ಮೊಬೈಲ್ ಬಳಸಿಲ್ಲ, ಸಿನಿಮಾಗೆ ಹೋಗಲ್ಲ: ಖೇಲ್ ರತ್ನ ಭಜರಂಗಿಯ ಸಾಧನೆಯ ಹಿಂದಿದೆ ಕಠಿಣ ಶ್ರಮ


Team Udayavani, Aug 17, 2019, 10:27 AM IST

bajarang

ಭಾರತದ ಹೆಮ್ಮಯ ಕುಸ್ತಿ ಪಟು ಭಜರಂಗ್ ಪೂನಿಯಾ ಅವರಿಗೆ ಈ ವರ್ಷದ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ. ಏಶ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬಂಗಾರದ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಭಜರಂಗ್ ಕುಸ್ತಿ ಪಯಣ ಬಲು ರೋಚಕ.

25ರ ಹರೆಯದ ಭಜರಂಗ್ ಜನಿಸಿದ್ದು ಹರಿಯಾಣದ ಝಾಜ್ಜರ್ ಜಿಲ್ಲೆಯ ಖುರ್ದನ್ ಗ್ರಾಮದಲ್ಲಿ. ತಂದೆಯ ಪ್ರೋತ್ಸಾಹದಿಂದ ತನ್ನ ಏಳನೆ ಹರೆಯದಲ್ಲೇ ಕುಸ್ತಿ ಗರಡಿ ಸೇರಿದ ಭಜರಂಗ್ ಇಂದು ಮಣ್ಣಿನ ಆಟದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಜರಂಗಿಯಂತೆ ಮೆರೆಯುತ್ತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ದೊಡ್ಡ ಕ್ರೀಡಾ ಕೂಟಗಳಲ್ಲಿ ಕಾಣಿಸಿಕೊಂಡ ಭಜರಂಗ್ ಏಶ್ಯನ್ ಮತ್ತು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಗೆದ್ದರು. 61 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸ್ಪರ್ಧೆ ಮಾಡುವ ಭಜರಂಗ್ 2014ರ ಕಾಮನ್ ವೆಲ್ತ್ , ಏಶ್ಯನ್ ಗೇಮ್ಸ್ ಮತ್ತು ಏಶ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಪೂನಿಯಾಗೆ ಬಂಗಾರವಂತು ಇನ್ನೂ ಕನಸಾಗಿಯೇ ಇತ್ತು. ಆದರೆ 2015ರ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಮಂಗೋಲಿಯಾದ ಆಟಗಾರನ ಎದುರು 10-0 ಅಂತರದಿಂದ ಸೋತ ಭಜರಂಗ್ 5ನೇ ಸ್ಥಾನಿಯಾಗಿ ಕೂಟ ಮುಗಿಸಿದರು.

2017ರ ಏಶ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿಗೆ ಬಂಗಾರಕ್ಕೆ ಮುತ್ತಿಕ್ಕಿದ ಭಜರಂಗ್ ಪೂನಿಯಾ ಬಂಗಾರದ ಬೇಟೆಯಲ್ಲಿ ನಂತರ ಹಿಂದೆ ನೋಡಲೇ ಇಲ್ಲ. 2018ರ ಕಾಮನ್ ವೆಲ್ತ್, ಏಶ್ಯನ್ ಗೇಮ್ಸ್ 65 ಕೆಜಿ ಫ್ರೀ ಸ್ಟೈಲ್ ವಿಭಾಗದ ಬಂಗಾರ ಗೆದ್ದ ಭಜರಂಗ್ ಭಾರತದ ಕೀರ್ತಿಯನ್ನು ವಿಶ್ವದೆಲ್ಲೆಡೆ ರಾರಾಜಿಸಿದರು.

