ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಅಶ್ವಿ‌ನ್‌, ಜಡೇಜ ಜಂಟಿ ನಂಬರ್‌ ವನ್‌


Team Udayavani, Mar 9, 2017, 12:05 PM IST

09-sports-4.jpg

ಹೊಸದಿಲ್ಲಿ: ಪ್ರವಾಸಿ ಆಸ್ಟ್ರೇಲಿಯ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟೆಸ್ಟ್‌ನಲ್ಲಿ ಅಮೋಘ ಬೌಲಿಂಗ್‌ ಪ್ರದರ್ಶನ ನೀಡಿದ್ದ ಸ್ಪಿನ್ನರ್‌ ರವೀಂದ್ರ ಜಡೇಜ ಅವರು ನೂತನ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನ ಬೌಲರ್ ಪಟ್ಟಿಯಲ್ಲಿ ತನ್ನ ದೇಶದವರೇ ಆದ ರವಿಚಂದ್ರನ್‌ ಅಶ್ವಿ‌ನ್‌ ಜತೆ ಜಂಟಿಯಾಗಿ ನಂಬರ್‌ ವನ್‌ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇಬ್ಬರು ಸ್ಪಿನ್ನರ್ ಜಂಟಿಯಾಗಿ ಅಗ್ರಸ್ಥಾನವನ್ನು ಪಡೆದಿರುವುದು ಇದೇ ಮೊದಲ ಸಲವಾಗಿದೆ. 

ಸುಮಾರು 9 ವರ್ಷಗಳ ಬಳಿಕ ಇಬ್ಬರು ಬೌಲರ್ ಅಗ್ರಸ್ಥಾನವನ್ನು ಹಂಚಿಕೊಂಡಿರುವುದು ಇದೇ ಮೊದಲ ಸಲವಾಗಿದೆ. ಈ ಹಿಂದೆ 2008ರ ಎಪ್ರಿಲ್‌ನಲ್ಲಿ ಡೇಲ್‌ ಸ್ಟೇನ್‌ ಮತ್ತು ಮುತ್ತಯ್ಯ ಮುರಳೀಧರನ್‌ ಜಂಟಿಯಾಗಿ ಅಗ್ರಸ್ಥಾನ ಪಡೆದಿದ್ದರು. ಬೆಂಗಳೂರು ಟೆಸ್ಟ್‌ನಲ್ಲಿ ಭಾರತವು ಆಸ್ಟ್ರೇಲಿಯವನ್ನು 75 ರನ್ನುಗಳಿಂದ ಸೋಲಿಸುವಲ್ಲಿ ಜಡೇಜ ಕೊಡುಗೆ ಅಪಾರವಾಗಿತ್ತು. ಇದರಿಂದಾಗಿ ಜಡೇಜ ಅಗ್ರಸ್ಥಾನಕ್ಕೇರುವಂತಾಯಿತು.

ಮೊದಲ ಇನ್ನಿಂಗ್ಸ್‌ನಲ್ಲಿ 63ಕ್ಕೆ 6 ಸಹಿತ ಪಂದ್ಯದಲ್ಲಿ 7 ವಿಕೆಟ್‌ ಕಿತ್ತ ಸಾಧನೆಗೈದ ಜಡೇಜ ಒಂದು ಸ್ಥಾನ ಮೇಲಕ್ಕೇರಿ ತನ್ನ ಬಾಳ್ವೆಯಲ್ಲಿ ಮೊದಲ ಬಾರಿ ನಂಬರ್‌ ವನ್‌ ಸ್ಥಾನಕ್ಕೇರಿದರು ಎಂದು ಐಸಿಸಿ ಪ್ರಕಟನೆಯಲ್ಲಿ ತಿಳಿಸಿದೆ.

ಬೆಂಗಳೂರು ಟೆಸ್ಟ್‌ನಲ್ಲಿ ಅಶ್ವಿ‌ನ್‌ ಕೂಡ ಗಮನಾರ್ಹ ನಿರ್ವಹಣೆ ನೀಡಿದ್ದರು. ಒಟ್ಟಾರೆ 8 ವಿಕೆಟ್‌ ಉರುಳಿಸಿದ್ದ ಅವರು ಸ್ಪಿನ್‌ ಲೆಜೆಂಡ್‌ ಬಿಷನ್‌ ಸಿಂಗ್‌ ಬೇಡಿ ಅವರ 266 ವಿಕೆಟ್‌ ಸಾಧನೆಯನ್ನು ಹಿಂದಿಕ್ಕಿದರು. ಒಟ್ಟು 269 ವಿಕೆಟ್‌ ಪಡೆಯುವ ಮೂಲಕ ಭಾರತ ಪರ ಟೆಸ್ಟ್‌ನಲ್ಲಿ ಐದನೇ ಗರಿಷ್ಠ ವಿಕೆಟ್‌ ಪಡೆದ ಬೌಲರ್‌ ಎಂದೆನಿಸಿಕೊಂಡರು.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ತನ್ನ ದ್ವಿತೀಯ ಸ್ಥಾನವನ್ನು ಇಂಗ್ಲೆಂಡಿನ ಜೋ ರೂಟ್‌ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬೆಂಗಳೂರು ಟೆಸ್ಟ್‌ನಲ್ಲಿ ಕೇವಲ 27 ರನ್‌ ಗಳಿಸಿದ್ದ ಕೊಹ್ಲಿ ಅವರಿಗಿಂತ ರೂಟ್‌ ಒಂದಂಕ (848) ಮುನ್ನಡೆಯಲ್ಲಿದ್ದಾರೆ.

