World Cup; ಸಮರ ಗೆದ್ದ ವೀರ ಮ್ಯಾಕ್ಸ್ ವೆಲ್!:ಅಫ್ಘಾನ್ ವಿರುದ್ಧ ಸೋತು ಗೆದ್ದ ಆಸೀಸ್

91 ಕ್ಕೆ 7 ವಿಕೆಟ್ ಕಳೆದುಕೊಂಡಿದ್ದ ಆಸೀಸ್ ಗುರಿ ತಲುಪಿದ್ದೇ ರೋಮಾಂಚನಕಾರಿ!!

Team Udayavani, Nov 7, 2023, 10:30 PM IST

1-asdsad

ಮುಂಬೈ :ವಿಶ್ವಕಪ್ ಕ್ರಿಕೆಟ್ ರೋಚಕ ಹಂತಕ್ಕೆ ತಲುಪಿದ್ದು ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಲಾಢ್ಯ ತಂಡವೆಂದು ಪರಿಗಣಿಸಲ್ ಪಟ್ಟ ಆಸ್ಟ್ರೇಲಿಯ  ತಂಡ ಅಫ್ಘಾನಿಸ್ಥಾನ ವಿರುದ್ದದ ಪಂದ್ಯದಲ್ಲಿ ಸೋಲಿನ ಸುಲಿಗೆ ಸಿಲುಕಿ ಮ್ಯಾಕ್ಸ್ ವೆಲ್ ಕಮಾಲ್ ಮಾಡಿ ಅಮೋಘ ವಿಕ್ರಮ ಸಾಧಿಸಿ ಸೆಮಿಫೈನಲ್ ಪ್ರವೇಶ ಖಚಿತ ಪಡಿಸಿಕೊಂಡಿದೆ.

ಮ್ಯಾಕ್ಸ್ ವೆಲ್ ಅಸಾಧಾರಣ ಬ್ಯಾಟಿಂಗ್ ಪ್ರದರ್ಶಿಸಿ ದ್ವಿಶತಕ ಸಿಡಿಸಿ ತಾನೊಬ್ಬ ದೈತ್ಯ ಪ್ರತಿಭೆ ಎನ್ನುವುದನ್ನು ನಿರೂಪಿಸಿ ಆಸ್ಟ್ರೇಲಿಯ ತಂಡದ ವೈಭವಯುತ ಜಯಕ್ಕೆ ಸಾಕ್ಷಿಯಾಗಿ ವಿಶ್ವಕಪ್ ಹೀರೋ ಎನಿಸಿಕೊಂಡರು.

ಅಫ್ಘಾನಿಸ್ಥಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇಬ್ರಾಹಿಂ ಜದ್ರಾನ್ ಅವರ ಅಮೋಘ ಶತಕ ಮತ್ತು ಇತರ ಆಟಗಾರರ ಸಮಯೋಚಿತ ಸಾಥ್ ನ ನೆರವಿನಿಂದ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 291 ರನ್ ಕಲೆ ಹಾಕಿತು. ಅದ್ಬುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಜದ್ರಾನ್ ಅಜೇಯ 129 ರನ್ ಗಳಿಸಿದರು. 143 ಎಸೆತಗಳಲ್ಲಿ ಇನ್ನಿಂಗ್ಸ್ ಕಟ್ಟಿದ ಅವರು 8 ಬೌಂಡರಿ ಮತ್ತು 3 ಆಕರ್ಷಕ ಸಿಕ್ಸರ್ ಬಾರಿಸಿದರು.

ಗುರ್ಬಾಜ್ 21, ರಹಮತ್ 30, ಶಾಹಿದಿ 26, ಅಜ್ಮತುಲ್ಲಾ 22, ನಬಿ 12 ಮತ್ತು ಕೊನೆಯಲ್ಲಿ ರಶೀದ್ ಖಾನ್ 18 ಎಸೆತಗಳಲ್ಲಿ 35 ರನ್ ಸಿಡಿಸಿ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು.

292 ರನ್  ಗುರಿ ಬೆನ್ನಟ್ಟಿದ ಆಸೀಸ್ 4 ರನ್ ಗಳಿಸಿದ್ದ ವೇಳೆ ಟ್ರಾವಿಸ್ ಹೆಡ್ ಅವರ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಮೇಲುಗೈ ಸಾಧಿಸಿದ ಅಫ್ಘಾನ್ ಬೌಲರ್ ಗಳು 91 ರನ್ ಆಗುವಷ್ಟರಲ್ಲಿ 7 ಪ್ರಮುಖ ವಿಕೆಟ್ ಬೀಳಿಸಿ ಭಾರೀ ಆಘಾತ ನೀಡಿದರು.

