ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್
Team Udayavani, Oct 7, 2022, 11:45 AM IST
ಲಕ್ನೋ: ದಕ್ಷಿಣ ಅಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಎಡವಿದ ಭಾರತ ತಂಡ 9 ರನ್ ಅಂತರದ ಸೋಲು ಕಂಡಿದೆ. ಬೌಲರ್ ಗಳಿಗೆ ಹೆಚ್ಚಿನ ನೆರವು ಲಭಿಸುತ್ತಿದ್ದ ಪಿಚ್ ನಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅಜೇಯ ಆಟವಾಡಿದರು. ಭಾರತಕ್ಕೆ ಗೆಲುವಿನ ಆಸೆ ಚಿಗುರಿಸಿದ್ದ ಸಂಜು 86 ರನ್ ಗಳಿಸಿದರು.
40 ಓವರ್ಗಳಲ್ಲಿ ಗೆಲ್ಲಲು 250 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತೀಯ ಬ್ಯಾಟರ್ ಗಳು ಆರಂಭದಲ್ಲಿ ಕಷ್ಟಪಟ್ಟರು. ಮೊದಲು ಶ್ರೇಯಸ್ ಅಯ್ಯರ್ ಅವರೊಂದಿಗೆ ಉತ್ತಮ ಜೊತೆಯಾಟ ನಡೆಸಿದ ಸ್ಯಾಮ್ಸನ್ ಬಳಿಕ ಶಾರ್ದೂಲ್ ಠಾಕೂರ್ ಅವರೊಂದಿಗೆ ಪ್ರಮುಖ ಪಾರ್ಟ್ನರ್ ಶಿಪ್ ಮಾಡಿದರು. ಕೊನೆಯ ಓವರ್ ನಲ್ಲಿ ಗೆಲುವಿಗೆ 30 ರನ್ ಅಗತ್ಯವಿದ್ದಾಗ ಸಂಜು 20 ರನ್ ಅಷ್ಟೇ ಮಾಡಿದರು.
ಇದನ್ನೂ ಓದಿ:ಕಂಟೆಂಟೇ ಸ್ಟ್ರಾಂಗು ಗುರೂ… ದೇಸಿ ಸೊಗಡಿಗೆ ಪ್ರೇಕ್ಷಕನ ಜೈಕಾರ
“ಪಿಚ್ ನಲ್ಲಿ ಸಮಯ ಕಳೆಯಲು ಯಾವಾಗಲೂ ಸಂತೋಷವಾಗುತ್ತದೆ. ಗೆಲುವಿಗೆ ಪ್ರಯತ್ನ ಪಟ್ಟೆವು. ಕೊನೆಯಲ್ಲಿ ಎರಡು ಶಾಟ್ ತಪ್ಪಿಸಿದೆ, ಮುಂದಿನ ಬಾರಿ ನಾನು ಇನ್ನೂ ಹೆಚ್ಚು ಶ್ರಮಿಸುತ್ತೇನೆ. ಆದರೆ ನನ್ನ ಕೊಡುಗೆಯಿಂದ ನಾನು ತೃಪ್ತನಾಗಿದ್ದೇನೆ.” ಎಂದು ಸಂಜು ಸ್ಯಾಮ್ಸನ್ ಪಂದ್ಯದ ಬಳಿಕ ಹೇಳಿದರು.
ಸ್ಯಾಮ್ಸನ್ ಅವರು ಡೇವಿಡ್ ಮಿಲ್ಲರ್ ಅವರನ್ನು ಹೊಗಳಿದರು. ಮಿಲ್ಲರ್ ಪ್ರಸ್ತುತ ವಿಶ್ವದ ಅತ್ಯುತ್ತಮ ಫಿನಿಶರ್ ಎಂದು ಸಂಜು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