ಮಂಧನಾ ಮೋಹಕ ಶತಕ ವನಿತೆಯರಿಗೆ ಸರಣಿ


Team Udayavani, Feb 8, 2018, 6:20 AM IST

ICC-Womens-Championships,-.jpg

ಕಿಂಬರ್ಲಿ: ಐಸಿಸಿ ವುಮೆನ್ಸ್‌ ಚಾಂಪಿಯನ್ಸ್‌ಶಿಪ್‌ ಸರಣಿಯ 2ನೇ ಪಂದ್ಯದಲ್ಲೂ ಆತಿಥೇಯ ದಕ್ಷಿಣ ಆಫ್ರಿಕಾವನ್ನು ಬಗ್ಗುಬಡಿದ ಭಾರತ ಸರಣಿ ವಶಪಡಿಸಿಕೊಂಡಿದೆ. ಬುಧವಾರ ಕಿಂಬರ್ಲಿಯಲ್ಲಿ ನಡೆದ ಪಂದ್ಯವನ್ನು ಮಿಥಾಲಿ ಪಡೆ 178 ರನ್ನುಗಳ ಭಾರೀ ಅಂತರದಿಂದ ಗೆದ್ದಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ಮೂರೇ ವಿಕೆಟಿಗೆ 302 ರನ್‌ ಪೇರಿಸಿದರೆ, ದಕ್ಷಿಣ ಆಫ್ರಿಕಾ 30.5 ಓವರ್‌ಗಳಲ್ಲಿ 124ಕ್ಕೆ ಆಲೌಟ್‌ ಆಯಿತು. ಪೂನಂ ಯಾದವ್‌ 4 ವಿಕೆಟ್‌, ರಾಜೇಶ್ವರಿ ಗಾಯಕ್ವಾಡ್‌ ಮತ್ತು ದೀಪ್ತಿ ಶರ್ಮ ತಲಾ 2 ವಿಕೆಟ್‌ ಕಿತ್ತರು.

ಮಂಧನಾ ಜೀವನಶ್ರೇಷ್ಠ ಆಟ
ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಅವರ 3ನೇ ಶತಕ ಹಾಗೂ ಜೀವನಶ್ರೇಷ್ಠ ಬ್ಯಾಟಿಂಗ್‌, ಹರ್ಮನ್‌ಪ್ರೀತ್‌ ಕೌರ್‌ ಮತ್ತು ವೇದಾ ಕೃಷ್ಣಮೂರ್ತಿ ಅವರ ಅರ್ಧ ಶತಕದಾಟ ಭಾರತದ ಸರದಿಯ ಆಕರ್ಷಣೆಯಾಗಿತ್ತು. ಬೌಲಿಂಗ್‌ ವೇಳೆ ಒಂದೇ ವಿಕೆಟ್‌ ಕಿತ್ತರೂ ಅನುಭವಿ ಜೂಲನ್‌ ಗೋಸ್ವಾಮಿ ಇತಿಹಾಸವನ್ನೇ ಬರೆದರು. ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 200 ವಿಕೆಟ್‌ ಉರುಳಿಸಿದ ವಿಶ್ವದ ಮೊದಲ ಬೌಲರ್‌ ಎಂಬ ಹಿರಿಮೆಗೆ ಪಾತ್ರರಾದರು.

ಮೊದಲ ಪಂದ್ಯದಲ್ಲಿ 84 ರನ್‌ ಬಾರಿಸಿ ಮಿಂಚಿದ್ದ ಮಂಧನಾ, ಬುಧವಾರದ ಮುಖಾಮುಖೀಯಲ್ಲಿ 135 ರನ್‌ ಬಾರಿಸಿ ಕಿಂಬರ್ಲಿಯ “ಡೈಮಂಡ್‌ ಓವಲ್‌’ನಲ್ಲಿ ಮೆರೆದಾಡಿದರು. ಇದು 34ನೇ ಏಕದಿನ ಪಂದ್ಯದಲ್ಲಿ ಮಂಧನಾ ಹೊಡೆದ 3ನೇ ಶತಕ. 129 ಎಸಡೆತಗಳಿಗೆ ಜವಾಬಿತ್ತ 21ರ ಹರೆಯದ ಈ ಎಡಗೈ ಆಟಗಾರ್ತಿ, 14 ಬೌಂಡರಿ ಹಾಗೂ ಒಂದು ಸಿಕ್ಸರ್‌ ಎತ್ತಿದರು. ಹರ್ಮನ್‌ಪ್ರೀತ್‌ ಅಜೇಯ 55 ರನ್‌, ವೇದಾ ಅಜೇಯ 51 ರನ್‌ ಮಾಡಿ ಭಾರತದ ಮೊತ್ತವನ್ನು ಮುನ್ನೂರರ ಗಡಿ ದಾಟಿಸಿದರು.