ಭಜರಂಗಿಯ ಹಠ, ಸಾಧನೆಯೇ ಪೂನಿಯಾ ಆಸ್ತಿ
ಒಬ್ಬ ಸಾಮಾನ್ಯ ಹುಡುಗ ಇಂದು ಅಂತಾರಾಷ್ಟ್ರೀಯ ಕುಸ್ತಿ ಪಟುವಾಗಲು ಆತನ ಹಠ, ಕಠಿಣ ಅಭ್ಯಾಸ, ಸತತ ಪ್ರಯತ್ನವೇ ಕಾರಣ. ಒಲಿಂಪಿಕ್ ಪ್ರಶಸ್ತಿ ವಿಜೇತ ಯೋಗಿಶ್ವರ್ ದತ್ ಮಾರ್ಗದರ್ಶನ ಮತ್ತು ಎಂಜಾರಿಯೋಸ್ ಬೆಂಟಿನಿಡಿಸ್ ತರಬೇತಿಯ ಗರಡಿಯಲ್ಲಿ ಕುಸ್ತಿ ಪಟ್ಟುಗಳ ಮೇಲೆ ಬಿಗಿ ಹಿಡಿತ ಪಡೆದ  ಪೂನಿಯಾ ಮುಟ್ಟಿದ್ದೆಲ್ಲಾ ಚಿನ್ನವಾಗಲಿಲ್ಲ. ಪೂನಿಯಾ ಗೆಲುವಿನ ನಗುವಿನ ಹಿಂದೆ ಕಠಿಣ ಮನಸ್ಥಿತಿಯ ಏಳು ವರ್ಷದ ಪಯಣವಿದೆ.

ಮೊಬೈಲ್ ಬಳಸಲ್ಲ, ಸಿನಿಮಾ ಥಿಯೇಟರ್ ಹೇಗಿದೆ ಎಂತಾನೆ ಗೊತ್ತಿಲ್ಲ!
ಆಧುನಿಕ ಜನಜೀವನದಲ್ಲಿ ಮೊಬೈಲ್ ಬಳಕೆ ಜೀವನ ಅಗತ್ಯಗಳಲ್ಲಿ ಒಂದಾಗಿದೆ. ಇಂದಿನ ಕಾಲದಲ್ಲಿ ಯಾರಾದರೂ ಮೊಬೈಲ್ ಬಳಸಲ್ಲ ಎಂದರೆ ನಂಬುವುದೇ ಕಷ್ಟ. ಅದರಲ್ಲೂ ಏಳು ವರ್ಷಗಳ ಕಾಲ! ಹೌದು, 2010ರಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಲು ಆರಂಭಿಸಿದ ಭಜರಂಗ್ ಅಂದೇ ಮೊಬೈಲ್ ಫೋನ್ ನಿಂದ ದೂರವಾದರು. ಮೊಬೈಲ್ ಇದ್ದರೆ ಆಟದ ಮೇಲೆ ಏಕಾಗ್ರತೆ ವಹಿಸಲು ಸಾಧ್ಯವಿಲ್ಲವೆಂಬ ಯೋಗಿಶ್ವರ್ ದತ್ ಅವರ ಮಾರ್ಗದರ್ಶನದಂತೆ ಭಜರಂಗ್ ಫೋನ್ ಬಳಸಲೇ ಇಲ್ಲ. ವಿದೇಶಿ ಕೂಟಗಳಿಗೆ ಹೋದಾಗ ಅಲ್ಲಿ ಎಲ್ಲೂ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿಲ್ಲ. ವಿಶೇಷವೆಂದರೆ ಭಜರಂಗ್ ಪೂನಿಯಾಗೆ ಇದವರೆಗೆ ಸಿನಿಮಾ ಮಂದಿರ ಹೇಗೆ ಇರುತ್ತದೆ ಎಂದೇ ಗೊತ್ತಿಲ್ಲ. ಅಷ್ಟರಮಟ್ಟಿಗೆ ಪೂನಿಯಾ ತನ್ನ ಆಟದಲ್ಲಿ ತಲ್ಲೀನರಾಗಿದ್ದರು. ಈ ಕಠಿಣ ಪರಿಶ್ರಮಕ್ಕೆ ತಕ್ಕ ಫಲವನ್ನು ಪೂನಿಯಾ ಪಡೆದರು.

ಸುಶೀಲ್ ಕುಮಾರ್, ಯೋಗೀಶ್ವರ್ ದತ್ ನಂತರ ವಿಶ್ವ ಕುಸ್ತಿಯಲ್ಲಿ ಭಾರತದ ಕೀರ್ತಿ ಪತಾಕೆ ಹಾರುಸುತ್ತಿರುವ ಭಜರಂಗ್ ಪೂನಿಯಾ 2020ರ ಟೋಕಿಯೋ ಒಲಿಂಪಿಕ್ಸ್ ಚಿನ್ನಕ್ಕೆ ಕಣ್ಣಿಟ್ಟಿದ್ದಾರೆ. ಒಲಿಂಪಿಕ್ಸ್ ಕುಸ್ತಿ ಅಖಾಡದಲ್ಲಿ ಭಜರಂಗ್ ಭಾರತದ ತ್ರಿವರ್ಣವನ್ನು ಹಾರಿಸಲಿ ಎಂದು ಭಾರತೀಯರ ಆಶಯ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.