ಡ್ಯಾನ್ಸರ್‌ ಆಗಬೇಕಿದ್ದ ಮಿಥಾಲಿ ಕ್ರಿಕೆಟರ್‌ ಆದ ಕತೆ…


Team Udayavani, Jul 10, 2017, 3:45 AM IST

Mithali-Raj-dancer.jpg

ಚೆನ್ನೈ: ಭಾರತ ವನಿತಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಕಿರಿಯ ವಯಸ್ಸಿನಲ್ಲಿ ಡ್ಯಾನ್ಸರ್‌ ಆಗುವ ಕನಸು ಕಂಡಿದ್ದರು. ಆದರೆ ಬಳಿಕ ಆದದ್ದು ಕ್ರಿಕೆಟರ್‌. ವಿಶ್ವವೇ ಬೆರಗುಗೊಳಿಸುವ ರೀತಿಯಲ್ಲಿ ಅವರು ಬ್ಯಾಟಿಂಗ್‌ ಮಾಡುತ್ತಿದ್ದಾರೆ.

ಸಣ್ಣ ವಯಸ್ಸಿನಲ್ಲಿ ಡ್ಯಾನ್ಸರ್‌ ಆಗಿದ್ದ ಅವರು ಕ್ರಿಕೆಟರ್‌ ಆಗಿ ಬೆಳೆದದ್ದು ಹೇಗೆ, ರನ್‌ ಮಳೆ ಹರಿಸಿ ಸಾಧನೆಗಳ ಮೇಲೆ ಸಾಧನೆ ಮಾಡುತ್ತಿರುವುದು ಹೇಗೆ… ಮಿಥಾಲಿ ತಂದೆ ದೊರೈ ರಾಜ್‌ ಈ ಕುತೂಹಲವನ್ನು ಅಭಿಮಾನಿಗಳ ಮುಂದೆ ತೆರೆದಿರಿಸಿದ್ದಾರೆ.

“ನನ್ನ ಮಗನನ್ನು ಕ್ರಿಕೆಟ್‌ ತರಬೇತಿ ಶಿಬಿರಕ್ಕೆ ಹಾಕಿದ್ದೆ. ಮಗಳು ಮಿಥಾಲಿ ಸ್ವಲ್ಪ ಸೋಮಾರಿ ಸ್ವಭಾವದವಳು. ಅವಳನ್ನು ಬೆಳಗ್ಗೆ ಬೇಗ ಏಳಿಸುವುದೇ ದೊಡ್ಡ ಸವಾಲಾಗಿತ್ತು. ಹೀಗಾಗಿ ಅವಳ ಸಹೋದರನ ಜತೆಗೆ ಇವಳನ್ನೂ ಕ್ರಿಕೆಟ್‌ ಶಿಬಿರಕ್ಕೆ ಸೇರಿಸಿದೆ. ನನ್ನ ಸ್ನೇಹಿತರಾಗಿರುವ ಜ್ಯೋತಿ ಪ್ರಕಾಶ್‌ ಮಾರ್ಗದರ್ಶನದಲ್ಲಿ ಅವರು ಪಳಗಿದರು. ಅನಂತರ ಅವಳು ಹಿಂದೆ ತಿರುಗಿ ನೋಡಿದ ಪ್ರಶ್ನೆಯೇ ಇಲ್ಲ’ ಎಂದು ಅವರ ತಂದೆ ದೊರೈ ರಾಜ್‌ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಯಿ ಲೀಲಾ, “ಆರಂಭದಲ್ಲಿ ಮಗಳು ಕ್ರಿಕೆಟ್‌ ಆಡಲು ಹೋಗುವುದನ್ನು ನಾನು ವಿರೋಧಿಸಿದ್ದೆ. ಮುಖಕ್ಕೆ ಗಾಯವಾದರೆ ಮದುವೆ ಮಾಡಿಕೊಳ್ಳಲು ಯಾರು ಮುಂದಕ್ಕೆ ಬರುತ್ತಾರೆ ಎಂದು ಎಲ್ಲರೂ ನನ್ನನ್ನು ಪ್ರಶ್ನಿಸುತ್ತಿದ್ದರು. ಸಹಜವಾಗಿಯೇ ನಾನು ಆತಂಕಕ್ಕೊಳಗಾದೆ. ಈಗ ಮಗಳು ಬೆಳೆದಿರುವ ರೀತಿ ನೋಡಿ ಸಂತೋಷವಾಗುತ್ತದೆ…’ ಎಂದರು.

“ಒಮ್ಮೆ ಮಿಥಾಲಿ ಹುಡುಗರ ತಂಡದ ಜತೆ ಕ್ರಿಕೆಟ್‌ ಆಡುತ್ತಿದ್ದಳು. ಮುಖಕ್ಕೆ ಚೆಂಡು ಬಡಿದು ಗಂಭೀರ ಗಾಯವಾಯಿತು. 4 ಹೊಲಿಗೆ ಕೂಡ ಹಾಕಲಾಯಿತು. ಆದರೆ ಮರುದಿನವೇ ಅವಳು ಅಂಗಳಕ್ಕಿಳಿದು ಮತ್ತೆ ಕ್ರಿಕೆಟ್‌ ಆಡತೊಡಗಿದಳು…’ ಎಂದು ತಂದೆ ದೊರೈರಾಜ್‌ ಅಂದಿನ ಘಟನೆಯೊಂದನ್ನು ನೆನಪಿಸಿಕೊಂಡರು.

ಈಗ ಮಿಥಾಲಿ ರಾಜ್‌ ವನಿತಾ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ತಂಡದ ಜತೆಗೆ ಮಿಥಾಲಿ ಸಾಧನೆಯೂ ಗಮನಾರ್ಹ ಮಟ್ಟದಲ್ಲಿದೆ. ಸರ್ವಾಧಿಕ ರನ್ನಿನ ವಿಶ್ವದಾಖಲೆಯ ಸಮೀಪದಲ್ಲಿದ್ದಾರೆ. ಭಾರತ ತಂಡದ ಸೆಮಿಫೈನಲ್‌ ಸಾಧ್ಯತೆಯೂ ಉಜ್ವಲಗೊಂಡಿದೆ. ಉಳಿದ ಲೀಗ್‌ ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್‌ ಮತ್ತು ಆಸ್ಟ್ರೇಲಿಯ ವಿರುದ್ಧ ಗೆದ್ದು ಅಧಿಕಾರಯುತವಾಗಿ ಮಿಥಾಲಿ ಪಡೆ ಉಪಾಂತ್ಯ ಪ್ರವೇಶಿಸಲಿ ಎಂಬುದು ಅಭಿಮಾನಿಗಳ ಹಾರೈಕೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.