ಅಗ್ರಸ್ಥಾನದಲ್ಲಿ ಭಾರತ; ಹೊರಬಿದ್ದ ಇಂಗ್ಲೆಂಡ್‌


Team Udayavani, Feb 27, 2021, 7:00 AM IST

ಅಗ್ರಸ್ಥಾನದಲ್ಲಿ  ಭಾರತ; ಹೊರಬಿದ್ದ ಇಂಗ್ಲೆಂಡ್‌

ದುಬಾೖ: ಇಂಗ್ಲೆಂಡ್‌ ಎದುರಿನ ಅಹ್ಮದಾಬಾದ್‌ ಪಿಂಕ್‌ ಟೆಸ್ಟ್‌ ಪಂದ್ಯವನ್ನು ಎರಡೇ ದಿನದಲ್ಲಿ ಗೆದ್ದ ಭಾರತವೀಗ ಚೊಚ್ಚಲ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ನೆಗೆದಿದೆ. ಗೆಲುವಿನ ಪ್ರತಿಶತನ ಸಾಧನೆ (71.0) ಮತ್ತು ಅಂಕ ಗಳಿಕೆಗಳೆರಡರಲ್ಲೂ (490) ಮೊದಲ ಸ್ಥಾನ ಅಲಂಕರಿಸಿದೆ. ಇದರೊಂದಿಗೆ ಟೀಮ್‌ ಇಂಡಿಯಾದ ಫೈನಲ್‌ ಪ್ರವೇಶ ಬಹುತೇಕ ಖಚಿತಗೊಂಡಿದೆ. ಕೊಹ್ಲಿ ಪಡೆ ಅಂತಿಮ ಟೆಸ್ಟ್‌ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಾಕು, ನ್ಯೂಜಿಲ್ಯಾಂಡ್‌ ವಿರುದ್ಧ ಲಾರ್ಡ್ಸ್‌ ಫೈನಲ್‌ನಲ್ಲಿ ಸೆಣಸಲಿದೆ.

ಇನ್ನೊಂದೆಡೆ ಸರಣಿಯಲ್ಲಿ ಹಿಂದುಳಿದ ಇಂಗ್ಲೆಂಡ್‌ ಫೈನಲ್‌ ರೇಸ್‌ನಿಂದ ಹೊರಬಿದ್ದಿದೆ. 64.1 ಗೆಲುವಿನ ಪ್ರತಿಶತ ಸಾಧನೆ ಮತ್ತು 442 ಅಂಕ ಹೊಂದಿರುವ ಆಂಗ್ಲ ಪಡೆ 4ನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯ 3ನೇ ಸ್ಥಾನಕ್ಕೆ ಏರಿದೆ. ಆಸೀಸ್‌ 69.2 ಗೆಲುವಿನ ಪರ್ಸಂಟೇಜ್‌ ಹಾಗೂ 332 ಅಂಕಗಳನ್ನು ಹೊಂದಿದೆ. ಆದರೆ ಫೈನಲ್‌ ಹಾದಿಯಲ್ಲಿ ಅಂಕ ಗಣನೆಗೆ ಬರುವುದಿಲ್ಲ. ಇಲ್ಲಿ ಗೆಲುವಿನ ಪ್ರತಿಶತ ಸಾಧನೆಯೊಂದೇ ಮಾನದಂಡ.

ಆಸ್ಟ್ರೇಲಿಯಕ್ಕೆ ಕ್ಷೀಣ ಅವಕಾಶ :

ತೃತೀಯ ಟೆಸ್ಟ್‌ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಇಂಗ್ಲೆಂಡನ್ನು ಫೈನಲ್‌ ರೇಸ್‌ನಿಂದ ಹೊರದಬ್ಬಿದೆ. ಇಲ್ಲಿ ಭಾರತದ ವಿರುದ್ಧ ಸೇಡು ತೀರಿಸಿಕೊಳ್ಳುವ ಅವಕಾಶವೊಂದು ಜೋ ರೂಟ್‌ ಬಳಗದ ಮುಂದಿದೆ. ಅದು ಅಂತಿಮ ಟೆಸ್ಟ್‌ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಕ್ಕೆ ತಂದದ್ದೇ ಆದಲ್ಲಿ ಭಾರತ ಫೈನಲ್‌ ಅವಕಾಶದಿಂದ ವಂಚಿತವಾಗಲಿದೆ. ಆದರೆ ಆಗ ಇಂಗ್ಲೆಂಡಿಗೇನೂ ಫೈನಲ್‌ ಟಿಕೆಟ್‌ ಲಭಿಸದು. ಈ ಅವಕಾಶ ಆಸ್ಟ್ರೇಲಿಯದ್ದಾಗಲಿದೆ (69.2). ಆಸೀಸ್‌ ಆಗ ದ್ವಿತೀಯ ಸ್ಥಾನಕ್ಕೆ ಏರಲಿದ್ದು, ಭಾರತ ಮೂರಕ್ಕೆ ಇಳಿಯಲಿದೆ.

ನ್ಯೂಜಿಲ್ಯಾಂಡ್‌ ಸುರಕ್ಷಿತ :

70.0 ಗೆಲುವಿನ ಪರ್ಸಂಟೇಜ್‌ ಸಾಧನೆಯೊಂದಿಗೆ ನ್ಯೂಜಿಲ್ಯಾಂಡ್‌ ಈಗಾಗಲೇ ಫೈನಲ್‌ ಪ್ರವೇಶಿಸಿದೆ. ಅಹ್ಮದಾಬಾದ್‌ನ ಅಂತಿಮ ಟೆಸ್ಟ್‌ ಪಂದ್ಯದ ಫ‌ಲಿತಾಂಶ ಕಿವೀಸ್‌ ಮೇಲೆ ಯಾವುದೇ ಪರಿಣಾಮ ಬೀರದು. ಅದೀಗ ದ್ವಿತೀಯ ಸ್ಥಾನದಲ್ಲಿದ್ದು, ಭಾರತ ಸೋತರಷ್ಟೇ ಅಗ್ರಸ್ಥಾನಕ್ಕೆ ನೆಗೆಯಲಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.