ಆಸೀಸ್ ಸರಣಿಗೆ ಪೂರ್ತಿ ಫಿಟ್: ರೋಹಿತ್ ಶರ್ಮಾ ವಿಶ್ವಾಸ
Team Udayavani, Nov 23, 2020, 9:12 AM IST
ಬೆಂಗಳೂರು: ಗಾಯದ ಸಮಸ್ಯೆಗೆ ಸಿಲುಕಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಫಿಟ್ನೆಸ್ ಟ್ರೈನಿಂಗ್ ನಡೆಸುತ್ತಿರುವ ರೋಹಿತ್ ಶರ್ಮ ಚೇತರಿಕೆಯ ಹಾದಿಯಲ್ಲಿದ್ದಾರೆ. “ನಾನು ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದು, ಆಸ್ಟ್ರೇಲಿಯ ವಿರುದ್ಧದ ಸರಣಿಗೆ ಪೂರ್ತಿ ಫಿಟ್ನೆಸ್ನೊಂದಿಗೆ ಸಜ್ಜಾಗಲಿದ್ದೇನೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಐಪಿಎಲ್ ವೇಳೆ ಗಾಯಾಳಾಗಿ ಆಸ್ಟ್ರೇಲಿಯ ಪ್ರವಾಸದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯಿಂದ ಬೇರ್ಪಟ್ಟ ರೋಹಿತ್ ಶರ್ಮ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ.
“ಪಾರ್ಶ್ವ ಸ್ನಾಯು ಸೆಳೆತದಿಂದ ಗುಣಮುಖನಾಗಿದ್ದೇನೆ. ಫಿಟ್ನೆಸ್ ಕಾಯ್ದುಕೊಂಡು ಇನ್ನಷ್ಟು ಬಲಿಷ್ಠಗೊಳ್ಳುವ ಪ್ರಯತ್ನ ನಡೆಸುತ್ತಿದ್ದೇನೆ. ಸುದೀರ್ಘ ಮಾದರಿಯ ಕ್ರಿಕೆಟ್ ಆರಂಭಿಸುವುದಕ್ಕೂ ಮೊದಲು ಮಾನಸಿಕವಾಗಿ ಗಟ್ಟಿಯಾಗಬೇಕು. ಇದೇ ಕಾರಣಕ್ಕೆ ನಾನು ಎನ್ಸಿಎಯಲ್ಲಿದ್ದೇನೆ’ ಎಂದು ರೋಹಿತ್ ಹೇಳಿದರು.
ಯಾವುದೇ ಕ್ರಮಾಂಕದಲ್ಲಿ ಆಡಲು ಸಿದ್ದ
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತನ್ನ ಬ್ಯಾಟಿಂಗ್ ಕ್ರಮಾಂಕದ ಕುರಿತಂತೆ ಮ್ಯಾನೇಜ್ಮೆಂಟ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಮತ್ತು ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಲು ಸಿದ್ಧನಾಗಿದ್ದೇನೆ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ರೋಹಿತ್ ಶರ್ಮ ಹೇಳಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಈಗಾಗಲೇ ಕಾಲಿಟ್ಟಿರುವ ಟೀಮ್ ಇಂಡಿಯಾ ವಿರಾಟ್ ಅನುಪಸ್ಥಿತಿಯಲ್ಲಿ ಏನು ಮಾಡಬೇಕೆಂಬ ರಣತಂತ್ರ ರೂಪಿಸಿರುತ್ತದೆ ಎಂದು ನಾನು ನಂಬಿದ್ದೇನೆ. ಯಾರು ಓಪನಿಂಗ್ ಮಾಡಬೇಕು, ವಿರಾಟ್ ಜಾಗದಲ್ಲಿ ಯಾರು ಆಡಬೇಕು ಎಂಬುದರ ಬಗ್ಗೆ ನಿರ್ಧಾರ ಮಾಡಿರುತ್ತಾರೆ. ಅಲ್ಲಿಗೆ ಹೋದ ಬಳಿಕವಷ್ಟೇ ನನಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಆದರೆ ಯಾವುದೇ ಕ್ರಮಾಂಕದಲ್ಲಿ ಆಡಲು ನಾನು ಸಿದ್ಧ ಎಂದು ರೋಹಿತ್ ತಿಳಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್
ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿಗಳಿಂದ ಗೋಪೂಜೆ
ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು
ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್!