ಕೊಹ್ಲಿಯನ್ನು ತಂಡಕ್ಕೆ ಸೇರಿಸಿ ನಾನು ಕೆಲಸ ಕಳೆದುಕೊಂಡೆ


Team Udayavani, Mar 9, 2018, 6:05 AM IST

Kohli-Vengsarkar.jpg

ಮುಂಬಯಿ: ಇಂದಿನ ಸ್ಟಾರ್‌ ಆಟಗಾರ, ರನ್‌ ಮೆಶಿನ್‌, ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರನ್ನು 2008ರಲ್ಲಿ ಮೊದಲ ಸಲ ಭಾರತ ತಂಡಕ್ಕೆ ಸೇರಿಸಿಕೊಂಡಾಗ ಎಷ್ಟೆಲ್ಲ ರಗಳೆ ಆಗಿತ್ತು, ಇದಕ್ಕೆ ಯಾರೆಲ್ಲ ವಿರೋಧಿಸಿದ್ದರು, ಇದು ಯಾರ ಹುದ್ದೆಗೆ ಕುತ್ತು ತಂದಿತ್ತು… ಇಂಥದೊಂದು ಸ್ವಾರಸ್ಯಕರ ಘಟನೆಯನ್ನು ಅಂದಿನ ರಾಷ್ಟ್ರೀಯ ಕ್ರಿಕೆಟ್‌ ಆಯ್ಕೆ ಸಮಿತಿ ಅಧ್ಯಕ್ಷ ದಿಲೀಪ್‌ ವೆಂಗ್‌ಸರ್ಕಾರ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. 

ಕೊಹ್ಲಿಯನ್ನು ತಂಡಕ್ಕೆ ಸೇರಿಸಿಕೊಂಡಿದ್ದರಿಂದ ತಾನು ಆಯ್ಕೆ ಸಮಿತಿ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಬೇಕಾಯಿತು ಎಂಬ ಸ್ಫೋಟಕ ಸುದ್ದಿಯನ್ನು ಬಹಿರಂಗಗೊಳಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರ 2008ರ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಸಾಧನೆಯಿಂದ ಪ್ರಭಾವಿತರಾದ ವೆಂಗ್‌ಸರ್ಕಾರ್‌, ಕೊಹ್ಲಿಯನ್ನು ಆಸ್ಟ್ರೇಲಿಯದಲ್ಲಿ ನಡೆದ “ಎಮರ್ಜಿಂಗ್‌ ಪ್ಲೇಯರ್ ಟೂರ್ನಮೆಂಟ್‌’ಗಾಗಿ ಆಯ್ಕೆ ಮಾಡಿದರು. ಅಲ್ಲಿ ಇನ್ನಿಂಗ್ಸ್‌ ಆರಂಭಿಸಿದ ಕೊಹ್ಲಿ, ವೆಸ್ಟ್‌ ಇಂಡೀಸ್‌ 123 ರನ್‌ ಬಾರಿಸಿ ಮಿಂಚು ಹರಿಸಿದರು. ಹತ್ತಿರವಿದ್ದುಕೊಂಡೇ ಕೊಹ್ಲಿ ಆಟ ವೀಕ್ಷಿಸಿದ ವೆಂಗ್‌ಸರ್ಕಾರ್‌ ಈ ಯುವ ಬ್ಯಾಟ್ಸ್‌ಮನ್‌ನಿಂದ ಇನ್ನಷ್ಟು ಪ್ರಭಾವಿತರಾದರು. ಕೊಹ್ಲಿಯ ಬ್ಯಾಟಿಂಗ್‌ ಕೌಶಲ, ಆತ್ಮವಿಶ್ವಾಸವನ್ನೆಲ್ಲ ಕಂಡು ಈತ ಟೀಮ್‌ ಇಂಡಿಯಾಕ್ಕೆ ಆಯ್ಕೆಯಾಗಬಲ್ಲ ಯೋಗ್ಯತೆಯುಳ್ಳ ಆಟಗಾರ ಎಂಬ ತೀರ್ಮಾನಕ್ಕೆ ಬಂದರು.

