ಆಂಗ್ಲರ ವಿರುದ್ಧದ ಮೊದಲ ಏಕದಿನದಲ್ಲಿ ಭಾರತಕ್ಕೆ 8 ವಿಕೆಟ್‌ ಜಯ


Team Udayavani, Jul 13, 2018, 9:32 AM IST

3000.jpg

ನಾಟಿಂಗ್‌ಹ್ಯಾಮ್‌: ಎಡಗೈ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಅವರ ಭರ್ಜರಿ ಬೌಲಿಂಗ್‌ (25 ರನ್‌ಗೆ 6 ವಿಕೆಟ್‌) ಹಾಗೂ
ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾರ ಅಜೇಯ ಶತಕದಿಂದಾಗಿ (137* ರನ್‌, 114 ಎಸೆತ, 15 ಬೌಂಡರಿ, 4
ಸಿಕ್ಸರ್‌) ಪ್ರವಾಸಿ ಭಾರತ ತಂಡ, ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಗಳಿಸಿದೆ. ಇದು, ರೋಹಿತ್‌ ಅವರ 18ನೇ ಏಕದಿನ ಶತಕ.

ಟ್ರೆಂಟ್‌ಬ್ರಿಜ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ, ಮೊದಲು ಬ್ಯಾಟ್‌ ಮಾಡಿದ್ದ ಇಂಗ್ಲೆಂಡ್‌, 49.5
ಓವರ್‌ಗಳಲ್ಲಿ 268 ರನ್‌ಗಳಿಗೆ ಆಲೌಟ್‌ ಆಯಿತು. ಆನಂತರ ಬ್ಯಾಟಿಂಗ್‌ಗೆ ಇಳಿದ ಭಾರತ, 40.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 269 ರನ್‌ ಪೇರಿಸಿ ಗೆಲುವಿನ ನಗೆ ಬೀರಿತು.

ಇಂಗ್ಲೆಂಡ್‌ ನೀಡಿದ್ದ ಸವಾಲನ್ನು ದಿಟ್ಟತನದಿಂದ ಎದುರಿಸಿದ ಭಾರತದ ಆರಂಭಿಕರಾದ ರೋಹಿತ್‌ ಹಾಗೂ ಶಿಖರ್‌ ಮೊದಲ ವಿಕೆಟ್‌ಗೆ 59 ರನ್‌ ಪೇರಿಸಿದರು. ಶಿಖರ್‌ ಔಟಾದ ನಂತರ, ರೋಹಿತ್‌-ಕೊಹ್ಲಿ ಜೋಡಿ, 2ನೇ ವಿಕೆಟ್‌ಗೆ ಬರೋಬ್ಬರಿ 167 ರನ್‌ ಜೊತೆಯಾಟ ನೀಡಿ, ತಂಡದ ಗೆಲುವಿಗೆ ನಾಂದಿ ಹಾಡಿದರು. 33ನೇ ಓವರ್‌ನಲ್ಲಿ ಕೊಹ್ಲಿ (75 ರನ್‌, 82 ಎಸೆತ, 7 ಬೌಂಡರಿ) ವಿಕೆಟ್‌ ಉರುಳಿದರೂ, ಆನಂತರದ ಬಂದ ಕೆ.ಎಲ್‌. ರಾಹುಲ್‌ ಜತೆಗೂಡಿದ ರೋಹಿತ್‌, ಇನಿಂಗ್ಸ್‌ ಮುಕ್ತಾಯಕ್ಕೆ ಸುಮಾರು 10 ಓವರ್‌ ಬಾಕಿಯಿರುವಂತೆಯೇ ತಂಡಕ್ಕೆ ಜಯ ತಂದರು.

ಕಾಡಿದ ಕುಲದೀಪ್‌
 ಟಾಸ್‌ ಗೆದ್ದ ಭಾರತ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಹಾಗಾಗಿ, ಮೊದಲು ಬ್ಯಾಟಿಂಗ್‌ಗೆ ಇಳಿದ ಇಂಗ್ಲೆಂಡ್‌ ತಂಡವನ್ನು ಭಾರತೀಯ ಸ್ಪಿನ್ನರ್‌ ಕುಲದೀಪ್‌ ಯಾದವ್‌ ಬಿಡದೇ ಕಾಡಿದರು. ಇತ್ತೀಚೆಗೆ, ಮ್ಯಾಂಚೆಸ್ಟರ್‌ನಲ್ಲಿ ನಡೆದಿದ್ದ ಇಂಗ್ಲೆಂಡ್‌ ವಿರುದ್ಧದ ಟಿ20ಯಲ್ಲಿ ಐದು ವಿಕೆಟ್‌ ಸಾಧನೆ ಮಾಡಿದ್ದ ಯಾದವ್‌, ಇಲ್ಲೂ ತಮ್ಮ ಕೈಚಳಕ ಮೆರೆದರು. ಮೊದಲ 10 ಓವರ್‌ಗಳಲ್ಲಿ ತಂಡದ ಮೊತ್ತವನ್ನು 70ರ ಗಡಿ ದಾಟಿಸಿದ್ದ ಆರಂಭಿಕರಾದ ಜೇಸನ್‌ ರಾಯ್‌ ಹಾಗೂ ಜಾನಿ ಬೇರ್‌ಸ್ಟೋ ಇಬ್ಬರನ್ನೂ ಪೆವಿಲಿಯನ್‌ಗೆ ಅಟ್ಟಿ, ಆನಂತರ ಜೊ ರೂಟ್‌, ಬೆನ್‌ ಸ್ಟೋಕ್ಸ್‌,ಜಾಸ್‌ ಬಟ್ಲರ್‌, ಡೇವಿಡ್‌ ವಿಲ್ಲೆ ವಿಕೆಟ್‌ ಉರುಳಿಸಿದರು. ಉಮೇಶ್‌ ಯಾದವ್‌ 2 ವಿಕೆಟ್‌ (ಮೊಯೀನ್‌ ಅಲಿ, ಆದಿಲ್‌ ರಶೀದ್‌) ಗಳಿಸಿದರೆ, ಯಜುವೇಂದ್ರ ಚಾಹಲ್‌ ಒಂದು ವಿಕೆಟ್‌ (ಇಯಾನ್‌ ಮೊರ್ಗನ್‌) ಗಳಿಸಿದರು.

ಸಂಕ್ಷಿಪ್ತ ಸ್ಕೋರ್‌ 
ಇಂಗ್ಲೆಂಡ್‌
 49.5 ಓವರ್‌ಗೆ 268ಕ್ಕೆ ಆಲೌಟ್‌ (ಬಟ್ಲರ್‌ 53, ಬೆನ್‌ ಸ್ಟೋಕ್ಸ್‌ 50, ಕುಲದೀಪ್‌ 25ಕ್ಕೆ 6),

ಭಾರತ 
40.1 ಓವರ್‌ಗೆ 269/2 (ರೋಹಿತ್‌ 137*, ಕೊಹ್ಲಿ75, ಆದಿಲ್‌ ರಶೀದ್‌ 62ಕ್ಕೆ 1). 

ಪಂದ್ಯಶ್ರೇಷ್ಠ: ಕುಲದೀಪ್‌.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.