ಭಾರತ ಕ್ವಾರ್ಟರ್‌ಫೈನಲ್‌ ಹಂತಕ್ಕೆ


Team Udayavani, Jan 17, 2018, 12:08 PM IST

17-27.jpg

ಮೌಂಟ್‌ ಮಾಂಗನಿ: ಮೂರು ಬಾರಿಯ ಚಾಂಪಿಯನ್‌ ಭಾರತವು “ಬಿ’ ಬಣದಲ್ಲಿ ನಡೆದ ಪಂದ್ಯದಲ್ಲಿ ಪಪುವಾ ನ್ಯೂ ಗಿನಿ ತಂಡವನ್ನು 10 ವಿಕೆಟ್‌ಗಳಿಂದ ಸದೆಬಡಿದು ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಕೂಟದ ಕ್ವಾರ್ಟರ್‌ಫೈನಲಿಗೇರಿತು.

ನಾಯಕ ಪೃಥ್ವಿ ಶಾ ಅವರ ಆಕರ್ಷಕ ಅರ್ಧಶತಕ ಮತ್ತು ಸ್ಪಿನ್ನರ್‌ ಅನುಕುಲ್‌ ರಾಯ್‌ ಅವರ ಚೊಚ್ಚಲ 5 ವಿಕೆಟ್‌ಗಳ ಸಂಭ್ರಮದಿಂದ ಭಾರತ ಭರ್ಜರಿ ಗೆಲುವು ಕಾಣುವಂತಾಯಿತು. ರಾಯ್‌ ಅವರ ಮಾರಕ ದಾಳಿಗೆ ತತ್ತರಿಸಿದ ಪುಪುವಾ 21.5 ಓವರ್‌ಗಳಲ್ಲಿ ಕೇವಲ 64 ರನ್ನಿಗೆ ಆಲೌಟಾಯಿತು. ಬಿಗು ದಾಳಿ ಸಂಘಟಿಸಿದ ರಾಯ್‌ ತನ್ನ 6.5 ಓವರ್‌ಗಳ ದಾಳಿಯಲ್ಲಿ ಕೇವಲ 14 ರನ್‌ ನೀಡಿ 5 ವಿಕೆಟ್‌ ಉರುಳಿಸಿದ್ದರು. ಅವರು ಪಂದ್ಯ ವೊಂದರಲ್ಲಿ 5 ವಿಕೆಟ್‌ ಕಿತ್ತಿರುವುದು ಇದೇ ಮೊದಲು.

2014ರ ಬಳಿಕ ಇದೇ ಮೊದಲ ಸಲ ವಿಶ್ವಕಪ್‌ನಲ್ಲಿ ಆಡಿದ ಪಪುವಾ ನ್ಯೂ ಗಿನಿ ತಂಡವು ಭಾರತದ ತೀಕ್ಷ್ಣ ದಾಳಿಗೆ ನೆಲಕಚ್ಚಿತು. ಕೇವಲ ಮೂವರು ಆಟಗಾರರು ಎರಡಂಕೆಯ ಮೊತ್ತ ತಲುಪಿದರು. ಇದರಿಂದ ತಂಡ 64 ರನ್‌ ಗಳಿಸಿ ಆಲೌಟಾಯಿತು. ಇದು ಈ ಕೂಟದ ನಿಕೃಷ್ಟ ಮೊತ್ತವಾಗಿದೆ. ಒವಿಯ ಸ್ಯಾಮ್‌ (15), ನಾಯಕ ಸಿಮೋನ್‌ ಅಟಾಯ್‌ (13) ಮತ್ತು ಸಿನಕ ಅರುವ (12) ಎರಡಂಕೆಯ ಮೊತ್ತ ಗಳಿಸಿದ ಆಟಗಾರರಾಗಿದ್ದಾರೆ. 

ಗೆಲ್ಲಲು 65 ರನ್‌ ಗಳಿಸುವ ಅವಕಾಶ ಪಡೆದ ಭಾರತ ಪೃಥ್ವಿ ಶಾ ಭರ್ಜರಿ ಆಟದಿಂದಾಗಿ ಕೇವಲ 8 ಓವರ್‌ಗಳಲ್ಲಿ ಜಯಭೇರಿ ಬಾರಿಸಿತು. ಬಿರುಸಿನ ಆಟವಾಡಿದ ಶಾ 39 ಎಸೆತ ಎದುರಿಸಿ 57 ರನ್‌ ಗಳಿಸಿ ಅಜೇಯರಾಗಿ ಉಳಿದರು. 12 ಬೌಂಡರಿ ಬಾರಿಸಿ ರಂಜಿಸಿದರು. ಇದರಿಂದಾಗಿ ಈ ಪಂದ್ಯ ಕೇವಲ 30 ಓವರ್‌ಗಳಲ್ಲಿಯೇ ಮುಗಿದು ಹೋಯಿತು.

ಭಾರತ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಆಸ್ಟ್ರೇಲಿಯ ತಂಡವನ್ನು 100 ರನ್ನುಗಳಿಂದ ಸೋಲಿಸಿತ್ತು. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಭಾರತವು ಜ. 19ರಂದು ಜಿಂಬಾಬ್ವೆ ತಂಡವನ್ನು ಎದುರಿಸಲಿದೆ.

ಸಂಕ್ಷಿಪ್ತ ಸ್ಕೋರು; ಪಪುವಾ ನ್ಯೂ ಗಿನಿ 21.5 ಓವರ್‌ಗಳಲ್ಲಿ 64 ಆಲೌಟ್‌ (ಒವಿಯ ಸ್ಯಾಮ್‌ 15, ಅನುಕುಲ್‌ ರಾಯ್‌ 14ಕ್ಕೆ 5, ಶಿವ ಂ ಮವಿ 16ಕ್ಕೆ 2); ಭಾರತ 8 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 67 (ಪೃಥ್ವಿ ಶಾ 57 ಔಟಾಗದೆ).

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.