ಸೋಲಿಗೆ ನಾನೇ ಕಾರಣ ಎಂದ ಶೇನ್‌ ವಾಟ್ಸನ್‌


Team Udayavani, Apr 12, 2017, 3:09 PM IST

Shane.jpg

ಇಂದೋರ್‌: “ರಾಯಲ್‌ ಚಾಲೆಂಜರ್ ಬೆಂಗಳೂರು ತಂಡದ ಸೋಲಿಗೆ ನಾನೇ ಕಾರಣ…’

ಈ ಹೇಳಿಕೆ ನೀಡಿದವರು ಬೇರೆ ಯಾರೂ ಅಲ್ಲ, ತಂಡದ ಉಸ್ತುವಾರಿ ನಾಯಕ ಶೇನ್‌ ವಾಟ್ಸನ್‌. ಸೋಮವಾರ ರಾತ್ರಿ ಇಂದೋರ್‌ನಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ವಿರುದ್ಧ 8 ವಿಕೆಟ್‌ ಅಂತರದ ಸೋಲನುಭವಿಸಿದ ಬಳಿಕ ವಾಟ್ಸನ್‌ ಈ ಹೇಳಿಕೆ ನೀಡಿದ್ದಾರೆ.

“ನಾನು ಉತ್ತಮ ಆರಂಭ ಒದಗಿಸಲು ವಿಫ‌ಲನಾದೆ. ಮೊದಲ ಓವರಿನಲ್ಲೇ ಔಟಾದೆ. ಇದರಿಂದ ತಂಡದ ಮೇಲೆ ಒತ್ತಡ ಬಿತ್ತು. ಹೀಗಾಗಿ ಈ ಸೋಲಿಗೆ ನಾನೇ ಹೊಣೆ ಹೊರುತ್ತಿದ್ದೇನೆ…’ ಎಂದು ವಾಟ್ಸನ್‌ ಹೇಳಿದರು.

ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ 4 ವಿಕೆಟಿಗೆ ಕೇವಲ 148 ರನ್‌ ಗಳಿಸಿದರೆ, ಪಂಜಾಬ್‌ 14.3 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 150 ರನ್‌ ಬಾರಿಸಿ ಸತತ 2ನೇ ವಿಜಯೋತ್ಸವ ಆಚರಿಸಿತು. ಹಾಗೆಯೇ, ಇದು 3 ಪಂದ್ಯಗಳಲ್ಲಿ ಆರ್‌ಸಿಬಿಗೆ ಎದುರಾದ 2ನೇ ಸೋಲು.
“ಉತ್ತಮ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ನಾವು ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದ್ದೆವು. ಆದರೆ ಇದರಲ್ಲಿ ಯಶಸ್ಸು ಸಿಗಲಿಲ್ಲ. ಈ ಟ್ರ್ಯಾಕ್‌ನಲ್ಲಿ ಕನಿಷ್ಠ 170 ರನ್ನಾದರೂ ಒಟ್ಟು ಗೂಡಬೇಕಿತ್ತು. ಡಿ ವಿಲಿಯರ್ ಸ್ಫೋಟಿಸದೇ ಹೋಗಿದ್ದರೆ ನಾವು ಇನ್ನಷ್ಟು ಕೆಳ ಮಟ್ಟಕ್ಕೆ ಇಳಿಯುತ್ತಿದ್ದೆವು…’ ಎಂದು ವಾಟ್ಸನ್‌ ಹೇಳಿದರು. 

ಮೊದಲ ಪಂದ್ಯದಲ್ಲೇ ಎಬಿಡಿ ಮಿಂಚು
ದಕ್ಷಿಣ ಆಫ್ರಿಕಾದ ಸಿಡಿಲಬ್ಬರ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ ತಂಡವನ್ನು ಸೇರಿಕೊಂಡ ಖುಷಿಯಲ್ಲಿ ಆರ್‌ಸಿಬಿ ಆಡಲಿಳಿದಿತ್ತು. ವಿಪರ್ಯಾಸವೆಂದರೆ, ಎಬಿಡಿ ಹೊರತುಪಡಿಸಿ ಉಳಿದವರ್ಯಾರೂ ಬ್ಯಾಟಿಂಗಿನಲ್ಲಿ ಕ್ಲಿಕ್‌ ಆಗಲಿಲ್ಲ. 15 ಓವರ್‌ ಮುಗಿಯುವಾಗ ತಂಡದ ಮೊತ್ತ ಕೇವಲ 71 ರನ್‌ ಆಗಿತ್ತು. ಉಳಿದ 77 ರನ್‌ ಸಿಡಿದದ್ದೇ ಕೊನೆಯ 5 ಓವರ್‌ಗಳಲ್ಲಿ! 

ಎಂದಿನ ಸ್ಫೋಟಕ ಬ್ಯಾಟಿಂಗಿಗೆ ಮುಂದಾದ ಎಬಿಡಿ 15ನೇ ಓವರ್‌ ಬಳಿಕ ಪಂಜಾಬ್‌ ಮೇಲೆ ಘಾತಕವಾಗಿ ಎರಗಿದರು. 15ನೇ ಓವರ್‌ ಮುಕ್ತಾಯಕ್ಕೆ 31 ರನ್‌ (2 ಬೌಂಡರಿ, 1 ಸಿಕ್ಸರ್‌) ಮಾಡಿ ಆಡುತ್ತಿದ್ದ ಎಬಿಡಿ, 20ನೇ ಓವರ್‌ ಮುಗಿಯುವಾಗ ಅಜೇಯ 89ರಲ್ಲಿದ್ದರು. 48 ಎಸೆತಗಳ ಈ ಅಮೋಘ ಆಟದ ವೇಳೆ 9 ಸಿಕ್ಸರ್‌, 3 ಬೌಂಡರಿ ಸಿಡಿಯಲ್ಪಟ್ಟಿತು.ಈ ಪಂದ್ಯಕ್ಕಾಗಿ ಆರ್‌ಸಿಬಿ ಮತ್ತೂಬ್ಬ ಸ್ಫೋಟಕ ಬ್ಯಾಟ್ಸ್‌ ಮನ್‌ ಕ್ರಿಸ್‌ ಗೇಲ್‌ ಅವರನ್ನು ಕೈಬಿಟ್ಟಿತ್ತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.