ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ


Team Udayavani, Oct 3, 2023, 3:36 PM IST

ICC World Cup 2023; ವರ್ಣರಂಜಿತ ಉದ್ಘಾಟನಾ ಸಮಾರಂಭ ರದ್ದು? ಯಾಕೆ ಈ ನಿರ್ಧಾರ

ಮುಂಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಇನ್ನು ಕೇವಲ ಎರಡು ದಿನಗಳಲ್ಲಿ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವೆ ಆರಂಭಿಕ ಪಂದ್ಯ ನಡೆಯಲಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ ಬಿಸಿಸಿಐ ನಿರ್ಧರಿಸಿದಂತೆ ಯಾವುದೇ ಉದ್ಘಟನಾ ಸಮಾರಂಭ ನಡೆಯುವುದಿಲ್ಲ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್‌ ನ ಇತ್ತೀಚಿನ ಹಲವು ಆವೃತ್ತಿಗಳಲ್ಲಿ ಆರಂಭಿಕ ಪಂದ್ಯಕ್ಕೂ ಮುನ್ನ ಯಾವುದೇ ಅಧಿಕೃತ ಉದ್ಘಾಟನಾ ಸಮಾರಂಭ ನಡೆಯದಿರುವುದು ಇದೇ ಮೊದಲು.

ಆರಂಭದಲ್ಲಿ ಮೊದಲ ಪಂದ್ಯಕ್ಕೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 4ರಂದು ಅಹಮದಾಬಾದ್ ನಲ್ಲಿ ಅದ್ದೂರಿ ಓಪನಿಂಗ್ ಸೆರಮನಿ ನಡೆಯಲಿದೆ ಎಂದು ಬಿಸಿಸಿಐ ಯೋಜಿಸಿತ್ತು. ಆದರೆ ಇದೀಗ ಕ್ರಿಕೆಟ್ ನ ಮೆಗಾಕೂಟ ಆರಂಭಕ್ಕೆ ಯಾವುದೇ ಅದ್ದೂರಿ ಕಾರ್ಯಕ್ರಮ ಇರುವುದಿಲ್ಲ ಎಂದು ರೇವ್ ಸ್ಪೋರ್ಟ್ಸ್ ವೆಬ್ ಸೈಟ್ ವರದಿ ಮಾಡಿದೆ.

ರಣವೀರ್ ಸಿಂಗ್, ಅರ್ಜಿತ್ ಸಿಂಗ್, ತಮನ್ನಾ ಭಾಟಿಯಾ, ಶ್ರೇಯಾ ಘೋಷಾಲ್ ಮತ್ತು ಆಶಾ ಭೋಂಸ್ಲೆಯಂತಹ ಪ್ರಸಿದ್ಧ ಬಾಲಿವುಡ್ ಸ್ಟಾರ್ ಗಳನ್ನು ಒಳಗೊಂಡಿರುವ ಈ ಸಮಾರಂಭದಲ್ಲಿ ಪಟಾಕಿ ಮತ್ತು ಲೇಸರ್ ಪ್ರದರ್ಶನವನ್ನು ಆಯೋಜಿಸಲು ನಿರ್ಧರಿಸಲಾಗಿತ್ತು. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ಯಾಪ್ಟನ್ಸ್ ಡೇ ಕಾರ್ಯಕ್ರಮದ ನಂತರ ಈ ಕಾರ್ಯಕ್ರಮ ಯೋಜಸಿಲಾಗಿತ್ತು. ಕ್ಯಾಪ್ಟನ್ಸ್ ಡೇ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದ್ದರೂ, ಉದ್ಘಾಟನಾ ಸಮಾರಂಭದ ರದ್ದತಿಗೆ ಸಂಬಂಧಿಸಿದಂತೆ ಯಾವುದೇ ಔಪಚಾರಿಕ ಘೋಷಣೆಯಾಗಿಲ್ಲ. ಆದರೆ ಕ್ಯಾಪ್ಟನ್ಸ್ ಡೇ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ. ಇಲ್ಲಿ ಎಲ್ಲಾ ಹತ್ತು ತಂಡಗಳ ನಾಯಕರು ಭಾಗವಹಿಸಲಿದ್ದಾರೆ.

ಟೂರ್ನಿಯ ಪ್ರಮುಖ ಅಂಶವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್ ಮೈದಾನದಲ್ಲಿ ನಿಗದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಮುಂಚಿತವಾಗಿ ಅಹಮದಾಬಾದ್‌ ನಲ್ಲಿ ಸಮಾರಂಭವನ್ನು ಆಯೋಜಿಸಲು ಬಿಸಿಸಿಐ ಯೋಚಿಸುತ್ತಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.