ಬ್ಯಾಟಿಂಗ್ ಮಾಡುವಾಗ ನಾನೂ ಒತ್ತಡ, ಭಯ ಅನುಭವಿಸಿದ್ದೇನೆ: ಧೋನಿ
Team Udayavani, May 8, 2020, 12:32 PM IST
ಚೆನ್ನೈ: ಯಾವುದೇ ಕ್ರೀಡೆ ಆಗಿರಲಿ ಕೋಚ್ ಹಾಗೂ ಕ್ರೀಡಾಪಟು ನಡುವೆ ಮುಕ್ತವಾದ ಸಂವಾದ ಮುಖ್ಯವಾಗುತ್ತದೆ, ಇದರಿಂದ ಮಾತ್ರ ಒತ್ತಡದಿಂದ ಹೊರಬಂದು ಕ್ರೀಡಾಪಟು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ’ ಎಂದು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ತಿಳಿಸಿದ್ದಾರೆ.
“ಒತ್ತಡ ಎಲ್ಲರಿಗೂ ಇರುತ್ತದೆ, ಆದರೆ ಅದನ್ನು ಹೇಳಿಕೊಳ್ಳುವುದಿಲ್ಲ, ನಾನೂ ಬ್ಯಾಟಿಂಗ್ಗೆ ಕ್ರೀಸ್ಗೆ ಇಳಿದಾಗ ಆರಂಭದ 5ರಿಂದ 10 ಎಸೆತಗಳನ್ನು ಎದುರಿಸುವಾಗ ಹೆಚ್ಚು ಒತ್ತಡಕ್ಕೆ ಒಳಗಾಗುತ್ತೇನೆ. ನಾನೊಬ್ಬನೇ ಅಲ್ಲ ಎಲ್ಲರು ಕೂಡ ಒಂದಲ್ಲ ಒಂದು ರೀತಿಯಲ್ಲಿ ಇಂತಹ ಒತ್ತಡಗಳನ್ನು ಅನುಭವಿಸಿರುತ್ತಾರೆ. ಅದನ್ನು ನಾವು ಮಾನಸಿಕ ಸ್ಥಿತಿ ನಿರ್ವಹಣಾ ತರಬೇತುದಾರರ ಜತೆ ನಾವು ಎಷ್ಟೋ ಸಲ ಚರ್ಚಿಸಲು ಹಿಂದೇಟು ಹಾಕುತ್ತೇವೆ, ಇದಕ್ಕೆ ಕಾರಣ ಭಾರತದಲ್ಲಿ ಇನ್ನೂ ಮಾನಸಿಕ ಒತ್ತಡವನ್ನು ಮುಕ್ತವಾಗಿ ಜನ ಹಂಚಿಕೊಳ್ಳುತ್ತಿಲ್ಲ.
ಕ್ರೀಡಾಪಟು ಮಾನಸಿಕ ಆರೋಗ್ಯ ಕಾಪಾಡಿ ಕೊಳ್ಳಲು ಆಟಗಾರರು ಹಾಗೂ ತರಬೇತುದಾರನ ನಡುವಿನ ಉತ್ತಮ ಸ್ನೇಹದಿಂದ ಮಾತ್ರ ಸಾಧ್ಯವಾಗುತ್ತದೆ. ಕೋಚ್ ಜತೆಗಿದ್ದಾಗ ಆಟಗಾರ ಯಾವ ವಲಯದಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಾನೆ ಎನ್ನುವುದನ್ನು ಕಂಡು ಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ’ ಎಂದು ಧೋನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