ಕಳೆದ ವರ್ಷದ ಐಸಿಸಿ ವನಿತಾ ವಿಶ್ವಕಪ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧದ ಟಾಂಟನ್‌ ಪಂದ್ಯದಲ್ಲಿ ಅಜೇಯ 106 ರನ್‌ ಮಾಡಿದ್ದು ಸ್ಮತಿ ಮಂಧನಾ ಅವರ ಈವರೆಗಿನ ಗರಿಷ್ಠ ವೈಯಕ್ತಿಕ ಗಳಿಕೆಯಾಗಿತ್ತು. ಅಯಬೊಂಗಾ ಖಾಕಾ ಎಸೆದ 43ನೇ ಓವರಿನಲ್ಲಿ ಭಾರತ 28 ರನ್‌ ಸೂರೆಗೈದಿತ್ತು. ಇದರಲ್ಲಿ ಮಂಧನಾ ಪಾಲೇ 22 ರನ್‌ (4 ಬೌಂಡರಿ, 1 ಸಿಕ್ಸರ್‌).
ಮಂಧನಾ ಮತ್ತು ಪೂನಂ ರಾವತ್‌ ಮೊದಲ ವಿಕೆಟಿಗೆ 12.3 ಓವರ್‌ಗಳಿಂದ 56 ರನ್‌ ಒಟ್ಟುಗೂಡಿಸಿದರು. ಬಳಿಕ ಮಂಧನಾ-ಮಿಥಾಲಿ (20) 2ನೇ ವಿಕೆಟಿಗೆ 51 ರನ್‌ ಪೇರಿಸಿದರು.

3ನೇ ವಿಕೆಟಿಗೆ ಜತೆಗೂಡಿದ ಮಂಧನಾ-ಹರ್ಮನ್‌ಪ್ರೀತ್‌ 134 ಪೇರಿಸಿ ಹರಿಣಗಳ ದಾಳಿಯನ್ನು ಲೆಕ್ಕಕ್ಕಿಲ್ಲದಂತೆ ಮಾಡಿದರು. ಬಳಿಕ ಹರ್ಮನ್‌ಪ್ರೀತ್‌-ವೇದಾ ಜೋಡಿಯಿಂದ ಮುರಿಯದ 4ನೇ ವಿಕೆಟಿಗೆ 61 ರನ್‌ ಒಟ್ಟುಗೂಡಿತು.ಹರ್ಮನ್‌ಪ್ರೀತ್‌ ಅವರ 55 ರನ್‌ 69 ಎಸೆತಗಳಿಂದ ಬಂತು (2 ಬೌಂಡರಿ, 1 ಸಿಕ್ಸರ್‌). ಇದು ಅವರ 11ನೇ ಅರ್ಧ ಶತಕ. ಕರ್ನಾಟಕದ ವೇದಾ ಕೃಷ್ಣಮೂರ್ತಿ 33 ಎಸೆತಗಳಿಂದ 51 ರನ್‌ ಹೊಡೆದು 7ನೇ ಅರ್ಧ ಶತಕ ಪೂರೈಸಿದರು. ಇದರಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸೇರಿತ್ತು.

ಸರಣಿಯ 3ನೇ ಹಾಗೂ ಅಂತಿಮ ಪಂದ್ಯ ಫೆ. 10ರಂದು ಪೊಚೆಫ್ಸೂóಮ್‌ನಲ್ಲಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ಭಾರತ-3 ವಿಕೆಟಿಗೆ 302 (ಮಂಧನಾ 135, ಹರ್ಮನ್‌ಪ್ರೀತ್‌ ಅಜೇಯ 55, ವೇದಾ ಅಜೇಯ 51, ಲುಯಿಸ್‌ 31ಕ್ಕೆ 1, ಎಂಟೊಜೇಕ್‌ 63ಕ್ಕೆ 1, ಕ್ಲಾಸ್‌ 65ಕ್ಕೆ 1). ದಕ್ಷಿಣ ಆಫ್ರಿಕಾ-30.5 ಓವರ್‌ಗಳಲ್ಲಿ 124 (ಲೀ 73, ಕಾಪ್‌ 17, ಪೂನಂ 24ಕ್ಕೆ 4, ರಾಜೇಶ್ವರಿ 14ಕ್ಕೆ 2, ದೀಪ್ತಿ 34ಕ್ಕೆ 2, ಜೂಲನ್‌ 29ಕ್ಕೆ 1).

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.