ಡೇವಿಡ್ ವಾರ್ನರ್ 18, ಹೆಡ್ ಶೂನ್ಯ, ಮಿಚೆಲ್ ಮಾರ್ಷ್ 24, ಮಾರ್ನಸ್ ಲಬುಶೇನ್ 14(ರನ್ ಔಟ್), ಜೋಶ್ ಇಂಗ್ಲಿಸ್ 0, ಮಾರ್ಕಸ್ ಸ್ಟೊಯಿನಿಸ್ 6, ಮಿಚೆಲ್ ಸ್ಟಾರ್ಕ್ 3, ರನ್ ಗಳಿಗೆ ನಿರ್ಗಮಿಸಿದರು.

ಆ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ನಾಯಕ ಪ್ಯಾಟ್ ಕಮ್ಮಿನ್ಸ್  ಮುರಿಯದ ವಿಕೆಟ್ ಗೆ ಗೆಲುವಿನ ದಡದ ವರೆಗೆ ಈಜಿದರು. ತಂಡ ಸಂಕಷ್ಟದ ಸುಲಿಗೆ ಸಿಲುಕಿದ್ದ ವೇಳೆ ಅತ್ಯಮೋಘ ಆಟವಾಡಿದ ಮ್ಯಾಕ್ಸ್ ವೆಲ್ ಸ್ಮರಣೀಯ ಇನ್ನಿಂಗ್ಸ್ ಆಡಿದರು. ತೀವ್ರವಾದ ಕಾಲುನೋವಿನ ನಡುವೆ ಕುಂಟುತ್ತಾ ಕುಂಟುತ್ತಾ ಒಂದೊಂದು ರನ್ ಗೂ ನೋವಿನಲ್ಲೇ ಓಡಿದರು. ದೊಡ್ಡ ಹೊಡೆತಗಳ ಮೂಲಕವೇ ಗೆಲುವಿನ ಸಂಭ್ರಮಕ್ಕೆ ಸಾಖಿಯಾದರು. ಈ ಪಂದ್ಯವನ್ನು ಸಿನಿಮಾ ಮಾಡಿದರೂ ಅಚ್ಚರಿಯಿಲ್ಲ ಎಂದು ನೆಟ್ಟಿಗರು ಅಭಿಪ್ರಾಯ ಹೊರ ಹಾಕಿದ್ದಾರೆ.

ಮ್ಯಾಕ್ಸ್ ವೆಲ್ 128 ಎಸೆತಗಳಿಂದ 201 ರನ್ ಬಾರಿಸಿ ವಿಶ್ವಕಪ್ ದ್ವಿಶತಕದ ಸಂಭ್ರಮ ಆಚರಿಸಿದರು. ಬರೋಬ್ಬರಿ 21 ಬೌಂಡರಿ ಮತ್ತು 10 ಆಕರ್ಷಕ ಸಿಕ್ಸರ್ ಬಾರಿಸಿದ್ದರು. ಪ್ಯಾಟ್ ಕಮ್ಮಿನ್ಸ್ ಸಾಥ್ ನೀಡಿ 68 ಎಸೆತಗಳಲ್ಲಿ 12 ರನ್ ಗಳಿಸಿ ಔಟಾಗದೆ ಉಳಿದರು. ರೋಮಾಂಚನಕಾರಿ ಪಂದ್ಯದಲ್ಲಿ ಕೊನೆಗೂ 46.5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿ 3 ವಿಕೆಟ್ ಗಳ ಜಯ ಸಾಧಿಸಿತು.

ಅಜ್ಮತುಲ್ಲಾ, ನವೀನ್-ಉಲ್-ಹಕ್,ರಶೀದ್ ಖಾನ್ ತಲಾ 2 ವಿಕೆಟ್ ಪಡೆದರು.

ಹಾಲಿ ಚಾಂಪಿಯನ್ ಇಂಗ್ಲೆಂಡ್, ಪಾಕಿಸ್ಥಾನಕ್ಕೆ ನಿರೀಕ್ಷೆಗೆ ಮೀರಿದ ಸೋಲುಣಿಸಿದ ಅಫ್ಘಾನ್ ಶ್ರೀಲಂಕಾ ಮತ್ತು ನೆದರ್ಲ್ಯಾಂಡ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್ ಗೆ ಏರಲು ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ರಣತಂತ್ರ ಹಣೆದಿತ್ತು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.