ಐಸಿಸಿ ವನಿತಾ ಟಿ20 ವಿಶ್ವಕಪ್‌: ಅಜೇಯ ಭಾರತಕ್ಕೆ ಲಂಕಾ ಸವಾಲು


Team Udayavani, Feb 29, 2020, 5:59 AM IST

icc-women

ಮೆಲ್ಬರ್ನ್: ಸತತ ಮೂರು ಪಂದ್ಯಗಳನ್ನು ಗೆದ್ದು ಅಧಿಕೃತವಾಗಿ ಐಸಿಸಿ ವನಿತಾ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ತಲುಪಿದ ಅಜೇಯ ಭಾರತೀಯ ವನಿತಾ ತಂಡವು ಶನಿವಾರ ಲೀಗ್‌ನ ಅಂತಿಮ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಆಡಳಿದೆ.

ಗೆಲುವಿನೊಂದಿಗೆ ಲೀಗ್‌ ಹಂತ ಮುಗಿಸುವುದು ಹರ್ಮನ್‌ಪ್ರೀತ್‌ ಕೌರ್‌ ಪಡೆಯ ಯೋಜನೆಯಾಗಿದೆ. ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಶ್ರೀಲಂಕಾ ತಂಡ ಬಹುತೇಕ ಸೆಮಿಫೈನಲ್‌ ರೇಸ್‌ನಿಂದ ಹೊರಬಿದ್ದಿದೆ. ಆದರೂ ಅಜೇಯ ಭಾರತಕ್ಕೆ ತಿರುಗೇಟು ನೀಡಲು ಶ್ರೀಲಂಕಾ ಹಾತೊರೆಯುತ್ತಿದೆ.

ಬ್ಯಾಟಿಂಗ್‌ ಫಾರ್ಮ್ ಚಿಂತೆ
ಭಾರತವು ಇಷ್ಟರವರೆಗೆ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ, ಬಾಂಗ್ಲಾದೇಶ ಮತ್ತು ನ್ಯೂಜಿಲ್ಯಾಂಡ್‌ ವಿರುದ್ಧ ಗೆದ್ದು ಸಂಭ್ರಮಿಸಿದೆ. ಆದರೆ ಈ ಮೂರು ಪಂದ್ಯಗಳಲ್ಲಿ ಶಿಸ್ತಿನ ಬೌಲಿಂಗ್‌ನಿಂದಾಗಿ ಭಾರತ ಮೇಲುಗೈ ಸಾಧಿಸಿತ್ತು. ಬ್ಯಾಟಿಂಗ್‌ನಲ್ಲಿ ಭಾರತೀಯ ತಂಡ ವೈಫ‌ಲ್ಯ ಅನುಭವಿಸಿದೆ. ಬೃಹತ್‌ ಮೊತ್ತ ಪೇರಿಸಲು ಒಮ್ಮೆಯೂ ತಂಡಕ್ಕೆ ಸಾಧ್ಯವಾಗಲಿಲ್ಲ. ಶಫಾಲಿ ವರ್ಮ ಹೊರತುಪಡಿಸಿ ಬೇರೆ ಯಾವುದೇ ಆಟಗಾರ್ತಿ ನಿರೀಕ್ಷಿತ ಮಟ್ಟದಲ್ಲಿ ಬ್ಯಾಟಿಂಗ್‌ ಪ್ರದರ್ಶನ ತೋರಿಲ್ಲ. ಬ್ಯಾಟಿಂಗ್‌ ಫಾರ್ಮ್ ಬಗ್ಗೆ ಭಾರತ ಚಿಂತೆ ಪಡುವಂತಾಗಿದೆ. ಇದನ್ನು ಸ್ವತಃ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕೂಡ ಒಪ್ಪಿಕೊಂಡಿದ್ದಾರೆ. ಶಫಾಲಿ ವರ್ಮ ಆಡಿದ ಮೂರು ಪಂದ್ಯಗಳಲ್ಲಿ ಒಟ್ಟಾರೆ 114 ರನ್‌ ಪೇರಿಸಿದ್ದಾರೆ.

ಭಾರತೀಯ ತಂಡವು ಉತ್ತಮ ಆರಂಭ ಪಡೆದರೂ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಕುಸಿತದಿಂದಾಗಿ ಉತ್ತಮ ಮೊತ್ತ ಪೇರಿಸಲು ಸಾಧ್ಯವಾಗುತ್ತಿಲ್ಲ. ಮಧ್ಯಮ ಕ್ರಮಾಂಕದ ಆಟಗಾರ್ತಿಯರು ಕ್ರೀಸ್‌ ನಲ್ಲಿ ನಿಂತು ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸುವ ಅಗತ್ಯವಿದೆ. ಹರ್ಮನ್‌ಪ್ರೀತ್‌ ಮತ್ತು ವೇದಾ ಕೃಷ್ಣಮೂರ್ತಿ ಅವರು ಜವಾಬ್ದಾರಿ ವಹಿಸಿ ತಂಡದ ಬ್ಯಾಟಿಂಗ್‌ ಶಕ್ತಿಯನ್ನು ಬಲಪಡಿಸಬೇಕಾಗಿದೆ.

