ಸ್ಮತಿ ಮಂಧನಾ ಅಜೇಯ ಶತಕಭಾರತಕ್ಕೆ ಭರ್ಜರಿ  ಗೆಲುವು


Team Udayavani, Jun 30, 2017, 3:35 AM IST

SPORTS-1.jpg

ಟಾಂಟನ್‌: ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಅವರ ಆಕರ್ಷಕ ಶತಕದಿಂದಾಗಿ ಭಾರತ ತಂಡವು ಐಸಿಸಿ ವನಿತಾ ವಿಶ್ವಕಪ್‌ ಕ್ರಿಕೆಟ್‌ ಕೂಟದ ಗುರುವಾರದ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ ತಂಡವನ್ನು 7 ವಿಕೆಟ್‌ಗಳಿಂದ ಭರ್ಜರಿಯಾಗಿ ಸೋಲಿಸಿದೆ. ಮತ್ತೆ ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ ವನಿತೆಯರು ಸತತ ಎರಡನೇ ಗೆಲುವು ದಾಖಲಿಸಿದ್ದಾರೆ. ಮೊದಲ ಪಂದ್ಯದಲ್ಲಿ ಭಾರತ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಸೋಲಿಸಿತ್ತು.

ಟಾಸ್‌ ಗೆದ್ದು ಫೀಲ್ಡಿಂಗ್‌ ನಡೆಸಿದ ಭಾರತ ಉತ್ತಮ ಬೌಲಿಂಗ್‌ ದಾಳಿ ನಡೆಸಿ ವೆಸ್ಟ್‌ಇಂಡೀಸ್‌ ಮೊತ್ತವನ್ನು 8 ವಿಕೆಟಿಗೆ 183 ರನ್ನಿಗೆ ನಿಯಂತ್ರಿಸಿತ್ತು. ಆಬಳಿಕ ಸ್ಮತಿ ಮಂಧನಾ ಅವರ ಆಕರ್ಷಕ ಅಜೇಯ ಶತಕದಿಂದಾಗಿ ಭಾರತ 42.3 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಿತು.

ರನ್‌ ಖಾತೆ ತೆರೆಯುವ ಮೊದಲೇ ಪೂನಂ ರಾವುತ್‌ ಅವರನ್ನು ಕಳೆದುಕೊಂಡ ಭಾರತವನ್ನು ಮಂಧನಾ ಆಧರಿಸಿದರು. ದೀಪ್ತಿ ಶರ್ಮ ಔಟಾದ ಬಳಿಕ ಮಂಧನಾ ಅವರನ್ನು ಸೇರಿಕೊಂಡ ನಾಯಕಿ ಮಿಥಾಲಿ ರಾಜ್‌ ಭರ್ಜರಿ ಆಟವಾಡಿ ತಂಡದ ಗೆಲುವು ಖಚಿತಪಡಿಸಿದರು. ಸತತ 7 ಅರ್ಧಶತಕ ದಾಖಲಿಸಿದ್ದ ಮಿಥಾಲಿ ಈ ಪಂದ್ಯದಲ್ಲಿಯೂ ಅರ್ಧಶತಕ ದಾಖಲಿಸುವ ಸೂಚನೆ ನೀಡಿದ್ದರೂ 46 ರನ್ನಿಗೆ ಔಟಾದರು. ಅವರು ಮಂಧನಾ ಜತೆಗೂಡಿ ಮೂರನೇ ವಿಕೆಟಿಗೆ 108 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು.

ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 90 ರನ್‌ ಗಳಿಸಿದ್ದ ಮಂಧನಾ ಈ ಪಂದ್ಯದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. ಗೆಲುವಿನ ರನ್‌ ಹೊಡೆದ ಅವರು 108 ಎಸೆತ ಎದುರಿಸಿದ್ದು 106 ರನ್‌ ಹೊಡೆದು ಅಜೇಯರಾಗಿ ಉಳಿದರು. 13 ಬೌಂಡರಿ ಬಾರಿಸಿದ ಅವರು 2 ಸಿಕ್ಸರ್‌ ಸಿಡಿಸಿದ್ದರು. ಮಂಧನಾ ಈ ಪಂದ್ಯದಲ್ಲಿ ಸಿಕ್ಸರ್‌ ಬಾರಿಸಿದ ಏಕೈಕ ಆಟಗಾರ್ತಿ ಆಗಿದ್ದಾರೆ.

ಈ ಮೊದಲು ವೆಸ್ಟ್‌ಇಂಡೀಸ್‌ ಒಂದು ವಿಕೆಟಿಗೆ 69 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಆಬಳಿಕ ನಾಟಕೀಯ ಕುಸಿತ ಕಂಡ ವೆಸ್ಟ್‌ಇಂಡೀಸ್‌ 91 ರನ್‌ ತಲುಪುವಷ್ಟರಲ್ಲಿ 6 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ದೀಪ್ತಿ ಶರ್ಮ, ಪೂನಂ ಮತ್ತು ಹರ್ಮನ್‌ಪ್ರೀತ್‌ ಬಿಗು ದಾಳಿ ಸಂಘಟಿಸಿ ವಿಂಡೀಸ್‌ಗೆ ಪ್ರಬಲ ಹೊಡೆತ ನೀಡಿದ್ದರು.

ಅಂತಿಮ ಹಂತದಲ್ಲಿ ಶಾನೆಲ್‌ ಡಾಲೆ ಮತ್ತು ಆ್ಯಫಿ ಫ್ಲೆಚರ್‌ ಅವರ ಉತ್ತಮ ಆಡಿದರು.  ಫ್ಲೆಚರ್‌ ಮತ್ತು ಅನೀಸಾ ಮೊಹಮ್ಮದ್‌ ಮುರಿಯದ 9ನೇ ವಿಕೆಟಿಗೆ 37 ರನ್‌ ಪೇರಿಸಿದ್ದರಿಂದ  ವೆಸ್ಟ್‌ಇಂಡೀಸ್‌ ಮೊತ್ತ 180 ಗಡಿ ದಾಟುವಂತಾಯಿತು.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ಇಂಡೀಸ್‌ 8 ವಿಕೆಟಿಗೆ 183 (ಹೇಲೆ ಮ್ಯಾಥ್ಯೂಸ್‌ 43, ಶಾನೆಲ್‌ ಡಾಲೆ 33, ಆ್ಯಫಿ ಫ್ಲೆಚರ್‌ 36 ಔಟಾಗದೆ, ದೀಪ್ತಿ ಶರ್ಮ 27ಕ್ಕೆ 2, ಪೂನಂ ಯಾದವ್‌ 19ಕ್ಕೆ 2, ಹರ್ಮನ್‌ಪ್ರೀತ್‌ ಕೌರ್‌ 42ಕ್ಕೆ 2); ಭಾರತ 42.3 ಓವರ್‌ಗಳಲ್ಲಿ 3 ವಿಕೆಟಿಗೆ 186 (ಸ್ಮತಿ ಮಂಧನಾ 106 ಔಟಾಗದೆ, ಮಿಥಾಲಿ ರಾಜ್‌ 46).

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.