ಆದರೆ ಭಾರತ ತಂಡವನ್ನು ಆರಿಸುವಾಗ ವಿರಾಟ್‌ ಕೊಹ್ಲಿ ಹೆಸರನ್ನು ವೆಂಗ್‌ಸರ್ಕಾರ್‌ ಪ್ರಸ್ತಾವಿಸಿದಾಗ ಇದಕ್ಕೆ ನಾಯಕ ಧೋನಿ ಮತ್ತು ಕೋಚ್‌ ಕರ್ಸ್ಟನ್‌ ವಿರೋಧ ವ್ಯಕ್ತಪಡಿಸಿದರು. ತಾವು ಈವರೆಗೆ ಕೊಹ್ಲಿ ಬ್ಯಾಟಿಂಗ್‌ ನೋಡಿಲ್ಲ ಎಂಬ ವಾದವನ್ನು ಮುಂದಿಟ್ಟರು. ಆದರೆ ತಾನು ಸ್ವತಃ ನೋಡಿದ್ದೇನೆ ಎಂದು ವೆಂಗ್‌ಸರ್ಕಾರ್‌ ಪಟ್ಟು ಹಿಡಿದರು. ತಂಡಕ್ಕೂ ಸೇರಿಸಿದರು.

ಬದರೀನಾಥ್‌ ಬೇಕಿತ್ತು…
ಕೊಹ್ಲಿ ಬದಲು ತಮಿಳುನಾಡಿನ ಎಸ್‌. ಬದರೀನಾಥ್‌ ತಂಡದಲ್ಲಿರಬೇಕಿತ್ತು ಎಂಬುದೇ ಈ ವಿರೋಧಕ್ಕೆ ಕಾರಣ. ಅವರಾಗ ಧೋನಿ ನಾಯಕತ್ವದ, ಎನ್‌. ಶ್ರೀನಿವಾಸನ್‌ ಮಾಲಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸದಸ್ಯನೂ ಆಗಿದ್ದರು. ಸಹಜವಾಗಿಯೇ ಬಿಸಿಸಿಐ ಖಜಾಂಚಿ ಶ್ರೀನಿವಾಸನ್‌ ಮಧ್ಯ ಪ್ರವೇಶಿಸಿದರು.

“ಬದರೀನಾಥ್‌ ಅವರನ್ನು ಕೈಬಿಡಲು ಕಾರಣವೇನು, ಅವರು ದೇಶಿ ಕ್ರಿಕೆಟ್‌ನಲ್ಲಿ 800ರಷ್ಟು ರನ್‌ ಬಾರಿಸಿದ್ದಾರೆ ಎಂದು ಶ್ರೀನಿ ನನ್ನಲ್ಲಿ ಕೇಳಿದರು. ಬದರೀನಾಥ್‌ ಅವರನ್ನು ಉಳಿಸಿಕೊಳ್ಳಿ ಎಂದು ಅಂದಿನ ಬಿಸಿಸಿಐ ಅಧ್ಯಕ್ಷ ಶರದ್‌ ಪವಾರ್‌ ಮೇಲೆ ಒತ್ತಡ ತಂದರು. ನಾನೂ ಕೊಹ್ಲಿ ಸಾಧನೆಯನ್ನು ವಿವರಿಸಿದೆ. ಆದರೆ ಇದು ಫ‌ಲ ನೀಡಲಿಲ್ಲ. ಮರುದಿನವೇ ನನ್ನನ್ನು ಹುದ್ದೆಯಿಂದ ಕೆಳಗಿಳಿಸಲಾಯಿತು. ಕೆ. ಶ್ರೀಕಾಂತ್‌ ಆಯ್ಕೆ ಸಮಿತಿಯ ನೂತನ ಆಧ್ಯಕ್ಷರಾಗಿ ಆಯ್ಕೆಯಾದರು…’ ಎಂದು ವೆಂಗ್‌ಸರ್ಕಾರ್‌ ಅಂದಿನ ಘಟನೆಯನ್ನು ತೆರೆದಿಟ್ಟಿದ್ದಾರೆ.

ಟಾಪ್ ನ್ಯೂಸ್

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.