ಭಾರತೀಯ ತಂಡದ ಬೌಲಿಂಗ್‌ ಪಡೆ ಬಲಿಷ್ಠವಾಗಿದೆ. ಲೆಗ್‌ ಸ್ಪಿನ್ನರ್‌ ಪೂನಂ ಯಾದವ್‌ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ 19ಕ್ಕೆ 4 ಸಹಿತ ಒಟ್ಟು 8 ವಿಕೆಟ್‌ ಉರುಳಿಸಿದ್ದಾರೆ. ಅವರಿಗೆ ರಾಜೇಶ್ವರಿ ಗಾಯಕ್ವಾಡ್‌, ದೀಪ್ತಿ ಶರ್ಮ ಮತ್ತು ಶಿಖಾ ಪಾಂಡೆ ಉತ್ತಮ ನೆರವು ನೀಡಿದ್ದಾರೆ. ಬೌಲರ್‌ಗಳ ಬಲದಿಂದಲೇ ತಂಡ ಈವರೆಗಿನ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿತ್ತು.

ಸಂಕಷ್ಟದಲ್ಲಿ ಲಂಕಾ
ಸತತ ಎರಡು ಪಂದ್ಯ ಸೋತಿರುವ ಶ್ರೀಲಂಕಾ ಒಂದು ವೇಳೆ ಈ ಪಂದ್ಯವನ್ನು ಸೋತರೆ ಸೆಮಿಫೈನಲ್‌ ರೇಸ್‌ನಿಂದ ಹೊರಬೀಳಲಿದೆ. ಒಂದು ವೇಳೆ ಶ್ರೀಲಂಕಾ ಮುಂದಿನೆರಡು ಪಂದ್ಯ ಗೆದ್ದರೂ ಸೆಮಿಫೈನಲ್‌ ಟಿಕೆಟ್‌ ಖಾತ್ರಿ ಎನ್ನುವಂತಿಲ್ಲ. ಯಾಕೆಂದರೆ ಇದೇ ವೇಳೆ ಕಿವೀಸ್‌ ಮತ್ತು ಆಸೀಸ್‌ ಉಳಿದೆರಡು ಪಂದ್ಯಗಳಲ್ಲಿ ಸೋಲಬೇಕು ಮತ್ತು ಶ್ರೀಲಂಕಾ ಉತ್ತಮ ರನ್‌ರೇಟ್‌ನೊಂದಿಗೆ ಗೆಲ್ಲಬೇಕಾಗಿದೆ. ಈ ಎಲ್ಲ ಲೆಕ್ಕಾಚಾರದೊಂದಿಗೆ ಲಂಕಾ ತಂಡವು ಭಾರತದೆದುರು ಕಣಕ್ಕಿಳಿಯಲಿದೆ.

ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ 10 ವಿಕೆಟ್‌ ಗೆಲುವು ಸಾಧಿಸಿದ ಶ್ರೀಲಂಕಾ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫ‌ಲವಾಗಿದೆ. ಹೀಗಾಗಿ ಸಂಕಷ್ಟಕ್ಕೆ ಸಿಲುಕಿದೆ. ಗೆದ್ದರಷ್ಟೇ ತಂಡ ಮುನ್ನಡೆಯುವ ಬಗ್ಗೆ ಯೋಚಿಸಬಹುದಾಗಿದೆ.

ದಕ್ಷಿಣ ಆಫ್ರಿಕಾಕ್ಕೆ ಥಾçಲಂಡ್‌ ವಿರುದ್ಧ ದಾಖಲೆ ಗೆಲುವು
ಕ್ಯಾನ್‌ಬೆರ: ಲಿಝೆಲ್‌ ಲೀ ಅವರ ಭರ್ಜರಿ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ವನಿತೆಯರು ಐಸಿಸಿ ವನಿತಾ ಟಿ20 ವಿಶ್ವಕಪ್‌ನ ಪಂದ್ಯದಲ್ಲಿ ಥಾçಲಂಡ್‌ ತಂಡದ ವಿರುದ್ಧ ದಾಖಲೆ 113 ರನ್ನುಗಳಿಂದ ಗೆಲುವು ದಾಖಲಿಸಿತಲ್ಲದೇ ಸೆಮಿಫೈನಲ್‌ ತಲುಪುವ ಸಾಧ್ಯತೆಯನ್ನು ಹೆಚ್ಚಿಸಿಕೊಂಡಿದೆ.

ಲೀ ಅವರು 60 ಎಸೆತಗಳಿಂದ 101 ರನ್‌ ಸಿಡಿಸಿದರಲ್ಲದೇ ಸನ್‌ ಲುಸ್‌ (ಅಜೇಯ 61) ಅವರೊಂದಿಗೆ 131 ರನ್ನುಗಳ ಜತೆಯಾಟ ನಡೆಸಿದ್ದರಿಂದ ದಕ್ಷಿಣ ಆಫ್ರಿಕಾ 3 ವಿಕೆಟಿಗೆ 195 ರನ್ನುಗಳ ಬೃಹತ್‌ ಮೊತ್ತ ಪೇರಿಸಿತು. ಇದು ವನಿತಾ ಟಿ20 ವಿಶ್ವಕಪ್‌ ಇತಿಹಾಸದ ಬೃಹತ್‌ ಮೊತ್ತವಾಗಿದೆ.

ಇದಕ್ಕುತ್ತರವಾಗಿ ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದ ಥಾçಲಂಡ್‌ ತಂಡವು ಇನ್ನೂ 5 ಎಸೆತ ಬಾಕಿ ಇರುವಾಗಲೇ 82 ರನ್ನಿಗೆ ಆಲೌಟಾಯಿತು. ರನ್ನುಗಳ ಅಂತರದಲ್ಲಿ ಇದು ಥಾçಲಂಡಿನ ಎರಡನೇ ದೊಡ್ಡ ಸೋಲು ಆಗಿದೆ.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.