Cricket World Cup 2023; ಮುಂಬೈನಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆ


Team Udayavani, Nov 2, 2023, 1:34 PM IST

ind-sl

ಮುಂಬೈ: 2011ರ ಏಕದಿನ ವಿಶ್ವಕಪ್ ಫೈನಲಿಸ್ಟ್ ಗಳಾದ ಭಾರತ ಮತ್ತು ಶ್ರೀಲಂಕಾ ತಂಡಗಳು 2023ರ ವಿಶ್ವಕಪ್ ನಲ್ಲಿ ಇಂದು ಮುಖಾಮುಖಿಯಾಗುತ್ತಿದೆ. ಅಂದು ಫೈನಲ್ ಪಂದ್ಯ ನಡೆದಿದ್ದ ಮುಂಬೈನ ವಾಂಖೆಡೆಯಲ್ಲಿ ಇಂದು ಪಂದ್ಯ ಆಯೋಜನೆಯಾಗಿರುವುದು ವಿಶೇಷ.

ಆಡಿದ ಆರೂ ಪಂದ್ಯಗಳನ್ನು ಗೆದ್ದು ಸೆಮಿ ಫೈನಲ್ ಪ್ರವೇಶವನ್ನು ಖಾತ್ರಿ ಪಡಿಸಿಕೊಂಡಿರುವ ಭಾರತ ಸುಸ್ಥಿತಿಯಲ್ಲಿದ್ದರೆ, ಕೇವಲ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಶ್ರೀಲಂಕಾ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ವಾಂಖೆಡೆ ಅಂಗಳದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಕುಸಾಲ್ ಮೆಂಡಿಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.

ಲಂಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಧನಂಜಯ ಡಿಸಿಲ್ವಾ ಬದಲು ದುಶಾನ್ ಹೇಮಂತ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಈ ವಿಶ್ವಕಪ್‌ನಲ್ಲಿ ಶ್ರೀಲಂಕಾದ ನಿರ್ವಹಣೆ ನೀರಸವಾಗಿದೆ. ಗಾಯದ ಸಮಸ್ಯೆ ಮತ್ತು ಪ್ರಮುಖ ಆಟಗಾರರು ಲಭ್ಯವಿಲ್ಲದ ಕಾರಣ ತಂಡ ಶ್ರೇಷ್ಠ ನಿರ್ವಹಣೆ ನೀಡಲು ಒದ್ದಾಡುತ್ತಿದೆ. ತಂಡದ ಸದೀರ ಸಮರ ವಿಕ್ರಮ ಉತ್ತಮ ಫಾರ್ಮ್ನಲ್ಲಿದ್ದು ಆಡಿದ ಆರು ಪಂದ್ಯಗಳಿಂದ 331 ರನ್‌ ಗಳಿಸಿ ದ್ದಾರೆ. ಒಂದು ಶತಕ ಹೊಡೆದಿದ್ದಾರೆ. ಪಾಥುಮ್‌ ನಿಸ್ಸಂಕ ಕೂಡ ಉತ್ತಮ ಫಾರ್ಮ್ನಲ್ಲಿದ್ದು ಗಿಲ್‌ ಬಳಿಕ ವರ್ಷವೊಂದರಲ್ಲಿ ಸಾವಿರ ರನ್‌ ಪೂರ್ತಿಗೊಳಿಸಿದ ಇನ್ನೋರ್ವ ಆಟಗಾರ ಎಂದೆನಿಸಿ ಕೊಂಡಿದ್ದಾರೆ. ತಂಡದ ಬೌಲಿಂಗ್‌ ಅಷ್ಟೊಂದು ತೀಕ್ಷ್ಣವಾಗಿಲ್ಲ.

ತಂಡಗಳು

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಪಾಥುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ವಿ.ಕೀ/ನಾ), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಏಂಜೆಲೊ ಮ್ಯಾಥ್ಯೂಸ್, ದುಶಾನ್ ಹೇಮಂತ, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶನಕ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.