ಪ್ರವಾಸಿ ಭಾರತ ಕ್ರಿಕೆಟಿಗರಿಗೆ ಉಗ್ರರಿಂದ ಕೊಲೆ ಬೆದರಿಕೆ!
ವಿಂಡೀಸ್ನಲ್ಲಿ ಭಾರತ ತಂಡಕ್ಕೆ ಭದ್ರತೆ ಹೆಚ್ಚಿಸಿದ ಐಸಿಸಿ
Team Udayavani, Aug 20, 2019, 5:30 AM IST
ಮುಂಬಯಿ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ಆಟಗಾರರನ್ನು ಉಗ್ರರು ಕೊಲೆ ನಡೆಸುವ ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿಯುಳ್ಳ ಇ-ಮೇಲ್ ಸಂದೇಶವೊಂದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಆ. 16ರಂದು ಅನಾಮಿಕ ಸಂದೇಶವೊಂದು ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧಿಕೃತ ಇ-ಮೇಲ್ಗೆ ಬಂದಿದೆ. ಸಂಭಾವ್ಯ ದಾಳಿಯ ಬಗ್ಗೆ ಪಿಸಿಬಿ ತಕ್ಷಣ ಐಸಿಸಿ ಗಮನಕ್ಕೆ ತಂದಿದೆ. ಮಾತ್ರವಲ್ಲ ಬಿಸಿಸಿಐಗೂ ಸಂದೇಶ ತಲುಪಿಸಿದೆ. ಬಿಸಿಸಿಐ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ವಿಷಯವನ್ನು ಮುಟ್ಟಿಸಿದೆ.
ಈ ನಿಟ್ಟಿನಲ್ಲಿ ಗೃಹ ಸಚಿವಾಲಯ ಕಾರ್ಯಪ್ರವೃತ್ತರಾಗಿದ್ದು, ಆ್ಯಂಟಿಗುವಾದಲ್ಲಿರುವ ಭಾರತ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಭದ್ರತೆ ಹೆಚ್ಚಿಸಲು ತಿಳಿಸಿದೆ. ಸದ್ಯ ವಿಂಡೀಸ್ನಲ್ಲಿ ಟೆಸ್ಟ್ ಸರಣಿಗೆ ಸಿದ್ಧವಾಗುತ್ತಿರುವ ಭಾರತ ತಂಡದ ಭದ್ರತೆಯನ್ನು ಐಸಿಸಿ ಬಿಗಿಗೊಳಿಸಿದೆ.
ಆಟಗಾರರು ತಂಗಿರುವ ಹೊಟೇಲ್, ಅಭ್ಯಾಸಕ್ಕೆ ತೆರಳುವ ಹಾದಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಗ್ರರು ಭಾರತ ಆಟಗಾರರ ಕೊಲೆ ಬೆದರಿಕೆ ಸಂದೇಶವನ್ನು ಪಿಸಿಬಿಗೆ ಏಕೆ ಕಳುಹಿಸಿದರು ಎನ್ನುವುದು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