ಬೆಂಗಳೂರು ಟೆಸ್ಟ್‌ನಲ್ಲಿ 17 ಮತ್ತು 92 ರನ್‌ ಗಳಿಸಿದ್ದ ಚೇತೇಶ್ವರ ಪೂಜಾರ ಅವರು ಐದು ಸ್ಥಾನ ಮೇಲಕ್ಕೇರಿ ಆರನೇ ರ್‍ಯಾಂಕ್‌ ಪಡೆದಿದ್ದಾರೆ. ಅಜಿಂಕ್ಯ ರಹಾನೆ ಎರಡು ಸ್ಥಾನ ಮೇಲಕ್ಕೇರಿ 15ನೇ ಸ್ಥಾನ ಪಡೆದಿದ್ದಾರೆ. ಅವರು ಬೆಂಗಳೂರು ಟೆಸ್ಟ್‌ನಲ್ಲಿ 17 ಮತ್ತು 52 ರನ್‌ ಹೊಡೆದಿದ್ದರು. ಬೆಂಗಳೂರು ಟೆಸ್ಟ್‌ನ ಪಂದ್ಯಶ್ರೇಷ್ಠ ಪುರಸ್ಕೃತ ಕೆಎಲ್‌ ರಾಹುಲ್‌ 23 ಸ್ಥಾನ ಮೇಲಕ್ಕೇರಿ 23ನೇ ಸ್ಥಾನ ಪಡೆದಿದ್ದಾರೆ. ಅವರು 90 ಮತ್ತು 51 ರನ್‌ ಗಳಿಸಿ ಭಾರತದ ಮುನ್ನಡೆಗೆ ನೆರವಾಗಿದ್ದರು.

ಆಸ್ಟ್ರೇಲಿಯದ ಸ್ಪಿನ್ನರ್‌ ನಥನ್‌ ಲಿಯೋನ್‌ ಎರಡು ಸ್ಥಾನ ಮೇಲಕ್ಕೇರಿ 16ನೇ ರ್‍ಯಾಂಕ್‌ ಪಡೆದಿದ್ದಾರೆ. ಎಡಗೈ ಸ್ಪಿನ್ನರ್‌ ಸ್ಟೀವ್‌ ಓ’ಕೀಫ್ ಮತ್ತು ಭಾರತದ ಉಮೇಶ್‌ ಯಾದವ್‌ ತಲಾ ಒಂದು ಸ್ಥಾನ ಮೇಲಕ್ಕೇರಿ ಅನುಕ್ರಮವಾಗಿ 28ನೇ ಮತ್ತು 29ನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್‌ ರ್‍ಯಾಂಕಿಂಗ್‌ನ ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ಆಸ್ಟ್ರೇಲಿಯ ನಾಯಕ ಸ್ಟೀವನ್‌ ಸ್ಮಿತ್‌ ನಂಬರ್‌ ವನ್‌ ಸ್ಥಾನದಲ್ಲಿ ಮುಂದುವರಿದಿದ್ದಾರೆ. 77 ಟೆಸ್ಟ್‌ಗಳಲ್ಲಿ ಅವರು ಅಗ್ರಸ್ಥಾನವನ್ನು ಕಾಯ್ದುಕೊಂಡು ಬಂದು ರಿಕಿ ಪಾಂಟಿಂಗ್‌ ಅವರ ಸಾಧನೆಯನ್ನು ಹಿಂದಿಕ್ಕಿದ್ದಾರೆ. ಪಾಂಟಿಂಗ್‌ 76 ಟೆಸ್ಟ್‌ಗಳಲ್ಲಿ ಅಗ್ರಸ್ಥಾನ ಹೊಂದಿದ್ದರು. ಇದೀಗ ಸ್ಮಿತ್‌ ಅವರು ಸ್ಟೀವ್‌ ವೋ (94) ಮತ್ತು ಡಾನ್‌ ಬ್ರಾಡ್‌ಮನ್‌ (93) ಬಳಿಕದ ಗರಿಷ್ಠ ಟೆಸ್ಟ್‌ ಪಂದ್ಯಗಳಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಬಂದ ಆಟಗಾರ ಎಂದೆನಿಸಿಕೊಂಡಿದ್ದಾರೆ.

ಸ್ಮಿತ್‌ ಅವರ ತಂಡ ಸದಸ್ಯ ಮ್ಯಾಥ್ಯೂ ರೆನ್‌ಶಾ ಆರು ಸ್ಥಾನ ಮೇಲಕ್ಕೇರಿ ತನ್ನ ಜೀವನಶ್ರೇಷ್ಠ 28ನೇ ಸ್ಥಾನ ಪಡೆದಿದ್ದರೆ ಶಾನ್‌ ಮಾರ್ಷ್‌ 37ನೇ ಸ್ಥಾನದಲ್ಲಿದ್ದಾರೆ. ಆಲ್‌ರೌಂಡರ್ ರ್‍ಯಾಂಕಿಂಗ್‌ನಲ್ಲಿ ಬಾಂಗ್ಲಾದೇಶದ ಶಕಿಬ್‌ ಅಲ್‌ ಹಸನ್‌ ಅವರು ಅಶ್ವಿ‌ನ್‌ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಅಶ್ವಿ‌ನ್‌ ಕೇವಲ 20 ರನ್‌ ಗಳಿಸಿದ್ದರು. ಅಶ್ವಿ‌ನ್‌ 2015ರ ಡಿಸೆಂಬರ್‌ನಲ್ಲಿ ಶಕಿಬ್‌ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.