AusVsAfg; “ಮಾನವ ಹಕ್ಕುಗಳು ಅಥವಾ 2 ಅಂಕಗಳು”: ಚರ್ಚೆಗೆ ಕಾರಣವಾದ ನವೀನ್ ಹಕ್ ಪೋಸ್ಟ್


Team Udayavani, Nov 5, 2023, 10:15 AM IST

“Human Rights Or 2 Points”: Naveen-Ul-Haq Takes Dig At Australia

ಮುಂಬೈ: ಈ ವಿಶ್ವಕಪ್ ನಲ್ಲಿ ಅನಿರೀಕ್ಷಿತ ಫಲಿತಾಂಶ ನೀಡುತ್ತಿರುವ ಅಫ್ಘಾನಿಸ್ತಾನ ತಂಡವು ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಕಳೆದ ಎರಡು ವಿಶ್ವಕಪ್ ಆವೃತ್ತಿಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿದ್ದ ಅಫ್ಘಾನ್ ಈ ಬಾರಿ ಆಡಿದ ಏಳು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದು ಸೆಮಿ ಫೈನಲ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮುಂದಿನ ಎರಡು ಪಂದ್ಯಗಳನ್ನು ಗೆದ್ದರೆ ಅಫ್ಘಾನ್ ಸೆಮಿ ಫೈನಲ್ ತಲುಪುವ ಸಾಧ್ಯತೆಯಿದೆ.

ನವೆಂಬರ್ 7ರಂದು ಅಫ್ಘಾನಿಸ್ತಾನ ತಂಡವು ಆಸ್ಟ್ರೇಲಿಯಾ ವಿರುದ್ಧ ಪಂದ್ಯವಾಡಲಿದೆ. ಉಭಯ ತಂಡಗಳಿಗೂ ಇದು ಪ್ರಮುಖ ಪಂದ್ಯವಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಅಫ್ಘಾನ್ ವೇಗಿ ನವೀನ್ ಉಲ್ ಹಕ್ ಹಾಕಿದ ಇನ್ಸ್ಟಾಗ್ರಾಮ್ ಪೋಸ್ಟ್ ಚರ್ಚೆಗೆ ಕಾರಣವಾಗಿದೆ.

“ದ್ವಿಪಕ್ಷೀಯ ಸರಣಿ ಆಡಲು ನಕಾರ. ಈಗ ವಿಶ್ವಕಪ್‌ನಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾದ ನಿಲುವು ನೋಡಲು ಆಸಕ್ತಿದಾಯಕವಾಗಿದೆ. ಸ್ಟಾಂಡರ್ಸ್, ಮಾನವ ಹಕ್ಕುಗಳೇ ಅಥವಾ ಎರಡು ಅಂಕಗಳೇ” ಎಂದು ನವೀನ್ ಉಲ್ ಹಕ್ ಬರೆದುಕೊಂಡಿದ್ದಾರೆ.

ರಾಜಕೀಯ ಉದ್ವಿಗ್ನತೆಯಿಂದಾಗಿ 2021 ರಲ್ಲಿ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯಕ್ಕಾಗಿ ಅಫ್ಘಾನಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಸಮಯವನ್ನು ನವೀನ್ ಉಲ್ಲೇಖಿಸಿದ್ದಾರೆ. ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ನಿಯಂತ್ರಣಕ್ಕೆ ಪಡೆದಿತ್ತು. ಮಹಿಳಾ ಮತ್ತು ಮಕ್ಕಳ ಹಕ್ಕುಗಳನ್ನು ಅಫ್ಘಾನ್ ನಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಆಸ್ಟ್ರೇಲಿಯಾವು ಅಫ್ಘಾನ್ ಪ್ರವಾಸವನ್ನು ರದ್ದುಗೊಳಿಸಲು ನಿರ್ಧರಿಸಿತು. ಅಫ್ಘಾನಿಸ್ತಾನದ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಆಸ್ಟ್ರೇಲಿಯಾ ಈಗ ಏನು ನಿರ್ಧರಿಸುತ್ತದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ ಎಂದು ನವೀನ್ ಕುಟುಕಿದ್ದಾರೆ.

ಸೆಮಿ ಫೈನಲ್ ಪ್ರವೇಶದ ಸನಿಹಕ್ಕೆ ಬಂದಿರುವ ಆಸ್ಟ್ರೇಲಿಯಾಗೆ ಅಫ್ಗಾನ್ ವಿರುದ್ದದ ಪಂದ್ಯವು ಬಹುಮುಖ್ಯವಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.