ಮಹಿಳಾ ಏಕದಿನ ವಿಶ್ವಕಪ್‌: ಭಾರತ ವನಿತೆಯರ ದಾಳಿಗೆ ಮುಗ್ಗರಿಸಿದ ಪಾಕ್‌


Team Udayavani, Jul 3, 2017, 3:45 AM IST

AP7_2_2017_000209B.jpg

ಡರ್ಬಿ(ಇಂಗ್ಲೆಂಡ್‌): ಸಂಘಟನಾತ್ಮಕ ಹೋರಾಟ ಪ್ರದರ್ಶಿಸಿದ ಭಾರತ ತಂಡ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ 95 ರನ್‌ಗಳಿಂದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಭಾರತ ಕೂಟದಲ್ಲಿ ಸತತ 3ನೇ ಪಂದ್ಯದಲ್ಲಿ ಜಯ ಸಾಧಿಸಿದೆ. ಅದೇ ರೀತಿ ಪಾಕ್‌ ವಿರುದ್ಧ ಏಕದಿನದಲ್ಲಿ ಸೋಲಿಲ್ಲದ ಅಜೇಯ ಓಟವನ್ನು ಮುಂದುವರಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ನಲ್ಲಿ 9 ವಿಕೆಟ್‌ ಕಳೆದುಕೊಂಡು 169 ರನ್‌ ಬಾರಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ ಪಾಕ್‌ 38.1 ಓವರ್‌ಗೆ 74 ರನ್‌ ಬಾರಿಸಿ ಆಲೌಟ್‌ ಆಯಿತು. ಭಾರತೀಯ ಬೌಲರ್‌ ಏಕ್ತಾ ಬಿಸ್ಟ್‌ ಭರ್ಜರಿ ದಾಳಿಯಿಂದಾಗಿ ಪಾಕ್‌ ಆಟಗಾರ್ತಿಯರು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್‌ ಸೇರಿದರು. ಪಾಕ್‌ ಪರ ಸನಾ ಮಿರ್‌ (29), ನಹಿದಾ ಖಾನ್‌(23) ರನ್‌ ಬಾರಿಸಿದ್ದೆ ವೈಯಕ್ತಿಕ ದೊಡ್ಡ ಮೊತ್ತವಾಗಿತ್ತು. ಭಾರತದ ಪರ ಏಕ್ತಾ ಬಿಸ್ಟ್‌ 5 ವಿಕೆಟ್‌ ಪಡೆದು ಮಿಂಚಿದರು.

ಭಾರತಕ್ಕೆ ರಾವತ್‌, ಸುಷ್ಮಾ ಆಸರೆ: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಭಾರತಕ್ಕೆ ಪೂನಂ ರಾವತ್‌, ಸುಷ್ಮಾ ವರ್ಮ, ದೀಪ್ತಿ ಶರ್ಮ ಆಸರೆಯಾದರು. ಈ ಮೂವರು ಆಟಗಾರ್ತಿಯರ ಬ್ಯಾಟಿಂಗ್‌ ಬಲದಿಂದಾಗಿ ಭಾರತ ಸ್ಪರ್ಧಾತ್ಮಕ ಮೊತ್ತವನ್ನು ದಾಖಲಿಸಲು ಯಶಸ್ವಿಯಾಯಿತು.

ಆರಂಭಿಕರಾಗಿ ಪೂನಂ ರಾವುತ್‌ ಮತ್ತು ಸ್ಮತಿ ಮಂಧನಾ ಕಣಕ್ಕೆ ಇಳಿದರು. ಕಳೆದ ಎರಡೂ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ಮಂಧನಾ 2 ರನ್‌ ಬಾರಿಸುತ್ತಿದ್ದಂತೆ ದಿಯಾನ ಬೇಗ್‌ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದರು. ಹೀಗಾಗಿ ಆಕಂಭದಲ್ಲಿಯೇ ಭಾರತಕ್ಕೆ ಆಘಾತವಾಯಿತು. 2ನೇ ವಿಕೆಟ್‌ಗೆ ಜತೆಗೂಡಿದ ರಾವತ್‌ ಮತ್ತು ದೀಪ್ತಿ ಶರ್ಮ 67 ರನ್‌ ಜತೆಯಾಟ ನೀಡಿದರು. ಆದರೆ ಇವರ ಬ್ಯಾಟಿಂಗ್‌ ತುಂಬಾ ನಿಧಾನವಾಗಿತ್ತು. ರಾವತ್‌ 72 ಎಸೆತದಲ್ಲಿ 5 ಬೌಂಡರಿ ಸೇರಿದಂತೆ 47 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ಭಾರತದ ಭರವಸೆಯ ಆಟಗಾರ್ತಿ ಮಿಥಾಲಿ ರಾಜ್‌ (8) ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡರು. ನಂತರ ಭಾರತೀಯರ ಆಟಗಾರ್ತಿಯರು ಒಬ್ಬರ ಹಿಂದೆ ಒಬ್ಬರು ಪೆವಿಲಿಯನ್‌ ಸೇರತೊಡಗಿದರು.

ಆದರೆ ಈ ಹಂತದಲ್ಲಿ ಸುಷ್ಮಾ ವರ್ಮ ಮತ್ತು ಜೂಲನ್‌ ಗೋಸ್ವಾಮಿ ಉತ್ತಮ ಆಟ ಪ್ರದರ್ಶಿಸಿದರು. ಸುಷ್ಮಾ 33 ರನ್‌ ಬಾರಿಸಿದರೆ, ಗೋಸ್ವಾಮಿ 14 ರನ್‌ ಬಾರಿಸಿ ಔಟ್‌ ಆದರು.

ಸಂಕ್ಷಿಪ್ತ ಸ್ಕೋರ್‌: ಭಾರತ 50 ಓವರ್‌ಗೆ 169/9 (ಪೂನಂ ರಾವತ್‌ 47, ಸುಷ್ಮಾ ವರ್ಮ 33, ದೀಪ್ತಿ ಶರ್ಮ 28, ನಶ್ರಾ ಸಂಧು 26ಕ್ಕೆ4, ಸಾದಿಯಾ ಯೂಸುಫ್ 30ಕ್ಕೆ 2), ಪಾಕಿಸ್ತಾನ 38.1 ಓವರ್‌ಗೆ 74/10 (ಸನಾ ಮಿರ್‌ 29, ನಹಿದಾ ಖಾನ್‌ 23, ಏಕ್ತಾ ಬಿಸ್ಟ್‌ 18ಕ್ಕೆ 5).

ಪಂದ್ಯದ ತಿರುವು:
ಸ್ಪರ್ಧಾತ್ಮಕ ಮೊತ್ತವನ್ನು ಚೇಸ್‌ ಮಾಡಲು ಮುಂದಾದ ಪಾಕ್‌ ತಂಡ 26 ರನ್‌ ಬಾರಿಸುವುದರೊಳಗಾಗಿ ಮಹತ್ವದ 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಇದು ಭಾರತದ ಗೆಲುವಿಗೆ ಕಾರಣವಾಯಿತು.
 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.