ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಂದೂಡಿಕೆ; ಐಪಿಎಲ್‌ ಹಾದಿ ಇನ್ನು ಸುಗಮ

2021 ಮತ್ತು 2022ರಲ್ಲಿ ಟಿ20 ವಿಶ್ವಕಪ್‌ ; 2023ರಲ್ಲಿ ನಡೆಯಲಿದೆ ಏಕದಿನ ವಿಶ್ವಕಪ್‌ ಪಂದ್ಯಾವಳಿ ; ಐಸಿಸಿ ಸಭೆಯಲ್ಲಿ ನಿರ್ಣಯ

Team Udayavani, Jul 21, 2020, 6:01 AM IST

ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಮುಂದೂಡಿಕೆ; ಐಪಿಎಲ್‌ ಹಾದಿ ಇನ್ನು ಸುಗಮ

ದುಬಾೖ: ಕೊನೆಗೂ ಭಾರತ ನಿರೀಕ್ಷಿಸಿದಂತೆಯೇ ಆಗಿದೆ.

ವರ್ಷಾಂತ್ಯ ಆಸ್ಟ್ರೇಲಿಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಮುಂದೂಡಲಾಗಿದೆ.

ಇದರಿಂದ ಆ ಸಮಯದಲ್ಲಿ ಐಪಿಎಲ್‌ ನಡೆಸುವ ಭಾರತದ ಕನಸು ಬಹುತೇಕ ನನಸಾಗಲಿದೆ.

‘ಇಂದು ದುಬಾೖಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ವಿಶ್ವಕಪ್‌ ಪಂದ್ಯಾವಳಿಯನ್ನು ಕೋವಿಡ್ 19 ಕಾರಣದಿಂದ ಮುಂದೂಡುವ ತೀರ್ಮಾನಕ್ಕೆ ಬರಲಾಯಿತು’ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

‘ಈ ವಿಶ್ವ ಮಟ್ಟದ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಟಗಾರರ ಸಹಿತ ಪ್ರತಿಯೊಬ್ಬರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದು ನಮ್ಮ ಕರ್ತವ್ಯ.

ಎಲ್ಲ ಸಾಧ್ಯತೆಗಳನ್ನು ಕೂಲಂಕಷವಾಗಿ ಪರಿಗಣಿಸಿದ ಬಳಿಕ ಈ ಕೂಟವನ್ನು ಮುಂದೂಡುವ ತೀರ್ಮಾನಕ್ಕೆ ಬರಲಾಯಿತು’ ಎಂದು ಐಸಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನು ಸಾಹ್ನಿ ಹೇಳಿದರು.

ಮೂಲ ವೇಳಾಪಟ್ಟಿ ಪ್ರಕಾರ ಈ ಪಂದ್ಯಾವಳಿ ಅ. 18ರಿಂದ ನ. 15ರ ತನಕ ನಡೆಯಬೇಕಿತ್ತು. ಆದರೆ ವಿಶ್ವಾದ್ಯಂತ ಕೋವಿಡ್ 19 ತನ್ನ ಹಾವಳಿಯನ್ನು ಇನ್ನೂ ಮುಂದುವರಿಸುತ್ತಲೇ ಇರುವ ಕಾರಣ ಈ ಸಮಯದಲ್ಲಿ ವಿಶ್ವಕಪ್‌ನಂಥ ಮಹೋನ್ನತ ಕೂಟವನ್ನು ನಡೆಸುವುದು ಅಸಾಧ್ಯ ಎಂಬ ತೀರ್ಮಾನಕ್ಕೆ ಬರಲಾಯಿತು.
16 ಅಂತಾರಾಷ್ಟ್ರೀಯ ತಂಡಗಳ ಆಟಗಾರರಿಗೆ ಕ್ವಾರಂಟೈನ್‌ ವ್ಯವಸ್ಥೆ ಮಾಡುವುದು ಕೂಡ ಸಾಧ್ಯವಿಲ್ಲ ಎಂದು ಐಸಿಸಿ ಹೇಳಿತು.

ಏಕದಿನವೂ ಮುಂದೂಡಿಕೆ
ಇದೇ ವೇಳೆ 2023ರಲ್ಲಿ ಭಾರತದ ಆತಿಥ್ಯದ ಏಕದಿನ ವಿಶ್ವಕಪ್‌ ಪಂದ್ಯಾವಳಿಯನ್ನು ಕೆಲವು ತಿಂಗಳ ಮಟ್ಟಿಗೆ ಮುಂದೂಡಲು ನಿರ್ಧರಿಸಲಾಯಿತು.

2023ರ ಮಾರ್ಚ್‌-ಎಪ್ರಿಲ್‌ ತಿಂಗಳಲ್ಲಿ ನಡೆಯಬೇಕಿದ್ದ ಈ ಕೂಟವನ್ನು ಅದೇ ವರ್ಷದ ಅಕ್ಟೋಬರ್‌-ನವೆಂಬರ್‌ನಲ್ಲಿ ಆಡಲಾಗುವುದು.

ಇದರೊಂದಿಗೆ ಸತತ‌ 3 ವರ್ಷ ವಿಶ್ವಕಪ್‌ ಪಂದ್ಯಾವಳಿಗಳ ಆನಂದವನ್ನು ಸವಿಯುವ ಅವಕಾಶ ಕ್ರಿಕೆಟ್‌ ಪ್ರೇಮಿಗಳದ್ದಾಗಲಿದೆ. ಮುಂದಿನ ವರ್ಷದ ಅಕ್ಟೋಬರ್‌-ನವೆಂಬರ್‌ನಲ್ಲಿ ಹಾಗೂ 2022ರ ಅಕ್ಟೋಬರ್‌-ನವೆಂಬರ್‌ನಲ್ಲಿ ಪುರುಷರ ಟಿ20 ವಿಶ್ವಕಪ್‌ ಪಂದ್ಯಾವಳಿ ನಡೆಯಲಿದೆ.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.