವ ವಿಶ್ವಾಸದಲ್ಲಿದೆ.

ಸ್ಪೇನ್‌ ವಿರುದ್ಧ ಭಾರತ ಆರಂಭದ ಎರಡು ಕ್ವಾರ್ಟರ್‌ ಹೋರಾಟದಲ್ಲಿ ಆಕ್ರಮಣಕಾರಿ ಆಟದ ಪ್ರದರ್ಶನ ನೀಡಿತು. ಸ್ಥಳೀಯ ಹೀರೊ ಅಮಿತ್‌ ರೋಹಿದಾಸ್‌ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಖಾತೆ ತೆರೆದಿದ್ದರೆ ಹಾರ್ದಿಕ್‌ ಸಿಂಗ್‌ ಏಕಾಂಗಿ ಹೋರಾಟ ದಿಂದ ಮುನ್ನಡೆಯನ್ನು 2-0ಕ್ಕೇರಿ ಸಿದ್ದರು. ಆಬಳಿಕ ನಾಯ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಉಪನಾಯಕ ರೋಹಿದಾಸ್‌ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಮಹತ್ವ ನೀಡಿದರು.

ಸ್ಪೇನ್‌ಗಿಂತಲೂ ಇಂಗ್ಲೆಂಡ್‌ ಬಲಿಷ್ಠ ತಂಡವಾಗಿದ್ದರಿಂದ ಭಾರತ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಮಹತ್ವ ನೀಡುವುದು ಅತೀ ಮುಖ್ಯವಾಗಿದೆ. ರಕ್ಷಣೆಯ ಜತೆ ಆಕ್ರಮಣಕಾರಿ ಆಟ ಪ್ರದರ್ಶಿಸಿದರೆ ಭಾರತ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇಂಗ್ಲೆಂಡ್‌ ಗುರುವಾರ ನಡೆದ ಪಂದ್ಯದಲ್ಲಿ ವೇಲ್ಸ್‌ ತಂಡವನ್ನು 5-0 ಗೋಲುಗಳಿಂದ ಸೋಲಿಸಿತ್ತು.

ಮೊದಲ ಪಂದ್ಯದಲ್ಲಿ ಗೆದ್ದಿರುವುದು ಒಳ್ಳೆಯದಾಗಿದೆ. ರಕ್ಷಣಾತ್ಮಕ ಆಟದ ಪ್ರದರ್ಶನ ಮತ್ತು ಚೆಂಡಿನ ನಿಯಂತ್ರಣವನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಸಮಾಧಾನ ತಂದಿದೆ. ಮೊದಲ ಪಂದ್ಯದಲ್ಲಿ ಕೆಲವು ಆಟಗಾರರು ತಮ್ಮ ಶ್ರೇಷ್ಠ ನಿರ್ವಹಣೆ ನೀಡಲಿಲ್ಲ. ಆದರೆ ವಿಶ್ವಕಪ್‌ನಂತಹ ಪಂದ್ಯಗಳಲ್ಲಿ ಎಲ್ಲರೂ ಸಂಘಟಿತ ಹೋರಾಟ ನೀಡುವುದು ಅತ್ಯಗತ್ಯ ಎಂದು ಕೋಚ್‌ ಗ್ರಹಾಂ ರೀಡ್‌ ಹೇಳಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಗೆದ್ದರೆ ಭಾರತ ಮುಂದಿನ ಸುತ್ತಿಗೇರುವ ಅವಕಾಶ ಹೆಚ್ಚಲಿದೆ. ಇದಕ್ಕಾಗಿ ಭಾರತ ಶಕ್ತಿಮೀರಿ ಪ್ರಯತ್ನಿಸುವ ಸಾಧ್ಯತೆಯಿದೆ.

ಮೂರು ಬಾರಿ ಮುಖಾಮುಖಿ
ಭಾರತ ಮತ್ತು ಇಂಗ್ಲೆಂಡ್‌ ಕಳೆದ ವರ್ಷ ಮೂರು ಬಾರಿ ಮುಖಾಮುಖಿಯಾಗಿದ್ದವು. ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಆಡಿದ ಈ ಹಿಂದಿನ ಪಂದ್ಯದಲ್ಲಿ ಭಾರತ 4-4 ಅಂತರದಿಂದ ಸಮಬಲ ಸ್ಥಾಪಿಸಿತ್ತು. ಎಫ್ಐಎಚ್‌ ಪ್ರೊ ಲೀಗ್‌ನ ಮೊದಲ ಲೆಗ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ 3-3 ಡ್ರಾ ಸಾಧಿಸಿದ್ದ ಭಾರತ ಎಪ್ರಿಲ್‌ನಲ್ಲಿ ಮತ್ತೆ ಆಡಿದಾಗ 4-3 ಗೋಲುಗಳಿಂದ ಜಯಭೇರಿ ಬಾರಿಸಿತ್ತು. ಒಟ್ಟಾರೆ ಇಂಗ್ಲೆಂಡ್‌ ವಿರುದ್ಧ ಭಾರತ 10 ಪಂದ್ಯಗಳಲ್ಲಿ ಜಯಿಸಿದ್ದರೆ ಇಂಗ್ಲೆಂಡ್‌ 7ರಲ್ಲಿ ಗೆಲುವು ಸಾಧಿಸಿತ್ತು. ನಾಲ್ಕು ಪಂದ್ಯಗಳು ಡ್ರಾ ಆಗಿದ್ದವು.

ಟಾಪ್ ನ್ಯೂಸ್

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ರಸ್ತೆ ಬದಿ ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Road Side ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

aeroplane

Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

Singapore Open Badminton: ಸಿಂಧು, ಸೈನಾಗೆ ಸೋಲು

Singapore Open Badminton: ಸಿಂಧು, ಸೈನಾಗೆ ಸೋಲು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ರಸ್ತೆ ಬದಿ ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Road Side ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!